AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere News: ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸೇತುವೆ ಮೇಲಿಂದ ಹಾರಿ ವ್ಯಕ್ತಿ ಸಾವು, ಪೊಲೀಸರ ಮೇಲೆ ಕೇಳಿಬಂತು ಆರೋಪ

ಪೊಲೀಸರಿಂದ‌ ತಪ್ಪಿಸಿಕೊಳ್ಳಲು ಹೋಗಿ ಸೇತುವೆ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ನಡೆದಿದೆ. ಹರೀಶ್ ಹಳ್ಳಿ (40) ಸಾವನ್ನಪ್ಪಿದ ವ್ಯಕ್ತಿ.

Davanagere News: ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸೇತುವೆ ಮೇಲಿಂದ ಹಾರಿ ವ್ಯಕ್ತಿ ಸಾವು, ಪೊಲೀಸರ ಮೇಲೆ ಕೇಳಿಬಂತು ಆರೋಪ
ಮೃತರ ಕುಟುಂಬಸ್ಥರ ಆಕ್ರೋಶ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 28, 2023 | 9:39 AM

ದಾವಣಗೆರೆ: ಪೊಲೀಸರಿಂದ‌ ತಪ್ಪಿಸಿಕೊಳ್ಳಲು ಹೋಗಿ ಸೇತುವೆ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere )ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ನಡೆದಿದೆ. ಹರೀಶ್ ಹಳ್ಳಿ (40) ಸಾವನ್ನಪ್ಪಿದ ವ್ಯಕ್ತಿ.ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಹರೀಶ್ ಹಳ್ಳಿಯನ್ನ ಪೊಲೀಸರು ವಶಕ್ಕೆ ಪಡೆದು ಕರೆ ತರುವ ವೇಳೆ ದಾವಣಗೆರೆ ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ಪೊಲೀಸ್ ಜೀಪ್​ನಿಂದ ಇಂದು ಬೆಳಿಗ್ಗೆ 2.30ಕ್ಕೆ ತಪ್ಪಿಸಿಕೊಂಡು ಹರೀಶ್ ಹಾರಿದ್ದ. ಬಳಿಕ ತೀವ್ರಗಾಯಗೊಂಡ ಹರೀಶ್​ನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.

ಮಾಹಿತಿ ಹಕ್ಕು ಹೋರಾಟಗಾರನಾಗಿದ್ದ ಹರೀಶ್ ಹಳ್ಳಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ ನಿವಾಸಿಯಾದ ಹರೀಶ್ ಹಳ್ಳಿಯೊಬ್ಬ ಮಾಹಿತಿ ಹಕ್ಕು ಹೋರಾಟಗಾರನಾಗಿದ್ದ. ನಿನ್ನೆ(ಮೇ.27) ನಕಲಿ ದಾಖಲೆ ಸೃಷ್ಠಿಸಿ ಬೇರೊಬ್ಬರ ಸೈಟ್ ತನ್ನ ಹೆಸರಿಗೆ ಮಾಡಿಕೊಂಡ ಆರೋಪ ಎದುರಿಸುತ್ತಿದ್ದ ಹರೀಶ್ ಹಳ್ಳಿಯನ್ನ ಇತನ ಪತ್ನಿಯ ಊರಾದ ಚನ್ನಗಿರಿ ಕಾಕನೂರ ಗ್ರಾಮದಿಂದ ಪೊಲೀಸರು ಕರೆ ತಂದಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಕುಟುಂಬ ಸದಸ್ಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆ ಎದುರು ಹೋರಾಟ ನಡೆಸಿದ್ದಾರೆ.

ಇದನ್ನೂ ಓದಿ:Yadgir New: ಚಲಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಮಹಿಳೆ ಸಾವು

ಎಸ್ ಐ ಹಾಗೂ ಇಬ್ಬರು ಪಿಸಿಗಳ ವಿರುದ್ದ ದೂರು

ಹೌದು ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಸುರೇಶ್​ ಪತ್ನಿಯಿಂದ ಎಸ್ ಐ ಹಾಗೂ ಇಬ್ಬರು ಪಿಸಿಗಳ ವಿರುದ್ದ ದೂರು ನೀಡಿದ್ದಾರೆ. ಪ್ರಕರಣದ ವಿಚಾರವಾಗಿ ತನ್ನ ಪತಿಯನ್ನ ಕರೆದುಕೊಂಡು ಹೋಗಿ ಗಾಂಧಿನಗರ ಪೊಲೀಸ್ ಠಾಣೆಯ ಎಸ್ ಐ ಕೃಷ್ಣಪ್ಪ ಹಾಗೂ ಇಬ್ಬರು ಪಿಸಿಗಳು ಸೇರಿ ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಇನ್ನು ಮಾಹಿತಿ ತಿಳಿದು ಸ್ಥಳಕ್ಕೆ ದಾವಣಗೆರೆ ಎಸ್ಪಿ ಡಾ.ಕೆ.ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ