AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸ್ಫೋಟ ಇಬ್ಬರು ಸಾವು ಪ್ರಕರಣಕ್ಕೆ ಟ್ವಿಸ್ಟ್​, ಅದರಲ್ಲಿ ಬಾಂಬ್ ಇಟ್ಟಿದ್ದು ಯಾರು?

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡು ನವ ವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸ್ಫೋಟ ಇಬ್ಬರು ಸಾವು ಪ್ರಕರಣಕ್ಕೆ ಟ್ವಿಸ್ಟ್​, ಅದರಲ್ಲಿ ಬಾಂಬ್ ಇಟ್ಟಿದ್ದು ಯಾರು?
ಆರೋಪಿ ಸರ್ಜುImage Credit source: NDTV
ನಯನಾ ರಾಜೀವ್
|

Updated on: Apr 05, 2023 | 7:56 AM

Share

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡು ನವ ವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಹೋಂ ಥಿಯೇಟರ್ ಸಿಸ್ಟಂನಲ್ಲಿ ಬಾಂಬ್ ಇಟ್ಟಿದ್ದಾಗಿ ನವ ವಿವಾಹಿತೆಯ ಮಾಜಿ ಪ್ರಿಯಕರ ಒಪ್ಪಿಕೊಂಡಿದ್ದಾರೆ. ಮ್ಯೂಸಿಕ್ ಸಿಸ್ಟಂ ಪ್ಲೇ ಮಾಡುತ್ತಿದ್ದಂತೆ ಸ್ಫೋಟ ಸಂಭವಿಸಿತ್ತು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಹೋಂ ಥಿಯೇಟರ್​ನಲ್ಲಿ ಸ್ಫೋಟಕವನ್ನು ಅಳವಡಿಸಲಾಗಿತ್ತು, ಅದನ್ನು ವಧುವಿನ ಮಾಜಿ ಪ್ರಿಯಕರ ನೀಡಿದ್ದ ಉಡುಗೊರೆಯಾಗಿತ್ತು ಎಂದು ಪೊಲೀಸರಿಂದ ತಿಳಿದುಬಂದಿದೆ. ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ವ್ಯವಸ್ಥೆ ಇರಿಸಲಾಗಿದ್ದ ಕೊಠಡಿಯ ಗೋಡೆಗಳು ಮತ್ತು ಛಾವಣಿ ಕುಸಿದು ಬಿದ್ದಿದೆ. 22 ವರ್ಷದ ಹೇಮೇಂದ್ರ ಮೆರಾವಿ ಎಂದು ಗುರುತಿಸಲಾದ ವರ ವೈರ್ ಅನ್ನು ಎಲೆಕ್ಟ್ರಿಕ್ ಬ್ಯಾಂಡ್‌ಗೆ ಜೋಡಿಸಿದ ನಂತರ ಹೋಮ್ ಥಿಯೇಟರ್ ಸಿಸ್ಟಂ ಅನ್ನು ಸ್ವಿಚ್ ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದೆ.

ಮತ್ತಷ್ಟು ಓದಿ: ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಆರೋಪಿಯನ್ನು ಸರ್ಜು ಎಂದು ಗುರುತಿಸಲಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ., ಪೊಲೀಸರು ಮದುವೆಯ ಸಮಯದಲ್ಲಿ ಪಡೆದ ಉಡುಗೊರೆಗಳ ಪಟ್ಟಿಯನ್ನು ತನಿಖೆ ಮಾಡಲು ಪ್ರಾರಂಭಿಸಿದಾಗ, ಮ್ಯೂಸಿಕ್ ಸಿಸ್ಟಮ್ ವಧುವಿನ ಮಾಜಿ ಪ್ರೇಮಿಯ ಉಡುಗೊರೆ ಎಂಬುದು ತಿಳಿದುಬಂದಿದೆ. ಪ್ರೇಯಸಿ ಬೇರೊಬ್ಬನನ್ನು ಮದುವೆಯಾಗುತ್ತಿದ್ದಾಳೆ ಎನ್ನುವ ಕೋಪದಿಂದ ಆತ ಈ ಕೆಲಸ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ