AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere News: ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸೇತುವೆ ಮೇಲಿಂದ ಹಾರಿ ವ್ಯಕ್ತಿ ಸಾವು, ಪೊಲೀಸರ ಮೇಲೆ ಕೇಳಿಬಂತು ಆರೋಪ

ಪೊಲೀಸರಿಂದ‌ ತಪ್ಪಿಸಿಕೊಳ್ಳಲು ಹೋಗಿ ಸೇತುವೆ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ನಡೆದಿದೆ. ಹರೀಶ್ ಹಳ್ಳಿ (40) ಸಾವನ್ನಪ್ಪಿದ ವ್ಯಕ್ತಿ.

Davanagere News: ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸೇತುವೆ ಮೇಲಿಂದ ಹಾರಿ ವ್ಯಕ್ತಿ ಸಾವು, ಪೊಲೀಸರ ಮೇಲೆ ಕೇಳಿಬಂತು ಆರೋಪ
ಮೃತರ ಕುಟುಂಬಸ್ಥರ ಆಕ್ರೋಶ
ಕಿರಣ್ ಹನುಮಂತ್​ ಮಾದಾರ್
|

Updated on: May 28, 2023 | 9:39 AM

Share

ದಾವಣಗೆರೆ: ಪೊಲೀಸರಿಂದ‌ ತಪ್ಪಿಸಿಕೊಳ್ಳಲು ಹೋಗಿ ಸೇತುವೆ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere )ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ನಡೆದಿದೆ. ಹರೀಶ್ ಹಳ್ಳಿ (40) ಸಾವನ್ನಪ್ಪಿದ ವ್ಯಕ್ತಿ.ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಹರೀಶ್ ಹಳ್ಳಿಯನ್ನ ಪೊಲೀಸರು ವಶಕ್ಕೆ ಪಡೆದು ಕರೆ ತರುವ ವೇಳೆ ದಾವಣಗೆರೆ ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ಪೊಲೀಸ್ ಜೀಪ್​ನಿಂದ ಇಂದು ಬೆಳಿಗ್ಗೆ 2.30ಕ್ಕೆ ತಪ್ಪಿಸಿಕೊಂಡು ಹರೀಶ್ ಹಾರಿದ್ದ. ಬಳಿಕ ತೀವ್ರಗಾಯಗೊಂಡ ಹರೀಶ್​ನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.

ಮಾಹಿತಿ ಹಕ್ಕು ಹೋರಾಟಗಾರನಾಗಿದ್ದ ಹರೀಶ್ ಹಳ್ಳಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ ನಿವಾಸಿಯಾದ ಹರೀಶ್ ಹಳ್ಳಿಯೊಬ್ಬ ಮಾಹಿತಿ ಹಕ್ಕು ಹೋರಾಟಗಾರನಾಗಿದ್ದ. ನಿನ್ನೆ(ಮೇ.27) ನಕಲಿ ದಾಖಲೆ ಸೃಷ್ಠಿಸಿ ಬೇರೊಬ್ಬರ ಸೈಟ್ ತನ್ನ ಹೆಸರಿಗೆ ಮಾಡಿಕೊಂಡ ಆರೋಪ ಎದುರಿಸುತ್ತಿದ್ದ ಹರೀಶ್ ಹಳ್ಳಿಯನ್ನ ಇತನ ಪತ್ನಿಯ ಊರಾದ ಚನ್ನಗಿರಿ ಕಾಕನೂರ ಗ್ರಾಮದಿಂದ ಪೊಲೀಸರು ಕರೆ ತಂದಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಕುಟುಂಬ ಸದಸ್ಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆ ಎದುರು ಹೋರಾಟ ನಡೆಸಿದ್ದಾರೆ.

ಇದನ್ನೂ ಓದಿ:Yadgir New: ಚಲಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಮಹಿಳೆ ಸಾವು

ಎಸ್ ಐ ಹಾಗೂ ಇಬ್ಬರು ಪಿಸಿಗಳ ವಿರುದ್ದ ದೂರು

ಹೌದು ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಸುರೇಶ್​ ಪತ್ನಿಯಿಂದ ಎಸ್ ಐ ಹಾಗೂ ಇಬ್ಬರು ಪಿಸಿಗಳ ವಿರುದ್ದ ದೂರು ನೀಡಿದ್ದಾರೆ. ಪ್ರಕರಣದ ವಿಚಾರವಾಗಿ ತನ್ನ ಪತಿಯನ್ನ ಕರೆದುಕೊಂಡು ಹೋಗಿ ಗಾಂಧಿನಗರ ಪೊಲೀಸ್ ಠಾಣೆಯ ಎಸ್ ಐ ಕೃಷ್ಣಪ್ಪ ಹಾಗೂ ಇಬ್ಬರು ಪಿಸಿಗಳು ಸೇರಿ ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಇನ್ನು ಮಾಹಿತಿ ತಿಳಿದು ಸ್ಥಳಕ್ಕೆ ದಾವಣಗೆರೆ ಎಸ್ಪಿ ಡಾ.ಕೆ.ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ