AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಬಲ್ ಡೇಟಿಂಗ್ ಆ್ಯಪ್​ನಲ್ಲಿ ಭೇಟಿ, ವ್ಯಕ್ತಿಯಿಂದ ಚಿನ್ನ, ನಗದು, ಐಫೋನ್ ಕದ್ದು ಮಹಿಳೆ ಪರಾರಿ

ಇತ್ತೀಚೆಗೆ ಡೇಟಿಂಗ್ ಆ್ಯಪ್​ಗಳ ಸಂಖ್ಯೆ ಹೆಚ್ಚಾಗಿದೆ, ಆ್ಯಪ್​ನಲ್ಲಿ ಸಂಗಾತಿಯನ್ನು ಹುಡುಕುವುದಕ್ಕಿಂತ ಹೆಚ್ಚಾಗಿ ಅಪರಾಧ ಪ್ರಕರಣಗಳೇ ಮುನ್ನೆಲೆಗೆ ಬರುತ್ತಿವೆ, ಕೆಲವರು ಮೋಸ ಮಾಡುವ ದೃಷ್ಟಿಯಿಂದಲೇ ಇಂತಹ ಆ್ಯಪ್​ಗಳಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡುತ್ತಾರೆ. ಈಗ ಅಂಥದ್ದೇ ಘಟನೆಯೊಂದು ಹರ್ಯಾಣದಲ್ಲಿ ನಡೆದಿದೆ. ಮಹಿಳೆಯೊಬ್ಬಳು ವ್ಯಕ್ತಿಗೆ ಮಾದಕ ದ್ರವ್ಯ ಕೊಟ್ಟು ಮೊಬೈಲ್ ಫೋನ್, ಚಿನ್ನಾಭರಣ, 1.78 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾಳೆ.

ಬಂಬಲ್ ಡೇಟಿಂಗ್ ಆ್ಯಪ್​ನಲ್ಲಿ ಭೇಟಿ, ವ್ಯಕ್ತಿಯಿಂದ ಚಿನ್ನ, ನಗದು, ಐಫೋನ್ ಕದ್ದು ಮಹಿಳೆ ಪರಾರಿ
ಆ್ಯಪ್Image Credit source: India Today
ನಯನಾ ರಾಜೀವ್
|

Updated on: Oct 12, 2023 | 1:07 PM

Share

ಇತ್ತೀಚೆಗೆ ಡೇಟಿಂಗ್ ಆ್ಯಪ್​ಗಳ ಸಂಖ್ಯೆ ಹೆಚ್ಚಾಗಿದೆ, ಆ್ಯಪ್​ನಲ್ಲಿ ಸಂಗಾತಿಯನ್ನು ಹುಡುಕುವುದಕ್ಕಿಂತ ಹೆಚ್ಚಾಗಿ ಅಪರಾಧ ಪ್ರಕರಣಗಳೇ ಮುನ್ನೆಲೆಗೆ ಬರುತ್ತಿವೆ, ಕೆಲವರು ಮೋಸ ಮಾಡುವ ದೃಷ್ಟಿಯಿಂದಲೇ ಇಂತಹ ಆ್ಯಪ್​ಗಳಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡುತ್ತಾರೆ. ಈಗ ಅಂಥದ್ದೇ ಘಟನೆಯೊಂದು ಹರ್ಯಾಣದಲ್ಲಿ ನಡೆದಿದೆ. ಮಹಿಳೆಯೊಬ್ಬಳು ವ್ಯಕ್ತಿಗೆ ಮಾದಕ ದ್ರವ್ಯ ಕೊಟ್ಟು ಮೊಬೈಲ್ ಫೋನ್, ಚಿನ್ನಾಭರಣ, 1.78 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾಳೆ.

ಸಂತ್ರಸ್ತ ರೋಹಿತ್ ಗುಪ್ತಾ ಅವರು ನೀಡಿದ ದೂರಿನಲ್ಲಿ ತಾನು ಬಂಬಲ್ ಡೇಟಿಂಗ್ ಆ್ಯಪ್ ಮೂಲಕ ಸಾಕ್ಷಿ ಅಲಿಯಾಸ್ ಪಾಯಲ್ ಎಂಬ ಮಹಿಳೆಯನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ. ಮಹಿಳೆ ತಾನು ದೆಹಲಿಯಿಂದ ಬಂದಿದ್ದು, ಪ್ರಸ್ತುತ ತನ್ನ ಚಿಕ್ಕಮ್ಮನೊಂದಿಗೆ ಗುರುಗ್ರಾಮದಲ್ಲಿ ವಾಸಿಸುತ್ತಿರುವುದಾಗಿ ಹೇಳಿದ್ದಳು.

ಅಕ್ಟೋಬರ್ 1 ರಂದು, ಅವಳು ನನಗೆ ಕರೆ ಮಾಡಿ ನನ್ನನ್ನು ಭೇಟಿಯಾಗಬೇಕೆಂದು ಹೇಳಿದಳು. ರಾತ್ರಿ 10 ಗಂಟೆಯ ಸುಮಾರಿಗೆ, ಸೆಕ್ಟರ್ 47 ರ ಡಾಕ್ಯಾರ್ಡ್ ಬಾರ್ ಬಳಿ ತನ್ನನ್ನು ಕರೆದುಕೊಂಡು ಹೋಗು ಎಂದು ಹೇಳಿದ್ದಳು,ನಾನು ಅವಳನ್ನು ಕರೆದುಕೊಂಡು ನಂತರ ಹತ್ತಿರದ ಅಂಗಡಿಯಿಂದ ಸ್ವಲ್ಪ ಮದ್ಯವನ್ನು ಖರೀದಿಸಿ  ಮನೆಗೆ ಬಂದಿದ್ದೆ.

ಮತ್ತಷ್ಟು ಓದಿ: ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಕೇಸ್: ಸ್ಫೋಟಕ ವಿಚಾರ ಬೆಳಕಿಗೆ

ಮಹಿಳೆ ಐಸ್ ತರಲು ಅಡುಗೆಮನೆಗೆ ಹೋಗುವಂತೆ ಕೇಳಿದಳು, ಆಕೆ ಮದ್ಯಕ್ಕೆ ಬೇರೇನೋ ಮತ್ತಷ್ಟು ಮತ್ತು ಬರುವ ಮದ್ದನ್ನು ಬೆರಕೆ ಮಾಡಿದ್ದಳು. ನಾನು ಅಕ್ಟೋಬರ್ 3 ರಂದು ಬೆಳಗ್ಗೆ ಎದ್ದಾಗ ಮಹಿಳೆ ಅಲ್ಲಿರಲಿಲ್ಲ ಮತ್ತು ನನ್ನ ಚಿನ್ನದ ಸರ, ಐಫೋನ್ 14 ಪ್ರೊ, 10,000 ರೂ ನಗದು, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು ಕಾಣೆಯಾಗಿದ್ದವು ಎಂದು ಹೇಳಿದ್ದಾರೆ.

ತನ್ನ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ 1.78 ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿದ್ದಾಳೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ನೂ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ