Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನರೇಶ್ ಎಂಬ ನರರಾಕ್ಷಸ: 50 ರೂಪಾಯಿಗಾಗಿ ಪುಟ್ಟ ಮಗುವಿನ ಕೊಲೆ..!

Crime News In Kannada: ನರೇಶ್ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಆದರೆ ಸದಾ ಒಂದೊಂದು ಸ್ಥಳ ಬದಲಿಸುತ್ತಿದ್ದ ಆರೋಪಿಯನ್ನು ಬಂಧಿಸುವುದು ಕೂಡ ಸುಲಭವಾಗಿರಲಿಲ್ಲ.

Crime News: ನರೇಶ್ ಎಂಬ ನರರಾಕ್ಷಸ:  50 ರೂಪಾಯಿಗಾಗಿ ಪುಟ್ಟ ಮಗುವಿನ ಕೊಲೆ..!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2021 | 8:49 PM

ಯಾರದೋ ಮೇಲಿನ ಸಿಟ್ಟಿಗೆ, ಇನ್ಯಾರದ್ದೋ ಮೇಲೆ…ಹೌದು, ಗುರುಗ್ರಾವ್​ನ ಈ ಪ್ರಕರಣವು ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಯಾಕೆಂದರೆ ಈ ಘಟನೆಯಲ್ಲಿ ಅಸುನೀಗಿದ್ದು 18 ತಿಂಗಳ ಮಗು. ಆರು ತಿಂಗಳ ಹಿಂದೆ ನಡೆದ ಅಮಾನುಷ ಕೃತ್ಯವನ್ನು ಬೇಧಿಸುವಲ್ಲಿ ಫರಿದಾಬಾದ್​ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂದರೆ ಫೆಬ್ರವರಿಯಲ್ಲಿ ಗುರುಗಾವ್​ನ​ ಫರಿದಾಬಾದ್​ ಸೆಕ್ಟರ್​ನಲ್ಲಿ 22ರ ಹರೆಯದ ನರೇಶ್ ಎಂಬ ಯುವಕ ವಾಸಿಸುತ್ತಿದ್ದ. ನಿರುದ್ಯೋಗಿಯಾಗಿದ್ದ ಆತ ಮಾದಕ ವ್ಯಸಕ್ಕೆ ಒಳಗಾಗಿದ್ದ. ಅದೊಂದು ದಿನ ಪಕ್ಕದ ಮನೆಯ 8 ವರ್ಷದ ಹುಡುಗಿ ಕೈಯ್ಯಲ್ಲಿದ್ದ 50 ರೂ. ಅನ್ನು ನರೇಶ್ ಕಸಿದಿದ್ದ. ಈ ಘಟನೆಯನ್ನು ಅಲ್ಲೇ ಹತ್ತಿರದಲ್ಲಿದ್ದ ಮತ್ತೋರ್ವ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿದ್ದರು. ಈ ವಿಚಾರವಾಗಿ ಜಗಳವಾಗಿತ್ತು.

ಘಟನೆ ನಡೆದು ಒಂದೆರೆಡು ದಿನಗಳ ಕಳೆಯುವುದರೊಳಗೆ ನರೇಶ್ ಮತ್ತೆ ಸಾಕ್ಷಿ ಹೇಳಿದ್ದ ವ್ಯಕ್ತಿಯೊಂದಿಗೆ ಜಗಳಕ್ಕಿಳಿದಿದ್ದ. ಹೀಗೆ ಕಂಡಾಗೆಲ್ಲಾ ಜಗಳ ಮಾಡಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದ. ಈ ವಿಚಾರವಾಗಿ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದ ನರೇಶ್ ಸಂದರ್ಭಕ್ಕಾಗಿ ಕಾಯುತ್ತಿದ್ದನು. ಫೆಬ್ರವರಿ 5 ರಂದು ಸಾಕ್ಷಿ ನುಡಿದಿದ್ದ ವ್ಯಕ್ತಿಯ 18 ತಿಂಗಳ ಮಗು ಮನೆಯ ಬಳಿ ಒಬ್ಬನೇ ಆಡುತ್ತಿರುವುದನ್ನು ನರೇಶ್ ಗಮನಿಸಿದ್ದ.

ಮಗುವನ್ನು ಪುಸಲಾಯಿಸಿ ತನ್ನ ಫ್ಲಾಟ್​ಗೆ ಕರೆದುಕೊಂಡು ಹೋದ ನರೇಶ್, ಬಳಿಕ ದೊಡ್ಡದಾದ ನೀರಿನ ಟ್ಯಾಂಕ್​ನಲ್ಲಿ ಮುಗಿಸಿ ಕೊಲೆ ಮಾಡಿದ್ದ. ಇತ್ತ ಮಗುವಿನ ಪಾಲಕರು ಹುಡುಕಾಟ ಶುರು ಮಾಡಿದರು ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಇದೇ ಸಂದರ್ಭದಲ್ಲಿ ನರೇಶ್ ಪರಾರಿಯಾಗಿದ್ದ.

ನರೇಶ್ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಆದರೆ ಸದಾ ಒಂದೊಂದು ಸ್ಥಳ ಬದಲಿಸುತ್ತಿದ್ದ ಆರೋಪಿಯನ್ನು ಬಂಧಿಸುವುದು ಕೂಡ ಸುಲಭವಾಗಿರಲಿಲ್ಲ. ಇದೀಗ ಮೊಬೈಲ್ ಟ್ರ್ಯಾಕ್ ಮಾಡುವ ಮೂಲಕ 6 ತಿಂಗಳ ಬಳಿಕ ಕೊಲೆಗಡುಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ವೇಳೆ ವಿಚಾರಣೆಗೆ ಒಳಪಡಿಸಿದಾಗ ಟ್ಯಾಂಕ್​ನಲ್ಲಿ ಬಾಯಿ ಮುಚ್ಚಿ ಮುಳುಗಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ಕೊಲೆಗೆ ಕಾರಣ ಅವತ್ತು 50 ರೂ. ಜಗಳ ಎಂದು ಬಾಯಿಬಿಟ್ಟಿದ್ದಾನೆ. ಸದ್ಯ ಆರೋಪಿ ನರೇಶ್​ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ICC Test Rankings: ಟೆಸ್ಟ್ ಬೌಲಿಂಗ್​ ರ‍್ಯಾಂಕಿಂಗ್: ಒಂದೇ ಪಂದ್ಯದಿಂದ 18 ಸ್ಥಾನ ಮೇಲೇರಿದ ಸಿರಾಜ್

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿದು ಹರಕಲು ಬಾಯಿ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: T20 World Cup 2021: 7 ಮಂದಿ ಔಟ್: ಟಿ20 ವಿಶ್ವಕಪ್​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

ಇದನ್ನೂ ಓದಿ: T20 World Cup: ಕೊಹ್ಲಿ ಹುಟ್ಟುಹಬ್ಬದಂದು ಟಿ20 ವಿಶ್ವಕಪ್‌ನಲ್ಲಿ ಭಾರತದ ಎದುರಾಳಿ ಯಾರು?

(Man fights with neighbour for Rs 50, drowns his 18-month-old child to revenge)

ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ