AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ. ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ […]

ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ
ಸಾಧು ಶ್ರೀನಾಥ್​
|

Updated on: May 05, 2020 | 7:56 AM

Share

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ.

ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ ಎಂಬ ಇಬ್ಬರು ಸ್ನೇಹಿತರು ಮದ್ಯ ಖರೀದಿಸಿದ್ದರು. ದೊಮ್ಮಲೂರಿನ ಬಳಿ ಇರುವ ರೂಮ್ ನಲ್ಲಿ ಕುಡಿದು ಟೈಟಾಗಿದ್ರು. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ಸಂತೋಷ್ ಶ್ರೀನಿವಾಸ್​ಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದಾನೆ. ಹಲ್ಲೆ ಪರಿಣಾಮ ಶ್ರೀನಿವಾಸ್​ಗೆ ಇಂಟರ್ನಲ್ ಬ್ಲೀಡಿಂಗ್ ಆಗಿದೆ.

ದೊಣ್ಣೆಯಿಂದ ತಲೆಗೆ ಹೊಡೆದಿದ್ರೂ ರಕ್ತ ಹೊರಗೆ ಬಂದಿರಲಿಲ್ಲ. ತಲೆಗೆ ಪೆಟ್ಟಾದ ಹಿನ್ನೆಲೆ ಶ್ರೀನಿವಾಸ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿ ಮನೆಗೆ ಬಂದ ಬಳಿಕ ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಜೀವನ್ ಭೀಮಾ ನಗರ ಠಾಣೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ