AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ: ಐವರು ವಶಕ್ಕೆ

ರಾಗಿಮನಗಡ್ಡದಲ್ಲಿ ಪಟಾಕಿ ಹಚ್ಚುವ ವಿಚಾರವಾಗಿ ಕೊಲೆ ನಡೆದಿರುವಂತಹ ಘಟನೆ ನಡೆದಿದೆ. ಪಟಾಕಿ ಹೊಡೆಯುವುದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದು, ಪರಸ್ಪರ ದೂರು ದಾಖಲಾಗಿದೆ.

ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ: ಐವರು ವಶಕ್ಕೆ
ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ: ಐವರು ವಶಕ್ಕೆ
ಭೀಮೇಶ್​​ ಪೂಜಾರ್
| Edited By: |

Updated on: Nov 01, 2024 | 3:32 PM

Share

ರಾಯಚೂರು, ನವೆಂಬರ್​ 01: ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ (death) ಮಾಡಿರುವಂತಹ ಘಟನೆ ನಗರದ ರಾಗಿಮನಗಡ್ಡದಲ್ಲಿ ನಡೆದಿದೆ. ನರಸಿಂಹಲು(32) ಮೃತ ವ್ಯಕ್ತಿ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪರಸ್ಪರ ಕೇಸ್ ದಾಖಲಾಗಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಗಿಮನಗಡ್ಡದಲ್ಲಿ ಕಾರ್ನರ್ ಬಳಿ ಮನೆ ಹೊಂದಿರುವ ಮೃತ ನರಸಿಂಹ, ನಿನ್ನೆ ರಾತ್ರಿ ರಸ್ತೆಯಲ್ಲಿ ಅದೇ ಏರಿಯಾದ ಹುಡುಗರು‌‌ ಪಟಾಕಿ ಹೊಡೆಯುತ್ತಿದ್ದರು. ಆಗ ಯಾಕೆ ಪಟಾಕಿ ಹೊಡೆಯುತ್ತಿದ್ದಿರಿ ಅಂತ ನರಸಿಂಹ ಪ್ರಶ್ನಿಸಿದ್ದಾರೆ. ಆಗ ಏರಿಯಾ ಹುಡುಗರು ಮಾತು ಕೇಳದ ಹಿನ್ನೆಲೆ ನರೇಶ್, ಪ್ರವೀಣ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಆಗ ಹಲ್ಲೆಗೊಳಗಾದ ಯುವಕರು ಹಾಗೂ ಅವರ ಕಡೆಯವರಿಂದ ನರಸಿಂಹನ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಲಕ್ಷ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ: ಓರ್ವ ಬಂಧನ

ಮೃತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿಲ್ಲ. ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ಸ್ಪಷ್ಟನೆ ನೀಡಲಾಗಿದೆ. ಆಗ ಹಲ್ಲೆಗೊಳಗಾದ ಕಡೆಯವರಿಂದ ನರಸಿಂಹಲುನನ್ನ ಎಳೆತಂದು ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಇತ್ತ ಮೃತನ ವಿರುದ್ಧವೂ ಹಲ್ಲೆಗೊಳಗಾದವರಿಂದ ಕೌಂಟರ್ ಕೇಸ್ ದಾಖಲಿಸಿದ್ದಾರೆ.

ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವು

ಶಿವಮೊಗ್ಗ: ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದಲ್ಲಿ ಅ.24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ಮಗು.

ಕಳೆದ ವಾರ ರಾಜೇಶ್ ಅವರ ನೆರೆಮನೆ ನಿವಾಸಿ ಮೃತಪಟ್ಟಿದ್ದರು. ಹೀಗಾಗಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ರೆಡಿ ಮಾಡಿಟ್ಟಿದ್ದರು. ಟೀ ಪಾತ್ರೆಯನ್ನು ಮೈಮೇಲೆ ಬೀಳಿಸಿಕೊಂಡು ಮಗು ಗಾಯಗೊಂಡಿತ್ತು.

ಇದನ್ನೂ ಓದಿ: ಉಡುಪಿ ಬಾಲಕೃಷ್ಣ ಹತ್ಯೆ: ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

ಗಾಯಗೊಂಡ ಮಗುವಿಗೆ ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ