AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಮದುವೆಯಾಗಿದ್ದವನ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಸಿಕ್ತು; ಕೊಲೆ ಮಾಡಿದ್ಯಾರು?-ಆರೋಪಿಗಳಿಗಾಗಿ ಹುಡುಕಾಟ

ಲಾಡು ಹೈಬುರುನ ಕುಟುಂಬದವರನ್ನೆಲ್ಲ ವಿಚಾರಣೆ ನಡೆಸಲು ಪೊಲೀಸರು ಶುರು ಮಾಡಿದರು. ಆದರೆ ಅವರು ಪ್ರಾರಂಭದಲ್ಲಿ ಯಾವುದೇ ಮಾಹಿತಿ ನೀಡಲು, ಮಾತನಾಡಲು ಹಿಂಜರಿದರು. ಕೊನೆಗೆ ಅವನ ತಾಯಿ ನಂದಿಯನ್ನು ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

ಮೂರು ಮದುವೆಯಾಗಿದ್ದವನ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಸಿಕ್ತು; ಕೊಲೆ ಮಾಡಿದ್ಯಾರು?-ಆರೋಪಿಗಳಿಗಾಗಿ ಹುಡುಕಾಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 03, 2022 | 3:29 PM

Share

ಜಾರ್ಖಂಡ್​​ನಲ್ಲಿ ನಕ್ಸಲ್​ ಪೀಡಿತ ಪ್ರದೇಶವೆನಿಸಿಕೊಂಡಿರುವ ಪೂರ್ವ ಸಿಂಗ್​ಭೂಮ್​​ ಜಿಲ್ಲೆಯ ಹಳ್ಳಿಯೊಂದರ ಬಾವಿಯಲ್ಲಿ ಅಸ್ತಿಪಂಜರವೊಂದು ಪತ್ತೆಯಾಗಿತ್ತು. ಈ ಘಟನೆಯ ಜಾಡು ಹಿಡಿದ ಪೊಲೀಸರು ಕೇಸ್​ ಬೇಧಿಸಿದ್ದಾರೆ. ಈ ಅಸ್ತಿಪಂಜರ 35 ವರ್ಷದ ವ್ಯಕ್ತಿಯೊಬ್ಬನದ್ದು, ಈತನ ಅತ್ತೆಯ ಮನೆಯವರೇ (ಪತ್ನಿಯ ತವರು ಮನೆ) ಸೇರಿ ಹತ್ಯೆಗೈದಿದ್ದಾರೆ ಎಂಬ ಭಯಾನಕ ಸತ್ಯ ಬೆಳಕಿಗೆ ಬಂದಿದೆ.  ಮೃತನನ್ನು ಲಾಡು ಹೈಬುರು ಎಂದು ಗುರುತಿಸಲಾಗಿದ್ದು, ಇವನು ಮೂರು ಮದುವೆ ಮಾಡಿಕೊಂಡಿದ್ದೇ ಹತ್ಯೆಗೆ ಕಾರಣ ಎಂದು ಹೇಳಲಾಗಿದೆ.

ಲಾಡು ಹೈಬುರು ಮಾರ್ಚ್​ 16ರಿಂದಲೂ ನಾಪತ್ತೆಯಾಗಿದ್ದ. ಆದರೆ  ಆತನ ಕುಟುಂಬದವರು ಪೊಲೀಸರಿಗೆ ದೂರು ನೀಡಿರಲಿಲ್ಲ.  ಅಷ್ಟರಲ್ಲಿ ಅತ್ತ ಬಾವಿಯಲ್ಲಿ ಅಸ್ತಿಪಂಜರವೂ ಸಿಕ್ಕಿತ್ತು. ಅಲ್ಲಲ್ಲೇ ಗುಸುಗುಸು ಮಾತುಗಳೂ ಶುರುವಾಗಿದ್ದವು. ಅದರ ಆಧಾರದ ಮೇಲೆ ಪೊಲೀಸರು ತನಿಖೆ ಶುರು ಮಾಡಿದಾಗ ಈ ಲಾಡು ಕೊನೇ ದಿನ ತನ್ನ ಮೊದಲ ಪತ್ನಿಯ ಸಹೋದರನ ಬಳಿ ಜಗಳವಾಡಿಕೊಂಡೇ ಹೋಗಿದ್ದ ಎಂಬುದು ಗೊತ್ತಾಯಿತು. ಅಷ್ಟೇ ಅಲ್ಲ, ಲಾಡು ಮೂರನೇ ಮದುವೆಯಾಗಿದ್ದು ಗೊತ್ತಾಗುತ್ತಿದ್ದಂತೆ ಆತ ತುಂಬ ಗಲಾಟೆ ಮಾಡಿದ್ದ ಎಂಬುದು ಗೊತ್ತಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಎಂ.ತಮಿಲ್​ ವನನ್​ ತಿಳಿಸಿದ್ದಾರೆ.

ಲಾಡು ಹೈಬುರುನ ಕುಟುಂಬದವರನ್ನೆಲ್ಲ ವಿಚಾರಣೆ ನಡೆಸಲು ಪೊಲೀಸರು ಶುರು ಮಾಡಿದರು. ಆದರೆ ಅವರು ಪ್ರಾರಂಭದಲ್ಲಿ ಯಾವುದೇ ಮಾಹಿತಿ ನೀಡಲು, ಮಾತನಾಡಲು ಹಿಂಜರಿದರು. ಕೊನೆಗೆ ಅವನ ತಾಯಿ ನಂದಿಯನ್ನು ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ಅವರು ನೀಡಿದ ಕೆಲವು ಹೇಳಿಕೆಯ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದರು.  ಸದ್ಯ ಕೊಲೆಯಾದ ಲಾಡು ಬಾಮೈದ ಮತ್ತು ಮೂವರು ನಾಪತ್ತೆಯಾಗಿದ್ದಾರೆ. ಅದರಲ್ಲೂ ಈತ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಪತ್ತೆಯಾಗಿದೆ. ಈತನ ಮನೆಯಿಂದ ಸುಮಾರು 10 ಕಿಮೀ ದೂರದಲ್ಲಿ ಆ ಸ್ಥಳವಿದೆ. ಹೆಚ್ಚಿನ ವಿಚಾರಣೆ ನಡೆಸಿ, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಕಟಕಟ’ ಜಾನಕಿ ಆಗಿಬಿಟ್ರು ಚೈತ್ರಾ ಆಚಾರ್​; ಕನ್ನಡದ ಟ್ಯಾಲೆಂಟೆಡ್​ ನಟಿಗೆ ಮತ್ತೊಂದು ಅವಕಾಶ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ