AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪತ್ನಿಯನ್ನ ಕೊಂದು, ಕೋಲ್ಕತ್ತಾದಲ್ಲಿ ಅತ್ತೆಯ ಹತ್ಯೆಗೈದು ತಾನೂ ಸಾವಿಗೆ ಶರಣು

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 21ರಂದು ಮಹದೇವಪುರದ ಖಾಸಗಿ ಅಪಾರ್ಟ್ಮೆಂಟ್​ನ ಅಡುಗೆ ಮನೆಯಲ್ಲಿ ಶಿಲ್ಪಿ(30) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ. ಪತಿಯೇ ಪತ್ನಿಯನ್ನ ಕೊಂದು, ಅತ್ತೆ, ಮಾವನಿಗೂ ಸ್ಕೆಚ್: ಅಮಿತ್ ಅಗರ್ವಾಲ್‌ ಕೊಲೆಯಾದ ಶಿಲ್ಪಿ ಪತಿ. ಮೊದಲಿಗೆ ಬೆಂಗಳೂರಿನಲ್ಲಿ ತನ್ನ ಪತ್ನಿಯನ್ನು ಕೊಂದು ನಂತರ ತನ್ನ 10 ವರ್ಷದ ಮಗು ಜತೆ ಕೋಲ್ಕತ್ತಾಗೆ […]

ಬೆಂಗಳೂರಿನಲ್ಲಿ ಪತ್ನಿಯನ್ನ ಕೊಂದು, ಕೋಲ್ಕತ್ತಾದಲ್ಲಿ ಅತ್ತೆಯ ಹತ್ಯೆಗೈದು ತಾನೂ ಸಾವಿಗೆ ಶರಣು
ಆಯೇಷಾ ಬಾನು
ಆಯೇಷಾ ಬಾನು|

Updated on:Jun 23, 2020 | 10:24 AM

Share

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 21ರಂದು ಮಹದೇವಪುರದ ಖಾಸಗಿ ಅಪಾರ್ಟ್ಮೆಂಟ್​ನ ಅಡುಗೆ ಮನೆಯಲ್ಲಿ ಶಿಲ್ಪಿ(30) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ.

ಪತಿಯೇ ಪತ್ನಿಯನ್ನ ಕೊಂದು, ಅತ್ತೆ, ಮಾವನಿಗೂ ಸ್ಕೆಚ್: ಅಮಿತ್ ಅಗರ್ವಾಲ್‌ ಕೊಲೆಯಾದ ಶಿಲ್ಪಿ ಪತಿ. ಮೊದಲಿಗೆ ಬೆಂಗಳೂರಿನಲ್ಲಿ ತನ್ನ ಪತ್ನಿಯನ್ನು ಕೊಂದು ನಂತರ ತನ್ನ 10 ವರ್ಷದ ಮಗು ಜತೆ ಕೋಲ್ಕತ್ತಾಗೆ ತೆರಳಿದ್ದಾನೆ. ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಕೋಲ್ಕತ್ತಾದ ಆರ್.ಕೆ.ಸಮಾಧಿ ಬಳಿಯಿರುವ ಮಾವನ ಮನೆಗೆ ತೆರಳಿದ್ದಾನೆ. ಶಿಲ್ಪಿ ತಂದೆ ಸುಭಾಸ್ ಹಾಗೂ ತಾಯಿ ಲಲಿತಾ ಜತೆ ಮಾತುಕತೆ ನಡೆಸಿದ್ದಾನೆ.

ಮಾತಿನ ನಡುವೆ ಲಲಿತಾ ಮೇಲೆ ಫೈರಿಂಗ್ ಮಾಡಿ ಅತ್ತೆ ಹತ್ಯೆ ಮಾಡಿದ್ದಾನೆ. ನಂತರ ಮಾವನ ಕೊಲೆಗೆ ಯತ್ನಿಸಿದ್ದಾರೆ. ಆದರೆ ಸುಭಾಸ್ ಧನ್ದಾನಿಯಾ ಅಳಿಯನಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸುಭಾಸ್ ಮನೆಗೆ ಪೊಲೀಸರು ಭೇಟಿ ನೀಡಿದ್ರು. ಈ ವೇಳೆ ಮಾವನ ಮನೆಯಲ್ಲೇ ಅಮಿತ್ ಅಗರ್ವಾಲ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ. ಅಮಿತ್ ಮೃತದೇಹದ ಬಳಿ ಸಿಕ್ಕ ಡೆತ್‌ನೋಟ್‌ ಆಧರಿಸಿ ತನಿಖೆ ಶುರು ಮಾಡಿದ್ದಾಗ ಪತ್ನಿ ಹತ್ಯೆಗೈದು ಕೋಲ್ಕತ್ತಾಗೆ ತೆರಳಿದ್ದಾಗಿ ಪತ್ರದಲ್ಲಿ ಉಲ್ಲೇಖವಾಗಿದೆ. ಹೀಗಾಗಿ ಪೊಲೀಸರು ಬೆಂಗಳೂರಿನ ಪತ್ನಿ ಮನೆಗೆ ಭೇಟಿ ನೀಡಿದ್ರು. ಮನೆಯ ಅಡುಗೆಕೋಣೆಯಲ್ಲಿ ಶಿಲ್ಪಿ ಮೃತದೇಹ ಪತ್ತೆಯಾಗಿದೆ.

ಪತ್ನಿ ಕೊಲೆಗೆ ಅಸಲಿ ಕಾರಣ ಏನು? ಅಮಿತ್ ಮತ್ತು ಶಿಲ್ಪಿ ನಡುವೆ ಪರಸ್ಪರ ಹೊಂದಾಣಿಕೆ ಇರಲಿಲ್ಲ. ಇಬ್ಬರ ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್‌ನಲ್ಲಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಸಂಬಂಧಿಸಿ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:18 am, Tue, 23 June 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ