AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪತ್ನಿಯನ್ನ ಕೊಂದು, ಕೋಲ್ಕತ್ತಾದಲ್ಲಿ ಅತ್ತೆಯ ಹತ್ಯೆಗೈದು ತಾನೂ ಸಾವಿಗೆ ಶರಣು

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 21ರಂದು ಮಹದೇವಪುರದ ಖಾಸಗಿ ಅಪಾರ್ಟ್ಮೆಂಟ್​ನ ಅಡುಗೆ ಮನೆಯಲ್ಲಿ ಶಿಲ್ಪಿ(30) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ. ಪತಿಯೇ ಪತ್ನಿಯನ್ನ ಕೊಂದು, ಅತ್ತೆ, ಮಾವನಿಗೂ ಸ್ಕೆಚ್: ಅಮಿತ್ ಅಗರ್ವಾಲ್‌ ಕೊಲೆಯಾದ ಶಿಲ್ಪಿ ಪತಿ. ಮೊದಲಿಗೆ ಬೆಂಗಳೂರಿನಲ್ಲಿ ತನ್ನ ಪತ್ನಿಯನ್ನು ಕೊಂದು ನಂತರ ತನ್ನ 10 ವರ್ಷದ ಮಗು ಜತೆ ಕೋಲ್ಕತ್ತಾಗೆ […]

ಬೆಂಗಳೂರಿನಲ್ಲಿ ಪತ್ನಿಯನ್ನ ಕೊಂದು, ಕೋಲ್ಕತ್ತಾದಲ್ಲಿ ಅತ್ತೆಯ ಹತ್ಯೆಗೈದು ತಾನೂ ಸಾವಿಗೆ ಶರಣು
ಆಯೇಷಾ ಬಾನು
|

Updated on:Jun 23, 2020 | 10:24 AM

Share

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 21ರಂದು ಮಹದೇವಪುರದ ಖಾಸಗಿ ಅಪಾರ್ಟ್ಮೆಂಟ್​ನ ಅಡುಗೆ ಮನೆಯಲ್ಲಿ ಶಿಲ್ಪಿ(30) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ.

ಪತಿಯೇ ಪತ್ನಿಯನ್ನ ಕೊಂದು, ಅತ್ತೆ, ಮಾವನಿಗೂ ಸ್ಕೆಚ್: ಅಮಿತ್ ಅಗರ್ವಾಲ್‌ ಕೊಲೆಯಾದ ಶಿಲ್ಪಿ ಪತಿ. ಮೊದಲಿಗೆ ಬೆಂಗಳೂರಿನಲ್ಲಿ ತನ್ನ ಪತ್ನಿಯನ್ನು ಕೊಂದು ನಂತರ ತನ್ನ 10 ವರ್ಷದ ಮಗು ಜತೆ ಕೋಲ್ಕತ್ತಾಗೆ ತೆರಳಿದ್ದಾನೆ. ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಕೋಲ್ಕತ್ತಾದ ಆರ್.ಕೆ.ಸಮಾಧಿ ಬಳಿಯಿರುವ ಮಾವನ ಮನೆಗೆ ತೆರಳಿದ್ದಾನೆ. ಶಿಲ್ಪಿ ತಂದೆ ಸುಭಾಸ್ ಹಾಗೂ ತಾಯಿ ಲಲಿತಾ ಜತೆ ಮಾತುಕತೆ ನಡೆಸಿದ್ದಾನೆ.

ಮಾತಿನ ನಡುವೆ ಲಲಿತಾ ಮೇಲೆ ಫೈರಿಂಗ್ ಮಾಡಿ ಅತ್ತೆ ಹತ್ಯೆ ಮಾಡಿದ್ದಾನೆ. ನಂತರ ಮಾವನ ಕೊಲೆಗೆ ಯತ್ನಿಸಿದ್ದಾರೆ. ಆದರೆ ಸುಭಾಸ್ ಧನ್ದಾನಿಯಾ ಅಳಿಯನಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸುಭಾಸ್ ಮನೆಗೆ ಪೊಲೀಸರು ಭೇಟಿ ನೀಡಿದ್ರು. ಈ ವೇಳೆ ಮಾವನ ಮನೆಯಲ್ಲೇ ಅಮಿತ್ ಅಗರ್ವಾಲ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ. ಅಮಿತ್ ಮೃತದೇಹದ ಬಳಿ ಸಿಕ್ಕ ಡೆತ್‌ನೋಟ್‌ ಆಧರಿಸಿ ತನಿಖೆ ಶುರು ಮಾಡಿದ್ದಾಗ ಪತ್ನಿ ಹತ್ಯೆಗೈದು ಕೋಲ್ಕತ್ತಾಗೆ ತೆರಳಿದ್ದಾಗಿ ಪತ್ರದಲ್ಲಿ ಉಲ್ಲೇಖವಾಗಿದೆ. ಹೀಗಾಗಿ ಪೊಲೀಸರು ಬೆಂಗಳೂರಿನ ಪತ್ನಿ ಮನೆಗೆ ಭೇಟಿ ನೀಡಿದ್ರು. ಮನೆಯ ಅಡುಗೆಕೋಣೆಯಲ್ಲಿ ಶಿಲ್ಪಿ ಮೃತದೇಹ ಪತ್ತೆಯಾಗಿದೆ.

ಪತ್ನಿ ಕೊಲೆಗೆ ಅಸಲಿ ಕಾರಣ ಏನು? ಅಮಿತ್ ಮತ್ತು ಶಿಲ್ಪಿ ನಡುವೆ ಪರಸ್ಪರ ಹೊಂದಾಣಿಕೆ ಇರಲಿಲ್ಲ. ಇಬ್ಬರ ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್‌ನಲ್ಲಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಸಂಬಂಧಿಸಿ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:18 am, Tue, 23 June 20

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್