AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ

ದೆಹಲಿಯಲ್ಲಿ ವೃದ್ಧಾಪ್ಯದಿಂದ ಹಾಸಿಗೆ ಹಿಡಿದಿದ್ದ 80 ವರ್ಷದ ಮಹಿಳೆಯ ಮೇಲೆ 2022ರಲ್ಲಿ ಅತ್ಯಾಚಾರ ನಡೆಸಿದ್ದ 30 ವರ್ಷದ ವ್ಯಕ್ತಿಗೆ ನ್ಯಾಯಾಲಯವು 12 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರದಿಂದಾಗಿ ಆ ವೃದ್ಧೆಯ ಮುಖ, ಕೈ ಮತ್ತು ಎದೆಯ ಚರ್ಮ ಸುಲಿದುಹೋಗಿದ್ದು, ದೇಹದಾದ್ಯಂತ ತೀವ್ರ ಗಾಯಗಳಾಗಿತ್ತು.

Crime News: ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 02, 2024 | 8:59 PM

Share

ನವದೆಹಲಿ: 2022ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 80 ವರ್ಷದ ಹಾಸಿಗೆ ಹಿಡಿದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಘಟನೆಯು “ಸಾಮಾಜಿಕ ಮತ್ತು ನೈತಿಕ ಮೌಲ್ಯಗಳಿಗೆ ಹೊಡೆತ” ಎಂದು ನ್ಯಾಯಾಲಯ ತೀರ್ಪು ನೀಡಿದೆ. ತೀಸ್ ಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆಂಚಲ್ ಅವರು ವೃದ್ಧೆಯ ಸಾಕ್ಷ್ಯವನ್ನು ಗಮನಿಸಿದ್ದಾರೆ. ತನ್ನನ್ನು ಬಿಟ್ಟುಬಿಡುವಂತೆ ಆಕೆ ಅತ್ಯಾಚಾರಿಯ ಬಳಿ ಮನವಿ ಮಾಡಿದರೂ ಆತ ಸುಮ್ಮನಾಗಲಿಲ್ಲ. ಆ ವೃದ್ಧೆಯ ಕೈಗಳನ್ನು ಕಟ್ಟಿ ಅವನು ತನ್ನ ಲೈಂಗಿಕ ಕಾಮವನ್ನು ಪೂರೈಸಿಕೊಳ್ಳಲು ಈ ಕೃತ್ಯ ಎಸಗಿದ್ದಾನೆ ಎಂದು ಸಾಕ್ಷಿಗಳು ಸಾಬೀತುಪಡಿಸಿವೆ.

ಈ ಘಟನೆಯ ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮುಖ, ಕೈ ಮತ್ತು ಎದೆಯ ಮೇಲೆ ಗಾಯಗಳಾಗಿರುವುದು ಕಂಡುಬಂದವು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಅಪರಾಧಿಯನ್ನು 30 ವರ್ಷದ ಅಂಕಿತ್ ಅಲಿಯಾಸ್ ಮೊಗ್ಲಿ ಎಂದು ಗುರುತಿಸಲಾಗಿದ್ದು, ಈತ ಅತ್ಯಾಚಾರ, ಮನೆ ಅತಿಕ್ರಮಣ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ.

ಇದನ್ನೂ ಓದಿ: Crime News: ಮದುವೆಯಾಗಲು ಒಪ್ಪದ ಯುವತಿಯ ಕತ್ತು ಸೀಳಿ, ಕೊಚ್ಚಿ ಕೊಂದ ಯುವಕ; ಮಹಾರಾಷ್ಟ್ರದಲ್ಲಿ ಭೀಕರ ಕೊಲೆ

ಪ್ರಾಸಿಕ್ಯೂಷನ್ ಪ್ರಕಾರ, ಅಪರಾಧಿಯು ವೃದ್ಧೆಯ ಮನೆಗೆ ಪ್ರವೇಶಿಸಿದಾಗ ಆಕೆ ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದಳು. ಆತ ವೃದ್ಧೆಯನ್ನು ಥಳಿಸಿ, ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

ಈ ಅತ್ಯಾಚಾರದ ಅಪರಾಧಕ್ಕಾಗಿ ನ್ಯಾಯಾಲಯ ಅಪರಾಧಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿತು. ನ್ಯಾಯಾಲಯವು ಮನೆಗೆ ಅತಿಕ್ರಮಣವಾಗಿ ನುಗ್ಗಿದ್ದಕ್ಕೆ 5 ವರ್ಷ ಜೈಲು ಶಿಕ್ಷೆ, ಕಳ್ಳತನಕ್ಕಾಗಿ 1 ವರ್ಷ ಶಿಕ್ಷೆ ಮತ್ತು ನೋವುಂಟು ಮಾಡಿದ್ದಕ್ಕಾಗಿ 6 ತಿಂಗಳು ಶಿಕ್ಷೆ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ