AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನರೇಶ್ ಎಂಬ ನರರಾಕ್ಷಸ: 50 ರೂಪಾಯಿಗಾಗಿ ಪುಟ್ಟ ಮಗುವಿನ ಕೊಲೆ..!

Crime News In Kannada: ನರೇಶ್ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಆದರೆ ಸದಾ ಒಂದೊಂದು ಸ್ಥಳ ಬದಲಿಸುತ್ತಿದ್ದ ಆರೋಪಿಯನ್ನು ಬಂಧಿಸುವುದು ಕೂಡ ಸುಲಭವಾಗಿರಲಿಲ್ಲ.

Crime News: ನರೇಶ್ ಎಂಬ ನರರಾಕ್ಷಸ:  50 ರೂಪಾಯಿಗಾಗಿ ಪುಟ್ಟ ಮಗುವಿನ ಕೊಲೆ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 19, 2021 | 8:49 PM

Share

ಯಾರದೋ ಮೇಲಿನ ಸಿಟ್ಟಿಗೆ, ಇನ್ಯಾರದ್ದೋ ಮೇಲೆ…ಹೌದು, ಗುರುಗ್ರಾವ್​ನ ಈ ಪ್ರಕರಣವು ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಯಾಕೆಂದರೆ ಈ ಘಟನೆಯಲ್ಲಿ ಅಸುನೀಗಿದ್ದು 18 ತಿಂಗಳ ಮಗು. ಆರು ತಿಂಗಳ ಹಿಂದೆ ನಡೆದ ಅಮಾನುಷ ಕೃತ್ಯವನ್ನು ಬೇಧಿಸುವಲ್ಲಿ ಫರಿದಾಬಾದ್​ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂದರೆ ಫೆಬ್ರವರಿಯಲ್ಲಿ ಗುರುಗಾವ್​ನ​ ಫರಿದಾಬಾದ್​ ಸೆಕ್ಟರ್​ನಲ್ಲಿ 22ರ ಹರೆಯದ ನರೇಶ್ ಎಂಬ ಯುವಕ ವಾಸಿಸುತ್ತಿದ್ದ. ನಿರುದ್ಯೋಗಿಯಾಗಿದ್ದ ಆತ ಮಾದಕ ವ್ಯಸಕ್ಕೆ ಒಳಗಾಗಿದ್ದ. ಅದೊಂದು ದಿನ ಪಕ್ಕದ ಮನೆಯ 8 ವರ್ಷದ ಹುಡುಗಿ ಕೈಯ್ಯಲ್ಲಿದ್ದ 50 ರೂ. ಅನ್ನು ನರೇಶ್ ಕಸಿದಿದ್ದ. ಈ ಘಟನೆಯನ್ನು ಅಲ್ಲೇ ಹತ್ತಿರದಲ್ಲಿದ್ದ ಮತ್ತೋರ್ವ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿದ್ದರು. ಈ ವಿಚಾರವಾಗಿ ಜಗಳವಾಗಿತ್ತು.

ಘಟನೆ ನಡೆದು ಒಂದೆರೆಡು ದಿನಗಳ ಕಳೆಯುವುದರೊಳಗೆ ನರೇಶ್ ಮತ್ತೆ ಸಾಕ್ಷಿ ಹೇಳಿದ್ದ ವ್ಯಕ್ತಿಯೊಂದಿಗೆ ಜಗಳಕ್ಕಿಳಿದಿದ್ದ. ಹೀಗೆ ಕಂಡಾಗೆಲ್ಲಾ ಜಗಳ ಮಾಡಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದ. ಈ ವಿಚಾರವಾಗಿ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದ ನರೇಶ್ ಸಂದರ್ಭಕ್ಕಾಗಿ ಕಾಯುತ್ತಿದ್ದನು. ಫೆಬ್ರವರಿ 5 ರಂದು ಸಾಕ್ಷಿ ನುಡಿದಿದ್ದ ವ್ಯಕ್ತಿಯ 18 ತಿಂಗಳ ಮಗು ಮನೆಯ ಬಳಿ ಒಬ್ಬನೇ ಆಡುತ್ತಿರುವುದನ್ನು ನರೇಶ್ ಗಮನಿಸಿದ್ದ.

ಮಗುವನ್ನು ಪುಸಲಾಯಿಸಿ ತನ್ನ ಫ್ಲಾಟ್​ಗೆ ಕರೆದುಕೊಂಡು ಹೋದ ನರೇಶ್, ಬಳಿಕ ದೊಡ್ಡದಾದ ನೀರಿನ ಟ್ಯಾಂಕ್​ನಲ್ಲಿ ಮುಗಿಸಿ ಕೊಲೆ ಮಾಡಿದ್ದ. ಇತ್ತ ಮಗುವಿನ ಪಾಲಕರು ಹುಡುಕಾಟ ಶುರು ಮಾಡಿದರು ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಇದೇ ಸಂದರ್ಭದಲ್ಲಿ ನರೇಶ್ ಪರಾರಿಯಾಗಿದ್ದ.

ನರೇಶ್ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಆದರೆ ಸದಾ ಒಂದೊಂದು ಸ್ಥಳ ಬದಲಿಸುತ್ತಿದ್ದ ಆರೋಪಿಯನ್ನು ಬಂಧಿಸುವುದು ಕೂಡ ಸುಲಭವಾಗಿರಲಿಲ್ಲ. ಇದೀಗ ಮೊಬೈಲ್ ಟ್ರ್ಯಾಕ್ ಮಾಡುವ ಮೂಲಕ 6 ತಿಂಗಳ ಬಳಿಕ ಕೊಲೆಗಡುಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ವೇಳೆ ವಿಚಾರಣೆಗೆ ಒಳಪಡಿಸಿದಾಗ ಟ್ಯಾಂಕ್​ನಲ್ಲಿ ಬಾಯಿ ಮುಚ್ಚಿ ಮುಳುಗಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ಕೊಲೆಗೆ ಕಾರಣ ಅವತ್ತು 50 ರೂ. ಜಗಳ ಎಂದು ಬಾಯಿಬಿಟ್ಟಿದ್ದಾನೆ. ಸದ್ಯ ಆರೋಪಿ ನರೇಶ್​ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ICC Test Rankings: ಟೆಸ್ಟ್ ಬೌಲಿಂಗ್​ ರ‍್ಯಾಂಕಿಂಗ್: ಒಂದೇ ಪಂದ್ಯದಿಂದ 18 ಸ್ಥಾನ ಮೇಲೇರಿದ ಸಿರಾಜ್

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿದು ಹರಕಲು ಬಾಯಿ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: T20 World Cup 2021: 7 ಮಂದಿ ಔಟ್: ಟಿ20 ವಿಶ್ವಕಪ್​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

ಇದನ್ನೂ ಓದಿ: T20 World Cup: ಕೊಹ್ಲಿ ಹುಟ್ಟುಹಬ್ಬದಂದು ಟಿ20 ವಿಶ್ವಕಪ್‌ನಲ್ಲಿ ಭಾರತದ ಎದುರಾಳಿ ಯಾರು?

(Man fights with neighbour for Rs 50, drowns his 18-month-old child to revenge)

ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು