AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಲ್ಲುಜ್ಜದೇ ಮುತ್ತು ಕೊಡಬೇಡ ಅಂದಿದ್ದಕ್ಕೆ ಪತ್ನಿಯನ್ನೇ ಕೊಂದ..!

Crime News In Kannada: ಈ ಭೀಕರ ಹತ್ಯೆಯ ಬಗ್ಗೆ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಅದರಂತೆ ಅವಿನಾಶ್​ನನ್ನು ಬಂಧಿಸಿರುವ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ.

Crime News: ಹಲ್ಲುಜ್ಜದೇ ಮುತ್ತು ಕೊಡಬೇಡ ಅಂದಿದ್ದಕ್ಕೆ ಪತ್ನಿಯನ್ನೇ ಕೊಂದ..!
Crime News
TV9 Web
| Edited By: |

Updated on: Jun 30, 2022 | 7:51 PM

Share

ಹಲ್ಲುಜ್ಜುವ ವಿಚಾರಕ್ಕೆ ಕೊಲೆ ನಡೆಯುತ್ತಾ? ಭಾರತದಲ್ಲಿ ಹೀಗೂ ನಡೆಯುತ್ತೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಹಲ್ಲುಜ್ಜದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಅವಿನಾಶ್ ಕೊಯಂಬತ್ತೂರಿನ ದೀಪಿಕಾ ಎಂಬವರನ್ನು ವಿವಾಹವಾಗಿದ್ದರು. ಈ ದಂಪತಿಗಳು ಹಲವು ವರ್ಷಗಳಿಂದ ಬೆಂಗಳೂರಿನಲ್ಲೇ ನೆಲೆಸಿದ್ದರು. ಆದರೆ ಎರಡು ತಿಂಗಳ ಹಿಂದೆಯಷ್ಟೇ ಕೇರಳದ ಮನ್ನಾರ್​ಕಾಡ್ ಎಂಬಲ್ಲಿಗೆ ತಮ್ಮ ವಾಸವನ್ನು ಬದಲಿಸಿದ್ದರು.

ಮನ್ನಾರ್​ಕಾಡ್​ನ ಕರಕ್ಕುರಿಸ್ಸಿಯಲ್ಲಿ ವಾಸವಿದ್ದ ಈ ದಂಪತಿಯ ನಡುವೆ ಮಂಗಳವಾರ ಹಲ್ಲುಜ್ಜದ ವಿಷಯಕ್ಕೆ ಜಗಳವಾಗಿದೆ. ಅವಿನಾಶ್ ತನ್ನ ಮಗನಿಗೆ ಹಲ್ಲುಜ್ಜದೆ ಮುತ್ತಿಡಲು ಹೋಗಿದಕ್ಕೆ ಪತ್ನಿ ದೀಪಿಕಾ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದ್ದು, ಕೋಪದ ಭರದಲ್ಲಿ ಅವಿನಾಶ್ ಮಗನ ಎದುರೇ ದೀಪಿಕಾ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಕುತ್ತಿಗೆ, ಕಾಲು ಮತ್ತು ಕೈಗಳ ಮೇಲೆ ಮಚ್ಚು ಬೀಸಿದ್ದಾನೆ.

ಮಗುವಿನ ಕಿರುಚಾಟ ಹಾಗೂ ರಕ್ತ ಮಡುವಿನಲ್ಲಿದ್ದ ದೀಪಿಕಾ ಚೀರಾಟ ಕೇಳಿದ ಅಕ್ಕಪಕ್ಕದವರು ಮನೆಗೆ ಓಡಿ ಬಂದಿದ್ದಾರೆ. ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೀಪಿಕಾಳನ್ನು ಮಗ ಐವಿನ್‌ ಅಳುತ್ತಾ ತಬ್ಬಿಕೊಳ್ಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡು ಬಂದಿದೆ. ನೆರೆ ಹೊರೆಯವರು ಆಗಮಿಸಿದ್ದನ್ನು ನೋಡಿ ಮಚ್ಚಿನಿಂದ ಬೆದರಿಸಿ ಅವಿನಾಶ್ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ.

ಇದನ್ನೂ ಓದಿ
Image
Lady Singham: ಕೊನೆಗೂ ಲೇಡಿ ಸಿಂಗಮ್ ಅರೆಸ್ಟ್​..!
Image
Viral Video: ಒಳಗೆ ಸೇರಿದರೆ ಗುಂಡು…ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ಯುವತಿಯ ರಂಪಾಟ..!
Image
Crime Story: ಪೊಲೀಸ್ ಮಗ, ಎಲ್​ಎಲ್​ಬಿ ಪದವೀಧರ: ಯಾರು ಈ ಡಾನ್ ಲಾರೆನ್ಸ್ ಬಿಷ್ಣೋಯ್?
Image
Crime Story: ಕಿಂಗ್ ಆಫ್ ಕ್ರೈಮ್: ದಾವೂದ್ ಇಬ್ರಾಹಿಂಗೆ ನಡುಕ ಹುಟ್ಟಿಸಿದ್ದ ಸ್ಲಂ ಡಾನ್

ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ತಕ್ಷಣವೇ ದೀಪಿಕಾ ಅವರನ್ನು ಸುಮಾರು 40 ಕಿಮೀ ದೂರದಲ್ಲಿರುವ ಪೆರಿಂತಲ್​ಮನ್ನ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ತೀವ್ರ ರಕ್ತಸ್ರಾವ ಆಗಿದ್ದ ಕಾರಣ ಆಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮತ್ತೊಂದೆಡೆ ಈ ಭೀಕರ ಹತ್ಯೆಯ ಬಗ್ಗೆ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಅದರಂತೆ ಅವಿನಾಶ್​ನನ್ನು ಬಂಧಿಸಿರುವ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ನಡೆದಿರುವ ಘಟನೆಯ ಬಗ್ಗೆ ಅವಿನಾಶ್ ಬಾಯಿಬಿಟ್ಟಿದ್ದಾನೆ. ಬೆಳಗ್ಗೆ ಏಳುತ್ತಿದ್ದಂತೆ 30 ವರ್ಷದ ಅವಿನಾಶ್ ಮಗನಿಗೆ ಮುತ್ತು ಕೊಡಲು ಯತ್ನಿಸಿದ್ದಾನೆ. ಆದರೆ, ಪತಿ ಹಲ್ಲುಜ್ಜದ ಕಾರಣ 28ರ ಹರೆಯದ ದೀಪಿಕಾ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದರಿಂದ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ. ಇದೇ ವೇಳೆ ಕೋಪದಲ್ಲಿ ಕೈಗೆ ಸಿಕ್ಕ ಮಚ್ಚಿನಿಂದ ಹೆಂಡತಿಯನ್ನು ಅವಿನಾಶ್ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ