Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಮದುವೆಯಾಗಿದ್ದವನ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಸಿಕ್ತು; ಕೊಲೆ ಮಾಡಿದ್ಯಾರು?-ಆರೋಪಿಗಳಿಗಾಗಿ ಹುಡುಕಾಟ

ಲಾಡು ಹೈಬುರುನ ಕುಟುಂಬದವರನ್ನೆಲ್ಲ ವಿಚಾರಣೆ ನಡೆಸಲು ಪೊಲೀಸರು ಶುರು ಮಾಡಿದರು. ಆದರೆ ಅವರು ಪ್ರಾರಂಭದಲ್ಲಿ ಯಾವುದೇ ಮಾಹಿತಿ ನೀಡಲು, ಮಾತನಾಡಲು ಹಿಂಜರಿದರು. ಕೊನೆಗೆ ಅವನ ತಾಯಿ ನಂದಿಯನ್ನು ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

ಮೂರು ಮದುವೆಯಾಗಿದ್ದವನ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಸಿಕ್ತು; ಕೊಲೆ ಮಾಡಿದ್ಯಾರು?-ಆರೋಪಿಗಳಿಗಾಗಿ ಹುಡುಕಾಟ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 03, 2022 | 3:29 PM

ಜಾರ್ಖಂಡ್​​ನಲ್ಲಿ ನಕ್ಸಲ್​ ಪೀಡಿತ ಪ್ರದೇಶವೆನಿಸಿಕೊಂಡಿರುವ ಪೂರ್ವ ಸಿಂಗ್​ಭೂಮ್​​ ಜಿಲ್ಲೆಯ ಹಳ್ಳಿಯೊಂದರ ಬಾವಿಯಲ್ಲಿ ಅಸ್ತಿಪಂಜರವೊಂದು ಪತ್ತೆಯಾಗಿತ್ತು. ಈ ಘಟನೆಯ ಜಾಡು ಹಿಡಿದ ಪೊಲೀಸರು ಕೇಸ್​ ಬೇಧಿಸಿದ್ದಾರೆ. ಈ ಅಸ್ತಿಪಂಜರ 35 ವರ್ಷದ ವ್ಯಕ್ತಿಯೊಬ್ಬನದ್ದು, ಈತನ ಅತ್ತೆಯ ಮನೆಯವರೇ (ಪತ್ನಿಯ ತವರು ಮನೆ) ಸೇರಿ ಹತ್ಯೆಗೈದಿದ್ದಾರೆ ಎಂಬ ಭಯಾನಕ ಸತ್ಯ ಬೆಳಕಿಗೆ ಬಂದಿದೆ.  ಮೃತನನ್ನು ಲಾಡು ಹೈಬುರು ಎಂದು ಗುರುತಿಸಲಾಗಿದ್ದು, ಇವನು ಮೂರು ಮದುವೆ ಮಾಡಿಕೊಂಡಿದ್ದೇ ಹತ್ಯೆಗೆ ಕಾರಣ ಎಂದು ಹೇಳಲಾಗಿದೆ.

ಲಾಡು ಹೈಬುರು ಮಾರ್ಚ್​ 16ರಿಂದಲೂ ನಾಪತ್ತೆಯಾಗಿದ್ದ. ಆದರೆ  ಆತನ ಕುಟುಂಬದವರು ಪೊಲೀಸರಿಗೆ ದೂರು ನೀಡಿರಲಿಲ್ಲ.  ಅಷ್ಟರಲ್ಲಿ ಅತ್ತ ಬಾವಿಯಲ್ಲಿ ಅಸ್ತಿಪಂಜರವೂ ಸಿಕ್ಕಿತ್ತು. ಅಲ್ಲಲ್ಲೇ ಗುಸುಗುಸು ಮಾತುಗಳೂ ಶುರುವಾಗಿದ್ದವು. ಅದರ ಆಧಾರದ ಮೇಲೆ ಪೊಲೀಸರು ತನಿಖೆ ಶುರು ಮಾಡಿದಾಗ ಈ ಲಾಡು ಕೊನೇ ದಿನ ತನ್ನ ಮೊದಲ ಪತ್ನಿಯ ಸಹೋದರನ ಬಳಿ ಜಗಳವಾಡಿಕೊಂಡೇ ಹೋಗಿದ್ದ ಎಂಬುದು ಗೊತ್ತಾಯಿತು. ಅಷ್ಟೇ ಅಲ್ಲ, ಲಾಡು ಮೂರನೇ ಮದುವೆಯಾಗಿದ್ದು ಗೊತ್ತಾಗುತ್ತಿದ್ದಂತೆ ಆತ ತುಂಬ ಗಲಾಟೆ ಮಾಡಿದ್ದ ಎಂಬುದು ಗೊತ್ತಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಎಂ.ತಮಿಲ್​ ವನನ್​ ತಿಳಿಸಿದ್ದಾರೆ.

ಲಾಡು ಹೈಬುರುನ ಕುಟುಂಬದವರನ್ನೆಲ್ಲ ವಿಚಾರಣೆ ನಡೆಸಲು ಪೊಲೀಸರು ಶುರು ಮಾಡಿದರು. ಆದರೆ ಅವರು ಪ್ರಾರಂಭದಲ್ಲಿ ಯಾವುದೇ ಮಾಹಿತಿ ನೀಡಲು, ಮಾತನಾಡಲು ಹಿಂಜರಿದರು. ಕೊನೆಗೆ ಅವನ ತಾಯಿ ನಂದಿಯನ್ನು ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ಅವರು ನೀಡಿದ ಕೆಲವು ಹೇಳಿಕೆಯ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದರು.  ಸದ್ಯ ಕೊಲೆಯಾದ ಲಾಡು ಬಾಮೈದ ಮತ್ತು ಮೂವರು ನಾಪತ್ತೆಯಾಗಿದ್ದಾರೆ. ಅದರಲ್ಲೂ ಈತ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಪತ್ತೆಯಾಗಿದೆ. ಈತನ ಮನೆಯಿಂದ ಸುಮಾರು 10 ಕಿಮೀ ದೂರದಲ್ಲಿ ಆ ಸ್ಥಳವಿದೆ. ಹೆಚ್ಚಿನ ವಿಚಾರಣೆ ನಡೆಸಿ, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಕಟಕಟ’ ಜಾನಕಿ ಆಗಿಬಿಟ್ರು ಚೈತ್ರಾ ಆಚಾರ್​; ಕನ್ನಡದ ಟ್ಯಾಲೆಂಟೆಡ್​ ನಟಿಗೆ ಮತ್ತೊಂದು ಅವಕಾಶ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು