AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಪ್ ಚಹಾ ಕೊಡಲಿಲ್ಲ ಅಂತಾ ಸಹೋದರನನ್ನೇ ಕೊಚ್ಚಿ ಕೊಂದ ಕ್ರೂರಿ!

ಯಾದಗಿರಿ: ಆಸ್ತಿಗಾಗಿ ಅದೆಷ್ಟೋ ದಾಯಾದಿಗಳ ಮಧ್ಯೆ ಕಲಹ ನಡೆದಿದೆ. ಇದೂ ಅಷ್ಟೇ.. ದಾಯಾದಿಗಳ ಕಲಹವೇ. ಆದ್ರೆ ಕೊಲೆ ನಡೆದಿದ್ದು ಕೇವಲ ಒಂದು ಕಪ್ ಟೀಗಾಗಿ. ಇಷ್ಟಕ್ಕೂ ಇಲ್ಲಿ ಕೊಲೆಯಾಗಿದ್ದು ನಾಗರಾಜ್. ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಕಾಡಮಗೇರ ಗ್ರಾಮದ ನಿವಾಸಿ. ಬಾಲ್ಯದಲ್ಲೇ ತಂದೆ ಕಳೆದುಕೊಂಡಿದ್ದ ನಾಗರಾಜ್, ಸಣ್ಣದೊಂದು ಟೀ ಅಂಗಡಿ ಇಟ್ಕೊಂಡು ತಾಯಿಯೊಂದಿಗೆ ಜೀವನ ಸಾಗಿಸುತ್ತಿದ್ದ. ಒಂದು ಕಪ್ ಟೀಗಾಗಿ ಮರ್ಡರ್​: ನಿನ್ನೆ ಮಧ್ಯಾಹ್ನ ಮನೆ ಮುಂದಿನ ಮಂಚದ ಮೇಲೆ ಮಲಗಿದ್ದ. ಇದೇ ಹೊತ್ತಿಗೆ ಎಂಟ್ರಿ ಕೊಟ್ಟಿದ್ದೇ […]

ಒಂದು ಕಪ್ ಚಹಾ ಕೊಡಲಿಲ್ಲ ಅಂತಾ ಸಹೋದರನನ್ನೇ ಕೊಚ್ಚಿ ಕೊಂದ ಕ್ರೂರಿ!
ಸಾಧು ಶ್ರೀನಾಥ್​
|

Updated on:Feb 18, 2020 | 2:05 PM

Share

ಯಾದಗಿರಿ: ಆಸ್ತಿಗಾಗಿ ಅದೆಷ್ಟೋ ದಾಯಾದಿಗಳ ಮಧ್ಯೆ ಕಲಹ ನಡೆದಿದೆ. ಇದೂ ಅಷ್ಟೇ.. ದಾಯಾದಿಗಳ ಕಲಹವೇ. ಆದ್ರೆ ಕೊಲೆ ನಡೆದಿದ್ದು ಕೇವಲ ಒಂದು ಕಪ್ ಟೀಗಾಗಿ. ಇಷ್ಟಕ್ಕೂ ಇಲ್ಲಿ ಕೊಲೆಯಾಗಿದ್ದು ನಾಗರಾಜ್. ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಕಾಡಮಗೇರ ಗ್ರಾಮದ ನಿವಾಸಿ. ಬಾಲ್ಯದಲ್ಲೇ ತಂದೆ ಕಳೆದುಕೊಂಡಿದ್ದ ನಾಗರಾಜ್, ಸಣ್ಣದೊಂದು ಟೀ ಅಂಗಡಿ ಇಟ್ಕೊಂಡು ತಾಯಿಯೊಂದಿಗೆ ಜೀವನ ಸಾಗಿಸುತ್ತಿದ್ದ.

ಒಂದು ಕಪ್ ಟೀಗಾಗಿ ಮರ್ಡರ್​: ನಿನ್ನೆ ಮಧ್ಯಾಹ್ನ ಮನೆ ಮುಂದಿನ ಮಂಚದ ಮೇಲೆ ಮಲಗಿದ್ದ. ಇದೇ ಹೊತ್ತಿಗೆ ಎಂಟ್ರಿ ಕೊಟ್ಟಿದ್ದೇ ಈ ಭೂಪ ಸಾಯಿಬಣ್ಣ. ಸಂಬಂಧದಲ್ಲಿ ದೊಡ್ಡಪ್ಪನ ಮಗ. ಅಂದ್ರೆ ಸಹೋದರನಾಗಬೇಕು. ಒಂದು ಕಪ್ ಟೀ ಕೊಡು ಅಂತಾ ನಾಗರಾಜ್​ಗೆ ಕೇಳಿದ್ದಾನೆ. ಆದ್ರೆ, ನಾಗರಾಜ್​ ಕೊಡಲ್ಲ ಅಂದಿದ್ದಾನೆ. ಇಷ್ಟಕ್ಕೆ ರೊಚ್ಚಿಗೆದ್ದ ಸಾಯಿಬಣ್ಣ, ಮಲಗಿದ್ದ ನಾಗರಾಜ್ ಮೇಲೆರಗಿದ್ದಾನೆ. ನೋಡ ನೋಡ್ತಿದ್ದಂತೆ ಕೊಡಲಿಯಿಂದ ಕೊಚ್ಚಿ ಕೊಲೆಗಿದ್ದಾನೆ.

ಇನ್ನು, ಸಾಯಿಬಣ್ಣ ಆಗಾಗ ಬಂದು ಟೀ ಕುಡಿದು ದುಡ್ಡು ಕೊಡದೇ ಹೋಗ್ತಿದ್ದನಂತೆ. ಕೇಳಿದ್ರೆ ಅಕೌಂಟ್​ಗೆ ಹಚ್ಚು ಅಂತಾ ಹೇಳ್ತಿದ್ದನಂತೆ. ನಿನ್ನೆಯೂ ಪುಕ್ಸಟ್ಟೆ ಟೀ ಕೇಳಿದ್ದಕ್ಕೆ ನಾಗರಾಜ್ ಕೊಡಲ್ಲ ಅಂದಿದ್ದಾನೆ. ಅಷ್ಟಕ್ಕೆ ಈ ಸಾಬಣ್ಣ ಅಟ್ಯಾಕ್ ಮಾಡಿದ್ದಾನೆ. ಡೆಡ್ಲಿ ಹಲ್ಲೆ ಬಳಿಕ ನಾಗರಾಜ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡ್ತಿದ್ದ. ಜೀವ ಇದೆ ಅಂತಾ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ರು. ಆದ್ರೆ, ಆದಾಗಲೇ ನಾಗರಾಜ್ ಪ್ರಾಣಬಿಟ್ಟಿದ್ದ.

ಸುದ್ದಿ ತಿಳಿದ ವಡಗೇರ ಪೊಲೀಸರು ಸ್ಥಳಕ್ಕೆ ಬಂದು ಆರೋಪಿ ಸಾಯಿಬಣ್ಣನನ್ನು ಬಂಧಿಸಿದ್ರು. ಇನ್ನು, ಆರೋಪಿ ಸಾಯಿಬಣ್ಣ ಮಾನಸಿಕ ಅಸ್ವಸ್ಥ ಅಂತಾ ಗ್ರಾಮಸ್ಥರು ಹಾಗೂ ಸಂಬಂಧಿಕರು ಹೇಳ್ತಿದ್ದಾರೆ. ಅದೇನೆ ಇರಲಿ, ಒಂದು ಕಪ್ ಟೀ ಕೊಡದಿದ್ದಕ್ಕೆ ಈ ಕ್ರೂರಿ ತನ್ನ ಸಹೋದರನ ಹೆಣ ಕೆಡವಿದ್ದು ನಿಜಕ್ಕೂ ಘೋರ ದುರಂತ.

Published On - 12:54 pm, Tue, 18 February 20

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ