AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ: ಐವರು ವಶಕ್ಕೆ

ರಾಗಿಮನಗಡ್ಡದಲ್ಲಿ ಪಟಾಕಿ ಹಚ್ಚುವ ವಿಚಾರವಾಗಿ ಕೊಲೆ ನಡೆದಿರುವಂತಹ ಘಟನೆ ನಡೆದಿದೆ. ಪಟಾಕಿ ಹೊಡೆಯುವುದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದು, ಪರಸ್ಪರ ದೂರು ದಾಖಲಾಗಿದೆ.

ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ: ಐವರು ವಶಕ್ಕೆ
ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ: ಐವರು ವಶಕ್ಕೆ
ಭೀಮೇಶ್​​ ಪೂಜಾರ್
| Edited By: |

Updated on: Nov 01, 2024 | 3:32 PM

Share

ರಾಯಚೂರು, ನವೆಂಬರ್​ 01: ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ (death) ಮಾಡಿರುವಂತಹ ಘಟನೆ ನಗರದ ರಾಗಿಮನಗಡ್ಡದಲ್ಲಿ ನಡೆದಿದೆ. ನರಸಿಂಹಲು(32) ಮೃತ ವ್ಯಕ್ತಿ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪರಸ್ಪರ ಕೇಸ್ ದಾಖಲಾಗಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಗಿಮನಗಡ್ಡದಲ್ಲಿ ಕಾರ್ನರ್ ಬಳಿ ಮನೆ ಹೊಂದಿರುವ ಮೃತ ನರಸಿಂಹ, ನಿನ್ನೆ ರಾತ್ರಿ ರಸ್ತೆಯಲ್ಲಿ ಅದೇ ಏರಿಯಾದ ಹುಡುಗರು‌‌ ಪಟಾಕಿ ಹೊಡೆಯುತ್ತಿದ್ದರು. ಆಗ ಯಾಕೆ ಪಟಾಕಿ ಹೊಡೆಯುತ್ತಿದ್ದಿರಿ ಅಂತ ನರಸಿಂಹ ಪ್ರಶ್ನಿಸಿದ್ದಾರೆ. ಆಗ ಏರಿಯಾ ಹುಡುಗರು ಮಾತು ಕೇಳದ ಹಿನ್ನೆಲೆ ನರೇಶ್, ಪ್ರವೀಣ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಆಗ ಹಲ್ಲೆಗೊಳಗಾದ ಯುವಕರು ಹಾಗೂ ಅವರ ಕಡೆಯವರಿಂದ ನರಸಿಂಹನ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಲಕ್ಷ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ: ಓರ್ವ ಬಂಧನ

ಮೃತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿಲ್ಲ. ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ಸ್ಪಷ್ಟನೆ ನೀಡಲಾಗಿದೆ. ಆಗ ಹಲ್ಲೆಗೊಳಗಾದ ಕಡೆಯವರಿಂದ ನರಸಿಂಹಲುನನ್ನ ಎಳೆತಂದು ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಇತ್ತ ಮೃತನ ವಿರುದ್ಧವೂ ಹಲ್ಲೆಗೊಳಗಾದವರಿಂದ ಕೌಂಟರ್ ಕೇಸ್ ದಾಖಲಿಸಿದ್ದಾರೆ.

ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವು

ಶಿವಮೊಗ್ಗ: ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದಲ್ಲಿ ಅ.24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ಮಗು.

ಕಳೆದ ವಾರ ರಾಜೇಶ್ ಅವರ ನೆರೆಮನೆ ನಿವಾಸಿ ಮೃತಪಟ್ಟಿದ್ದರು. ಹೀಗಾಗಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ರೆಡಿ ಮಾಡಿಟ್ಟಿದ್ದರು. ಟೀ ಪಾತ್ರೆಯನ್ನು ಮೈಮೇಲೆ ಬೀಳಿಸಿಕೊಂಡು ಮಗು ಗಾಯಗೊಂಡಿತ್ತು.

ಇದನ್ನೂ ಓದಿ: ಉಡುಪಿ ಬಾಲಕೃಷ್ಣ ಹತ್ಯೆ: ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

ಗಾಯಗೊಂಡ ಮಗುವಿಗೆ ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ