AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ: ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ

ರಾಯಚೂರು ಜಿಲ್ಲೆಯ ಮಾನ್ವಿ ಭೀಕರ ಕೊಲೆಯೊಂದಕ್ಕೆ ಸಾಕ್ಷಿಯಾಗಿದೆ. ಅಮವಾಸ್ಯೆಯಂದೇ ಹರಿದ ರಕ್ತದ ಕೋಡಿಗೆ ಇಡೀ ಮಾನ್ವಿ ಪಟ್ಟಣ ಬೆಚ್ಚಿ ಬಿದ್ದಿದೆ. ಇನ್ನು ಕೊಲೆಗೂ ಮುನ್ನ ಆರೋಪಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಮಚ್ಚು ಹಿಡಿದ ಫೋಟೋ ಹಾಕಿದ್ದ. ಕೊಲೆ ಮಾಡಿ ನಂತರ ಪೊಲೀಸರಿಗೆ ಶರಣಾಗಿದ್ದಾನೆ.

ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ: ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
ಹನುಮೇಶ್, ಶಂಕರ್Image Credit source: tv9 kannada
ಭೀಮೇಶ್​​ ಪೂಜಾರ್
| Edited By: |

Updated on: Sep 12, 2026 | 8:25 PM

Share

ರಾಯಚೂರು, ಸೆಪ್ಟೆಂಬರ್​ 12: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಅಮಾವಾಸ್ಯೆಯ ದಿನದಂದೇ  ಹತ್ಯೆಯೊಂದು ನಡೆದಿದ್ದು, ಇಡೀ ಪಟ್ಟಣವೇ ಬೆಚ್ಚಿಬಿದ್ದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಮನೆಯಲ್ಲಿ ಊಟ ಮಾಡುತ್ತಿದ್ದ ಹನುಮೇಶ್ (32) ಎಂಬಾತನನ್ನು ಅದೇ ಏರಿಯಾದ ಶಂಕರ್ ಎಂಬಾತ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಆರೋಪಿ ಖುದ್ದು ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.

ನಡೆದಿದ್ದೇನು?

ಹನುಮೇಶ್ ಅವಿವಾಹಿತನಾಗಿದ್ದು, ಭತ್ತದ ವ್ಯಾಪಾರ ಮಾಡಿಕೊಂಡು ತಂದೆ-ತಾಯಿ ಹಾಗೂ ತಮ್ಮನ ಜೊತೆ ವಾಸವಾಗಿದ್ದ. ಶುಕ್ರವಾರ ಬೆಳಗ್ಗೆ 10:30ರ ಸುಮಾರಿಗೆ ಕುಟುಂಬಸ್ಥರೆಲ್ಲರೂ ಕೆಲಸಕ್ಕೆ ತೆರಳಿದ್ದರಿಂದ ಹನುಮೇಶ್ ಮನೆಯಲ್ಲಿ ಒಬ್ಬನೇ ಇದ್ದ. ಆತ ಊಟ ಮುಗಿಸಿ ಭತ್ತದ ವ್ಯಾಪಾರಕ್ಕೆ ತೆರಳಲು ಸಜ್ಜಾಗುತ್ತಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ ಶಂಕರ್, ಏಕಾಏಕಿ ಹಿಂಬದಿಯಿಂದ ಅಟ್ಯಾಕ್ ಮಾಡಿ ಹನುಮೇಶ್‌ನ ತಲೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

ಅನೈತಿಕ ಸಂಬಂಧದ ಅನುಮಾನವೇ ಕೊಲೆಗೆ ಕಾರಣ

ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಶಂಕರ್ ಹಾಗೂ ಮೃತ ಹನುಮೇಶ್ ಮನೆಗಳು ಅಕ್ಕಪಕ್ಕದಲ್ಲೇ ಇವೆ. ಆರೋಪಿ ಶಂಕರ್‌ನ ಸಹೋದರಿಯೊಂದಿಗೆ ಹನುಮೇಶ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ ಶಂಕರ್‌ನಲ್ಲಿತ್ತು.

ಇದನ್ನೂ ಓದಿ: ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!

ಇದೇ ಕಾರಣಕ್ಕೆ ಆತನ ಮೇಲೆ ದ್ವೇಷ ಸಾಧಿಸುತ್ತಿದ್ದ. ಹನುಮೇಶ್‌ನನ್ನು ಕೊಲೆ ಮಾಡಿರುವುದಾಗಿ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ರಾಯಚೂರು ಎಸ್ಪಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

LIVE TV

ಕೊಲೆಗೂ ಮುನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್

ಇನ್ನು ಹತ್ಯೆ ಮಾಡುವುದಕ್ಕೂ ಮುನ್ನ ಆರೋಪಿ ಶಂಕರ್ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೈಯಲ್ಲಿ ಮಚ್ಚು ಹಿಡಿದುಕೊಂಡು ನಿಂತಿರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದ. ಕೃತ್ಯ ಎಸಗಿದ ಬಳಿಕ ತಾನೇ ನೇರವಾಗಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್: ರಾಯಚೂರಿನಲ್ಲಿ ಮೂವರು ಖತರ್ನಾಕ್ ಸುಲಿಗೆಕೋರರ ಬಂಧನ!

ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಚುರುಕುಗೊಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್