ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವನನ್ನು ಕರೆದೊಯ್ದು ಬಲಿ ಕೊಟ್ಟ ಖದೀಮರು

ನರಬಲಿ ಕೊಟ್ಟರೆ ನಿನಗೆ ನಿಧಿ ಸಿಗುತ್ತೆ ಎಂದು ಜ್ಯೋತಿಷಿ ಹೇಳಿದ್ದ. ಜ್ಯೋತಿಷಿ ಮಾತು ನಂಬಿದ್ದ ವ್ಯಕ್ತಿಯೋರ್ವ ನಿಧಿ ಆಸೆಗಾಗಿ ಬಸ್​ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡಿದ್ದವನನ್ನು ಕರೆದೊಯ್ದು ನಡು ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜ್ಯೋತಿಷಿ ಮಾತು ಕೇಳಿ ಹಿಂದೆ ಮುಂದೆ ನೋಡದೇ ಇನ್ನೊಬ್ಬರ ಚಪ್ಪಲಿ ಹೊಲೆದು ಜೀವನ ನಡೆಸುತ್ತಿದ್ದವನ ಬಲಿ ಕೊಟ್ಟಿದ್ದಾನೆ.

ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವನನ್ನು ಕರೆದೊಯ್ದು ಬಲಿ ಕೊಟ್ಟ ಖದೀಮರು
ಆನಂದ್ ರೆಡ್ಡಿ (ಕೊಲೆ ಆರೋಪಿ, ರಾಮಕೃಷ್ಣ (ಜ್ಯೋತಿಷಿ)
Edited By:

Updated on: Feb 11, 2025 | 7:58 PM

ಚಿತ್ರದುರ್ಗ, (ಫೆಬ್ರವರಿ 11): ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂದು ಜ್ಯೋತಿಷಿ ಹೇಳಿದ್ದ ಮಾತು ಕೇಳಿ ವ್ಯಕ್ತಿಯೋರ್ವ, ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಈ‌ ಘಟನೆ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು ಕೇಳಿ ಆನಂದ್ ರೆಡ್ಡಿ ಎಂಬಾತ ಹಿಂದೆ ಮುಂದೆ ನೋಡದೇ ನರಬಲಿ ಕೊಟ್ಟೇ ಬಿಟ್ಟಿದ್ದಾನೆ. ಆದ್ರೆ, ಇದೀಗ ಪೊಲೀಸರು, ನರಬಲಿ ಕೊಟ್ಟ ಆರೋಪಿ ಆಂಧ್ರದ ಕಲ್ಯಾಣ ದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಆನಂದ ರೆಡ್ಡಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ.

ಜ್ಯೋತಿಷಿ ರಾಮಕೃಷ್ಣ, ಆನಂದ ರೆಡ್ಡಿಗೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ರೆ ನಿಧಿ ಸಿಗುತ್ತೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸಲು ಹೇಳಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಕಳೆದ ಭಾನುವಾರ ಸಂಜೆ ಪಶ್ಚಿಮ‌ ದಿಕ್ಕಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡಿದ್ದ ಪ್ರಭಾಕರನನ್ನು ಬೈಕಲ್ಲಿ ಡ್ರಾಪ್ ನೀಡುವುದಾಗಿ ಹೇಳಿ ಕರೆದೊಯ್ದು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

ಇದನ್ನೂ ಓದಿ: ಅರ್ಧಗಂಟೆಯಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ ಕದಂಬ

‘ಕೊಲೆ ಆರೋಪಿ ಆನಂದ ರೆಡ್ಡಿ ಪಾವಗಡದ ಡಾಬಾಲ್ಲಿ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆ ಆರೋಪಿ ಆನಂದ ರೆಡ್ಡಿ ಹಾಗೂ ತುಮಕೂರು ಜಿಲ್ಲೆಯ ಪಾವಗಡದ ಜ್ಯೋತಿಷಿ ರಾಮಕೃಷ್ಣನನ್ನು ಬಂಧಿಸಿ ಕೊಲೆಗೆ ಬಳಸಿದ್ದ ಮಚ್ಚು ಹಾಗೂ ಬಟ್ಟೆ‌ ಸೀಜ್ ಮಾಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಸ್‌ಪಿ ರಂಜೀತ ಕುಮಾರ್ ಬಂಡಾರು, ASP ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Tue, 11 February 25

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us