AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸ್ಫೋಟ ಇಬ್ಬರು ಸಾವು ಪ್ರಕರಣಕ್ಕೆ ಟ್ವಿಸ್ಟ್​, ಅದರಲ್ಲಿ ಬಾಂಬ್ ಇಟ್ಟಿದ್ದು ಯಾರು?

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡು ನವ ವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸ್ಫೋಟ ಇಬ್ಬರು ಸಾವು ಪ್ರಕರಣಕ್ಕೆ ಟ್ವಿಸ್ಟ್​, ಅದರಲ್ಲಿ ಬಾಂಬ್ ಇಟ್ಟಿದ್ದು ಯಾರು?
ಆರೋಪಿ ಸರ್ಜುImage Credit source: NDTV
ನಯನಾ ರಾಜೀವ್
|

Updated on: Apr 05, 2023 | 7:56 AM

Share

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡು ನವ ವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಹೋಂ ಥಿಯೇಟರ್ ಸಿಸ್ಟಂನಲ್ಲಿ ಬಾಂಬ್ ಇಟ್ಟಿದ್ದಾಗಿ ನವ ವಿವಾಹಿತೆಯ ಮಾಜಿ ಪ್ರಿಯಕರ ಒಪ್ಪಿಕೊಂಡಿದ್ದಾರೆ. ಮ್ಯೂಸಿಕ್ ಸಿಸ್ಟಂ ಪ್ಲೇ ಮಾಡುತ್ತಿದ್ದಂತೆ ಸ್ಫೋಟ ಸಂಭವಿಸಿತ್ತು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಹೋಂ ಥಿಯೇಟರ್​ನಲ್ಲಿ ಸ್ಫೋಟಕವನ್ನು ಅಳವಡಿಸಲಾಗಿತ್ತು, ಅದನ್ನು ವಧುವಿನ ಮಾಜಿ ಪ್ರಿಯಕರ ನೀಡಿದ್ದ ಉಡುಗೊರೆಯಾಗಿತ್ತು ಎಂದು ಪೊಲೀಸರಿಂದ ತಿಳಿದುಬಂದಿದೆ. ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ವ್ಯವಸ್ಥೆ ಇರಿಸಲಾಗಿದ್ದ ಕೊಠಡಿಯ ಗೋಡೆಗಳು ಮತ್ತು ಛಾವಣಿ ಕುಸಿದು ಬಿದ್ದಿದೆ. 22 ವರ್ಷದ ಹೇಮೇಂದ್ರ ಮೆರಾವಿ ಎಂದು ಗುರುತಿಸಲಾದ ವರ ವೈರ್ ಅನ್ನು ಎಲೆಕ್ಟ್ರಿಕ್ ಬ್ಯಾಂಡ್‌ಗೆ ಜೋಡಿಸಿದ ನಂತರ ಹೋಮ್ ಥಿಯೇಟರ್ ಸಿಸ್ಟಂ ಅನ್ನು ಸ್ವಿಚ್ ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದೆ.

ಮತ್ತಷ್ಟು ಓದಿ: ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಆರೋಪಿಯನ್ನು ಸರ್ಜು ಎಂದು ಗುರುತಿಸಲಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ., ಪೊಲೀಸರು ಮದುವೆಯ ಸಮಯದಲ್ಲಿ ಪಡೆದ ಉಡುಗೊರೆಗಳ ಪಟ್ಟಿಯನ್ನು ತನಿಖೆ ಮಾಡಲು ಪ್ರಾರಂಭಿಸಿದಾಗ, ಮ್ಯೂಸಿಕ್ ಸಿಸ್ಟಮ್ ವಧುವಿನ ಮಾಜಿ ಪ್ರೇಮಿಯ ಉಡುಗೊರೆ ಎಂಬುದು ತಿಳಿದುಬಂದಿದೆ. ಪ್ರೇಯಸಿ ಬೇರೊಬ್ಬನನ್ನು ಮದುವೆಯಾಗುತ್ತಿದ್ದಾಳೆ ಎನ್ನುವ ಕೋಪದಿಂದ ಆತ ಈ ಕೆಲಸ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ