AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಯಿಂದ ಅತ್ಯಾಚಾರ ಆರೋಪ, ಮನನೊಂದು ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮನೀಶ್ ಎನ್ನುವ 38 ವರ್ಷದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬುವವಳನ್ನು ಪ್ರೀತಿ ಮಾಡುತ್ತಿದ್ದ. ಸ್ವಲ್ಪ ದಿನ ಕಳೆದ ನಂತರ ಆಕೆ ಆತನ ಮೇಲೆ ಅತ್ಯಾಚಾರ ಆರೋಪ ಮಾಡಿ ತನ್ನ ಕುಟುಂಬದವರ ಜತೆ ಸೇರಿ ಬ್ಲ್ಯಾಕ್ ಮೇಲೆ ಮಾಡಲು ಆರಂಭಿಸಿದ್ದಳು.

ಗೆಳತಿಯಿಂದ ಅತ್ಯಾಚಾರ ಆರೋಪ, ಮನನೊಂದು ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ
ಮೃತ ಮನಿಷ್Image Credit source: NDTV
ನಯನಾ ರಾಜೀವ್
|

Updated on: Sep 14, 2023 | 10:00 AM

Share

ನಾಗ್ಪುರ, ಸೆಪ್ಟೆಂಬರ್ 14:  ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮನೀಶ್ ಎನ್ನುವ 38 ವರ್ಷದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬುವವಳನ್ನು ಪ್ರೀತಿ ಮಾಡುತ್ತಿದ್ದ. ಸ್ವಲ್ಪ ದಿನ ಕಳೆದ ನಂತರ ಆಕೆ ಆತನ ಮೇಲೆ ಅತ್ಯಾಚಾರ ಆರೋಪ ಮಾಡಿ ತನ್ನ ಕುಟುಂಬದವರ ಜತೆ ಸೇರಿ ಬ್ಲ್ಯಾಕ್ ಮೇಲೆ ಮಾಡಲು ಆರಂಭಿಸಿದ್ದಳು.

ಮನೀಶ್ ಮನನೊಂದು ಸೆಪ್ಟೆಂಬರ್ 10 ರಂದು ಫೇಸ್​ಬುಕ್ ಲೈವ್ ನಲ್ಲಿ ತನ್ನ ಗೆಳತಿ ಹಾಗೂ ಆಕೆಯ ಕುಟುಂಬದವರು ತನ್ನ ಮೇಲೆ ಅತ್ಯಾಚಾರ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾನೆ, ಮತ್ತವರ ಕುಟುಂಬದವರು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಹಣವನ್ನು ನೀಡಲು ವಿಫಲವಾದರೆ ಆತನ ವಿರುದ್ಧ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆತ ಹೇಳಿದ್ದಾನೆ.

ಸೆಪ್ಟೆಂಬರ್ 6 ರಂದು, ಯುವತಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಾಳೆ ಮತ್ತು ಆಕೆಯ ಕುಟುಂಬ ಸದಸ್ಯರು ಮನೀಷ್ ಜೊತೆ ಓಡಿಹೋದರು ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಪತ್ನಿಯ ನಂಬರ್ ಕೇಳಿದ ಸ್ನೇಹಿತನ ಮೇಲೆ ಹಲ್ಲೆ,‌ ರೌಡಿಶೀಟರ್ ಮನೆಗೆ ದಾಳಿ

ಮದುವೆಯಾಗಿ ಮೂರು ಮಕ್ಕಳ ತಂದೆಯಾಗಿರುವ 38 ವರ್ಷದ ವ್ಯಕ್ತಿ ಕಿರುಕುಳ ತಾಳಲಾರದೆ ನಾಗಪುರದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆ ವ್ಯಕ್ತಿ ತಾನು ಯುವತಿ ಜತೆಗೆ ದೈಹಿಕ ಸಂಪರ್ಕ ಹೊಂದಿಲ್ಲ ಎಂದು ಲೈವ್​ನಲ್ಲಿ ಹೇಳಿದ್ದಾನೆ. ಫೇಸ್‌ಬುಕ್ ಲೈವ್ ವಿಡಿಯೋ ಹೊರಬಿದ್ದ ನಂತರ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.ವ್ಯಕ್ತಿಯ ಶವವನ್ನು ನದಿಯಿಂದ ವಶಪಡಿಸಿಕೊಳ್ಳಲಾಗಿದ್ದು, ನಾಗಪುರದ ಕಲಮನ ಪೊಲೀಸರು ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ