AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಯಿಂದ ಅತ್ಯಾಚಾರ ಆರೋಪ, ಮನನೊಂದು ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮನೀಶ್ ಎನ್ನುವ 38 ವರ್ಷದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬುವವಳನ್ನು ಪ್ರೀತಿ ಮಾಡುತ್ತಿದ್ದ. ಸ್ವಲ್ಪ ದಿನ ಕಳೆದ ನಂತರ ಆಕೆ ಆತನ ಮೇಲೆ ಅತ್ಯಾಚಾರ ಆರೋಪ ಮಾಡಿ ತನ್ನ ಕುಟುಂಬದವರ ಜತೆ ಸೇರಿ ಬ್ಲ್ಯಾಕ್ ಮೇಲೆ ಮಾಡಲು ಆರಂಭಿಸಿದ್ದಳು.

ಗೆಳತಿಯಿಂದ ಅತ್ಯಾಚಾರ ಆರೋಪ, ಮನನೊಂದು ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ
ಮೃತ ಮನಿಷ್Image Credit source: NDTV
ನಯನಾ ರಾಜೀವ್
|

Updated on: Sep 14, 2023 | 10:00 AM

Share

ನಾಗ್ಪುರ, ಸೆಪ್ಟೆಂಬರ್ 14:  ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮನೀಶ್ ಎನ್ನುವ 38 ವರ್ಷದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬುವವಳನ್ನು ಪ್ರೀತಿ ಮಾಡುತ್ತಿದ್ದ. ಸ್ವಲ್ಪ ದಿನ ಕಳೆದ ನಂತರ ಆಕೆ ಆತನ ಮೇಲೆ ಅತ್ಯಾಚಾರ ಆರೋಪ ಮಾಡಿ ತನ್ನ ಕುಟುಂಬದವರ ಜತೆ ಸೇರಿ ಬ್ಲ್ಯಾಕ್ ಮೇಲೆ ಮಾಡಲು ಆರಂಭಿಸಿದ್ದಳು.

ಮನೀಶ್ ಮನನೊಂದು ಸೆಪ್ಟೆಂಬರ್ 10 ರಂದು ಫೇಸ್​ಬುಕ್ ಲೈವ್ ನಲ್ಲಿ ತನ್ನ ಗೆಳತಿ ಹಾಗೂ ಆಕೆಯ ಕುಟುಂಬದವರು ತನ್ನ ಮೇಲೆ ಅತ್ಯಾಚಾರ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾನೆ, ಮತ್ತವರ ಕುಟುಂಬದವರು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಹಣವನ್ನು ನೀಡಲು ವಿಫಲವಾದರೆ ಆತನ ವಿರುದ್ಧ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆತ ಹೇಳಿದ್ದಾನೆ.

ಸೆಪ್ಟೆಂಬರ್ 6 ರಂದು, ಯುವತಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಾಳೆ ಮತ್ತು ಆಕೆಯ ಕುಟುಂಬ ಸದಸ್ಯರು ಮನೀಷ್ ಜೊತೆ ಓಡಿಹೋದರು ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಪತ್ನಿಯ ನಂಬರ್ ಕೇಳಿದ ಸ್ನೇಹಿತನ ಮೇಲೆ ಹಲ್ಲೆ,‌ ರೌಡಿಶೀಟರ್ ಮನೆಗೆ ದಾಳಿ

ಮದುವೆಯಾಗಿ ಮೂರು ಮಕ್ಕಳ ತಂದೆಯಾಗಿರುವ 38 ವರ್ಷದ ವ್ಯಕ್ತಿ ಕಿರುಕುಳ ತಾಳಲಾರದೆ ನಾಗಪುರದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆ ವ್ಯಕ್ತಿ ತಾನು ಯುವತಿ ಜತೆಗೆ ದೈಹಿಕ ಸಂಪರ್ಕ ಹೊಂದಿಲ್ಲ ಎಂದು ಲೈವ್​ನಲ್ಲಿ ಹೇಳಿದ್ದಾನೆ. ಫೇಸ್‌ಬುಕ್ ಲೈವ್ ವಿಡಿಯೋ ಹೊರಬಿದ್ದ ನಂತರ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.ವ್ಯಕ್ತಿಯ ಶವವನ್ನು ನದಿಯಿಂದ ವಶಪಡಿಸಿಕೊಳ್ಳಲಾಗಿದ್ದು, ನಾಗಪುರದ ಕಲಮನ ಪೊಲೀಸರು ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್