AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಹೆಂಡತಿಯೇ ಸುಪಾರಿ ನೀಡಿದ ಶಂಕೆ

ಎರಡು ತಿಂಗಳಿನಿಂದ ಇಬ್ಬರ ನಡುವೆ ಪ್ರತಿನಿತ್ಯ ಗಲಾಟೆಗಳಾಗುತ್ತಿದ್ದವು. ಎಷ್ಟೋ ಬಾರಿ ಗಲಾಟೆ ತಾರಕಕ್ಕೆ ಹೋಗುತ್ತಿದ್ದ ಕಾರಣ ಎರಡು, ಮೂರು ಸಲ ಇಬ್ಬರಿಗೂ ಪೊಲೀಸರೇ ಎಚ್ಚರಿಕೆ ನೀಡಿದ್ದರು. ಆದರೂ, ಮನೆ ಬಳಿ ಗಲಾಟೆ ಆಗುತ್ತಿತ್ತು. ಇದರಿಂದಾಗಿ ಬೇಸತ್ತ ಎರಡನೇ ಹೆಂಡತಿ ಸುಪಾರಿ ನೀಡಿ ಕೊಲೆ ಮಾಡಿಸಿರಬಹುದು ಎಂದು ಅನುಮಾನಿಸಲಾಗುತ್ತಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಹೆಂಡತಿಯೇ ಸುಪಾರಿ ನೀಡಿದ ಶಂಕೆ
ಹತ್ಯೆಯಾದ ವ್ಯಕ್ತಿ
TV9 Web
| Edited By: |

Updated on: Jul 03, 2021 | 7:25 AM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ಆಗಿದೆ. ಕಾವಲ್​ಭೈರಸಂದ್ರದ ಅಂಬೇಡ್ಕರ್ ಕಾಲೇಜು ಬಳಿ ದುಷ್ಕೃತ್ಯ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೃಷ್ಣಮೂರ್ತಿ(30) ಎನ್ನುವವರನ್ನು ನಿರ್ದಯವಾಗಿ ಕೊಲೆ ಮಾಡಲಾಗಿದೆ. ಟೈಲ್ಸ್​ ಕೆಲಸ ಮಾಡುತ್ತಿದ್ದ ಕೃಷ್ಣಮೂರ್ತಿ ಮೊದಲ ಹೆಂಡತಿಯನ್ನು ತೊರೆದು ಮತ್ತೊಂದು ಮದುವೆಯಾಗಿದ್ದರು. ಆದರೆ, ಮದ್ಯದ ಅಮಲಲ್ಲಿ ಎರಡನೇ ಹೆಂಡತಿಯ ಜತೆಗೂ ಕಿರಿಕಿರಿ ಮಾಡಿಕೊಂಡಿದ್ದರು. ನಿತ್ಯವೂ ಮದ್ಯ ಸೇವಿಸಿ ಮನೆಯ ಬಳಿ ಬಂದು ಗಲಾಟೆ ಮಾಡುತ್ತಿದ್ದ ಕಾರಣ ಅದರಿಂದ ಬೇಸತ್ತ ಎರಡನೇ ಹೆಂಡತಿಯೇ ಕೊಲೆ ಮಾಡಿಸಿದರಾ ಎಂಬ ಶಂಕೆ ಇದೀಗ ವ್ಯಕ್ತವಾಗುತ್ತಿದೆ.

ನಿತ್ಯವೂ ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಕೃಷ್ಣಮೂರ್ತಿ, ಎರಡನೇ ಹೆಂಡತಿ ಜತೆಗೆ ಅಷ್ಟೇನು ಉತ್ತಮ ಸಂಬಂಧ ಹೊಂದಿರಲಿಲ್ಲ. ಎರಡು ತಿಂಗಳಿನಿಂದ ಇಬ್ಬರ ನಡುವೆ ಪ್ರತಿನಿತ್ಯ ಗಲಾಟೆಗಳಾಗುತ್ತಿದ್ದವು. ಎಷ್ಟೋ ಬಾರಿ ಗಲಾಟೆ ತಾರಕಕ್ಕೆ ಹೋಗುತ್ತಿದ್ದ ಕಾರಣ ಎರಡು, ಮೂರು ಸಲ ಇಬ್ಬರಿಗೂ ಪೊಲೀಸರೇ ಎಚ್ಚರಿಕೆ ನೀಡಿದ್ದರು. ಆದರೂ, ಮನೆ ಬಳಿ ಗಲಾಟೆ ಆಗುತ್ತಿತ್ತು. ಇದರಿಂದಾಗಿ ಬೇಸತ್ತ ಎರಡನೇ ಹೆಂಡತಿ ಸುಪಾರಿ ನೀಡಿ ಕೊಲೆ ಮಾಡಿಸಿರಬಹುದು ಎಂದು ಅನುಮಾನಿಸಲಾಗುತ್ತಿದೆ.

ಕೃಷ್ಣಮೂರ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈಯಲಾಗಿದ್ದು, ಕಾವಲ್​ಭೈರಸಂದ್ರದ ಅಂಬೇಡ್ಕರ್ ಕಾಲೇಜು ಮುಂಭಾಗದಲ್ಲಿಯೇ ದುರ್ಘಟನೆ ಸಂಭವಿಸಿದೆ. 2-3 ಜನ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎನ್ನಲಾಗಿದ್ದು, ಡಿ.ಜೆ.ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡನೇ ಹೆಂಡತಿ ಮೇಲೆಯೇ ಅನುಮಾನ ದಟ್ಟವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬರೋಬ್ಬರಿ 300 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಕ್ಕೆ ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನ ನೆಹರು ಪೋರ್ಟ್ ಟ್ರಸ್ಟ್​ನಲ್ಲಿ ಬರೋಬ್ಬರಿ 300 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಪತ್ತೆಯಾಗಿದೆ. ಜವಾಹರ್‌ಲಾಲ್ ನೆಹರು ಪೋರ್ಟ್ ಟ್ರಸ್ಟ್‌ನಲ್ಲಿ ಮಾದಕ ವಸ್ತು ಸಿಕ್ಕಿದ್ದು, ಒಟ್ಟು 290 ಕೆಜಿ ತೂಕದ ಹೆರಾಯಿನ್​ ಲಭ್ಯವಾಗಿದೆ. ಅದರ ಒಟ್ಟು ಮೌಲ್ಯ ಸುಮಾರು 300 ಕೋಟಿ ರೂಪಾಯಿ ಎನ್ನಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದ ಡಿಆರ್‌ಐ ಅಧಿಕಾರಿಗಳು ಹೆಚ್ಚಿನ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Rekha Kadiresh: ರೇಖಾ ಕದಿರೇಶ್ ಕೊಲೆ ಪ್ರಕರಣದ ಆಘಾತಕಾರಿ ಮಾಹಿತಿ, ಹಂತಕರು ಒಟ್ಟು ಮೂರು ಹತ್ಯೆಗೆ ಸ್ಕೆಚ್​ ಹಾಕಿದ್ದರಂತೆ! 

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!