AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಗೆಯನ್ನೇ ಪ್ರೀತಿಸಿ, ಆಕೆಯನ್ನು ಪಡೆಯಲು ಅಣ್ಣನನ್ನು ಕೊಂದ ಯುವಕ; ಹತ್ಯೆ ನಡೆಯುವಾಗ ಆಕೆ ನಿದ್ರಿಸುತ್ತಿದ್ದಳು

ಒಂದೇ ಮನೆಯಲ್ಲಿ ಮೂವರೂ ವಾಸವಾಗಿದ್ದರು. ಮೊದಲು ಎಲ್ಲ ಸರಿಯಾಗೇ ಇತ್ತು. ಆದರೆ ಬರುಬರುತ್ತ ಭೂಪೇಂದ್ರನಿಗೆ ತನ್ನ ಅಣ್ಣ ಮೋಹಿತ್​ ಪತ್ನಿಯ ಮೇಲೆ ಅಂದರೆ ಅತ್ತಿಗೆ ಮೇಲೆ ಕಣ್ಣುಬಿತ್ತು.

ಅತ್ತಿಗೆಯನ್ನೇ ಪ್ರೀತಿಸಿ, ಆಕೆಯನ್ನು ಪಡೆಯಲು ಅಣ್ಣನನ್ನು ಕೊಂದ ಯುವಕ; ಹತ್ಯೆ ನಡೆಯುವಾಗ ಆಕೆ ನಿದ್ರಿಸುತ್ತಿದ್ದಳು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Apr 25, 2022 | 3:55 PM

Share

ಮತ್ತೊಬ್ಬರ ಮೇಲೆ ಪ್ರೀತಿ ಹುಟ್ಟುವುದು ಸಹಜ. ಆದರೆ ಅದು ಒಮ್ಮೊಮ್ಮೆ ಕ್ರೈಂಗೆ ಕಾರಣವಾಗಿಬಿಡುವುದು ಅಸಹಜ. ಆದರೆ ಪ್ರೀತಿಯ ಕಾರಣಕ್ಕೆ ಅದೆಷ್ಟೋ ಕೊಲೆ, ಕಿಡ್ನ್ಯಾಪ್​, ರೇಪ್​ಗಳಂಥ ಕ್ರೈಂಗಳು ನಡೆಯುವುದು ಪ್ರತಿದಿನ ವರದಿಯಾಗುತ್ತಿದೆ. ಹಾಗೇ ಉತ್ತರ ಪ್ರದೇಶದ ಲಖನೌನಲ್ಲೊಂದು ಶಾಕಿಂಗ್ ಘಟನೆ ನಡೆದಿದೆ. ಇಲ್ಲಿ ಯುವಕನೊಬ್ಬ ಅತ್ತಿಗೆಯ ಮೇಲೆ ಅಂದರೆ ಅಣ್ಣನ ಪತ್ನಿಯ ಮೇಲೆ ಹುಟ್ಟಿದ ಪ್ರೀತಿಯನ್ನು ಕುರುಡಾಗಿಸಿಕೊಂಡು, ಆಕೆಯನ್ನು ಪಡೆಯಲೇಬೇಕು ಎಂಬ ಹಠಕ್ಕೆ ಬಿದ್ದು, ಸ್ವಂತ ಅಣ್ಣನನ್ನೇ ಹತ್ಯೆಗೈದಿದ್ದಾನೆ. ಆರೋಪಿಯನ್ನು ಭೂಪೇಂದ್ರ ಸಹು ಎಂದು ಗುರುತಿಸಲಾಗಿದ್ದು ಪೊಲೀಸರು ಅವನನ್ನು ಬಂಧಿಸಿದ್ದಾರೆ. ಹಾಗೇ, ಮೃತನ ಹೆಸರು ಮೋಹಿತ್ ಸಹು ಎಂದಾಗಿದೆ. ಮೋಹಿತ್​ ತನ್ನ ಸೋದರ ಭೂಪೇಂದ್ರ ಮತ್ತು ಪತ್ನಿಯೊಂದಿಗೆ ಲಖನೌದ ಚಿನ್ಹಾತ್​ ಎಂಬಲ್ಲಿ ಬಾಡಿಗೆ ಫ್ಲ್ಯಾಟ್​ವೊಂದರಲ್ಲಿ ವಾಸವಾಗಿದ್ದ.

ಒಂದೇ ಮನೆಯಲ್ಲಿ ಮೂವರೂ ವಾಸವಾಗಿದ್ದರು. ಮೊದಲು ಎಲ್ಲ ಸರಿಯಾಗೇ ಇತ್ತು. ಆದರೆ ಬರುಬರುತ್ತ ಭೂಪೇಂದ್ರನಿಗೆ ತನ್ನ ಅಣ್ಣ ಮೋಹಿತ್​ ಪತ್ನಿಯ ಮೇಲೆ ಅಂದರೆ ಅತ್ತಿಗೆ ಮೇಲೆ ಕಣ್ಣುಬಿತ್ತು. ಆತ ಆಕೆಯನ್ನು ಪ್ರೀತಿಸ ತೊಡಗಿದ. ಹಾಗೇ, ಅತ್ತಿಗೆಯೊಂದಿಗೆ ಸ್ವಲ್ಪ ಸಲಿಗೆಯಿಂದ ವರ್ತಿಸಲೂ ತೊಡಗಿದ್ದ. ಆಕೆಗೇ ಸಹಾಯ ಮಾಡುವ ನೆಪದಲ್ಲಿ ಹತ್ತಿರ ಬರುತ್ತಿದ್ದ. ಇದು ಅವಳಿಗೆ ಕಿರಿಕಿರಿ ಶುರು ಮಾಡಿತ್ತು. ತನ್ನ ಪತಿ ಮೋಹಿತ್​ ಬಳಿ ಇದನ್ನು ತೋಡಿಕೊಂಡಿದ್ದಳು. ಮೋಹಿತ್​ ತನ್ನ ಸೋದರನಿಗೆ ಬುದ್ಧಿ ಹೇಳಿದ. ಆದರೆ ಇವರಿಬ್ಬರ ನಡುವಿನ ಮಾತುಕತೆ ನಂತರ ವಾಗ್ವಾದಕ್ಕೆ ತಿರುಗಿ ಗಲಾಟೆ ಮಾಡಿಕೊಂಡರು. ನಂತರ ಭೂಪೇಂದ್ರ ಮೋಹಿತ್​ ಕುತ್ತಿಗೆಯನ್ನು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಖಾಸಿಮ್​ ಅಬಿಡಿ ತಿಳಿಸಿದ್ದಾರೆ.

ಮೋಹಿತ್​​ ಮತ್ತು ಭೂಪೇಂದ್ರ ನಡುವೆ ಗಲಾಟೆಯಾಗಿ, ಮೋಹಿತ್​ ಹತ್ಯೆಯಾಗುವ ಹೊತ್ತಲ್ಲಿ ಆತನ ಪತ್ನಿ ಮನೆಯ ಮಹಡಿ ಮೇಲೆ ನಿದ್ರಿಸುತ್ತಿದ್ದರು.  ಆದರೆ ನಂತರ ಕೆಳಗೆ ಬಂದ ತುಂಬ ಶಾಕ್​ ಆದರು. ಭೂಪೇಂದ್ರ ತಾನು ಅಪರಾಧ ಮಾಡಿದ್ದಲ್ಲದೆ, ಅದನ್ನು ಮೋಹಿತ್ ಪತ್ನಿ ತಲೆಗೆ ಕಟ್ಟಲೂ ಪ್ರಯತ್ನಿಸಿದ. ತಮ್ಮಿಬ್ಬರ ಮಧ್ಯೆ ಜಗಳ ಹುಟ್ಟುಹಾಕಿದ್ದೇ ಅವಳು ಎಂದೂ ಪೊಲೀಸರ ಬಳಿ ಹೇಳಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ವಿಶ್ವದ ಅತ್ಯಂತ ದುಬಾರಿ ಮಾವು ಯಾವುದು ಗೊತ್ತಾ? ಕೆಜಿಗೆ ಲಕ್ಷಕ್ಕೂ ಹೆಚ್ಚು ಬೆಲೆ ಇರುವ ಈ ತಳಿ ಭಾರತದಲ್ಲೂ ಇದೆ !

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್