AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪತ್ನಿಯನ್ನ ಕೊಂದು, ಕೋಲ್ಕತ್ತಾದಲ್ಲಿ ಅತ್ತೆಯ ಹತ್ಯೆಗೈದು ತಾನೂ ಸಾವಿಗೆ ಶರಣು

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 21ರಂದು ಮಹದೇವಪುರದ ಖಾಸಗಿ ಅಪಾರ್ಟ್ಮೆಂಟ್​ನ ಅಡುಗೆ ಮನೆಯಲ್ಲಿ ಶಿಲ್ಪಿ(30) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ. ಪತಿಯೇ ಪತ್ನಿಯನ್ನ ಕೊಂದು, ಅತ್ತೆ, ಮಾವನಿಗೂ ಸ್ಕೆಚ್: ಅಮಿತ್ ಅಗರ್ವಾಲ್‌ ಕೊಲೆಯಾದ ಶಿಲ್ಪಿ ಪತಿ. ಮೊದಲಿಗೆ ಬೆಂಗಳೂರಿನಲ್ಲಿ ತನ್ನ ಪತ್ನಿಯನ್ನು ಕೊಂದು ನಂತರ ತನ್ನ 10 ವರ್ಷದ ಮಗು ಜತೆ ಕೋಲ್ಕತ್ತಾಗೆ […]

ಬೆಂಗಳೂರಿನಲ್ಲಿ ಪತ್ನಿಯನ್ನ ಕೊಂದು, ಕೋಲ್ಕತ್ತಾದಲ್ಲಿ ಅತ್ತೆಯ ಹತ್ಯೆಗೈದು ತಾನೂ ಸಾವಿಗೆ ಶರಣು
ಆಯೇಷಾ ಬಾನು
|

Updated on:Jun 23, 2020 | 10:24 AM

Share

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 21ರಂದು ಮಹದೇವಪುರದ ಖಾಸಗಿ ಅಪಾರ್ಟ್ಮೆಂಟ್​ನ ಅಡುಗೆ ಮನೆಯಲ್ಲಿ ಶಿಲ್ಪಿ(30) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ.

ಪತಿಯೇ ಪತ್ನಿಯನ್ನ ಕೊಂದು, ಅತ್ತೆ, ಮಾವನಿಗೂ ಸ್ಕೆಚ್: ಅಮಿತ್ ಅಗರ್ವಾಲ್‌ ಕೊಲೆಯಾದ ಶಿಲ್ಪಿ ಪತಿ. ಮೊದಲಿಗೆ ಬೆಂಗಳೂರಿನಲ್ಲಿ ತನ್ನ ಪತ್ನಿಯನ್ನು ಕೊಂದು ನಂತರ ತನ್ನ 10 ವರ್ಷದ ಮಗು ಜತೆ ಕೋಲ್ಕತ್ತಾಗೆ ತೆರಳಿದ್ದಾನೆ. ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಕೋಲ್ಕತ್ತಾದ ಆರ್.ಕೆ.ಸಮಾಧಿ ಬಳಿಯಿರುವ ಮಾವನ ಮನೆಗೆ ತೆರಳಿದ್ದಾನೆ. ಶಿಲ್ಪಿ ತಂದೆ ಸುಭಾಸ್ ಹಾಗೂ ತಾಯಿ ಲಲಿತಾ ಜತೆ ಮಾತುಕತೆ ನಡೆಸಿದ್ದಾನೆ.

ಮಾತಿನ ನಡುವೆ ಲಲಿತಾ ಮೇಲೆ ಫೈರಿಂಗ್ ಮಾಡಿ ಅತ್ತೆ ಹತ್ಯೆ ಮಾಡಿದ್ದಾನೆ. ನಂತರ ಮಾವನ ಕೊಲೆಗೆ ಯತ್ನಿಸಿದ್ದಾರೆ. ಆದರೆ ಸುಭಾಸ್ ಧನ್ದಾನಿಯಾ ಅಳಿಯನಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸುಭಾಸ್ ಮನೆಗೆ ಪೊಲೀಸರು ಭೇಟಿ ನೀಡಿದ್ರು. ಈ ವೇಳೆ ಮಾವನ ಮನೆಯಲ್ಲೇ ಅಮಿತ್ ಅಗರ್ವಾಲ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ. ಅಮಿತ್ ಮೃತದೇಹದ ಬಳಿ ಸಿಕ್ಕ ಡೆತ್‌ನೋಟ್‌ ಆಧರಿಸಿ ತನಿಖೆ ಶುರು ಮಾಡಿದ್ದಾಗ ಪತ್ನಿ ಹತ್ಯೆಗೈದು ಕೋಲ್ಕತ್ತಾಗೆ ತೆರಳಿದ್ದಾಗಿ ಪತ್ರದಲ್ಲಿ ಉಲ್ಲೇಖವಾಗಿದೆ. ಹೀಗಾಗಿ ಪೊಲೀಸರು ಬೆಂಗಳೂರಿನ ಪತ್ನಿ ಮನೆಗೆ ಭೇಟಿ ನೀಡಿದ್ರು. ಮನೆಯ ಅಡುಗೆಕೋಣೆಯಲ್ಲಿ ಶಿಲ್ಪಿ ಮೃತದೇಹ ಪತ್ತೆಯಾಗಿದೆ.

ಪತ್ನಿ ಕೊಲೆಗೆ ಅಸಲಿ ಕಾರಣ ಏನು? ಅಮಿತ್ ಮತ್ತು ಶಿಲ್ಪಿ ನಡುವೆ ಪರಸ್ಪರ ಹೊಂದಾಣಿಕೆ ಇರಲಿಲ್ಲ. ಇಬ್ಬರ ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್‌ನಲ್ಲಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಸಂಬಂಧಿಸಿ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:18 am, Tue, 23 June 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?