ಮುಂಬೈ: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಆಕೆಯ ತಮ್ಮನನ್ನೇ ಹತ್ಯೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದ ವ್ಯಕ್ತಿಯ ಬಂಧನ

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯ ತಮ್ಮನನ್ನೇ ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ತನ್ನ ಹೆಂಡತಿಗೆ ಕಿರುಕುಳ ನೀಡಿದ್ದಕ್ಕಾಗಿ ತನ್ನ ಕೊಂದು ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಬಾಲಕ ರಕ್ತ ಸಂಬಂಧಿಯಲ್ಲದಿದ್ದರೂ ಆರೋಪಿಯ ಪತ್ನಿಯ ತಂದೆಯೇ ಸಾಕಿ, ಸಲಹಿದ್ದರು, ಬಾಲಕ ತನ್ನ ಪತ್ನಿಗೆ ಕಿರುಕುಳಕೊಟ್ಟಿದ್ದಾನೆಂದು ಆರೋಪಿಸಿ ಹತ್ಯೆ ಮಾಡಿದ್ದಾನೆ.

ಮುಂಬೈ: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಆಕೆಯ ತಮ್ಮನನ್ನೇ ಹತ್ಯೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದ ವ್ಯಕ್ತಿಯ ಬಂಧನ
ಆರೋಪಿ
Image Credit source: NDTV

Updated on: Aug 31, 2023 | 9:49 AM

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯ ತಮ್ಮನನ್ನೇ ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ತನ್ನ ಹೆಂಡತಿಗೆ ಕಿರುಕುಳ ನೀಡಿದ್ದಕ್ಕಾಗಿ ತನ್ನ ಕೊಂದು ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಬಾಲಕ ರಕ್ತ ಸಂಬಂಧಿಯಲ್ಲದಿದ್ದರೂ ಆರೋಪಿಯ ಪತ್ನಿಯ ತಂದೆಯೇ ಸಾಕಿ, ಸಲಹಿದ್ದರು, ಬಾಲಕ ತನ್ನ ಪತ್ನಿಗೆ ಕಿರುಕುಳಕೊಟ್ಟಿದ್ದಾನೆಂದು ಆರೋಪಿಸಿ ಹತ್ಯೆ ಮಾಡಿದ್ದಾನೆ.

ಪೊಲೀಸರ ಪ್ರಕಾರ, ಆರೋಪಿ ಪದೇ ಪದೇ ಎಚ್ಚರಿಕೆ ನೀಡಿದರೂ ಬಾಲಕ ನಿರಂತರವಾಗಿ ಪತ್ನಿಗೆ ಹಿಂದೆ ನೀಡುತ್ತಿದ್ದ, ವ್ಯಕ್ತಿ ಸೋಮವಾರ ಮುಂಬೈನ ಚೆಂಬೂರಿನಲ್ಲಿ ಬಾಲಕನ್ನು ಕೊಂದು, ನಂತರ ಆತನ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ತನ್ನ ಅಡುಗೆಮನೆಯಲ್ಲಿ ಬಚ್ಚಿಟ್ಟಿದ್ದ.

ಬಾಲಕ ಎರಡು ದಿನ ನಾಪತ್ತೆಯಾದ ನಂತರ ಆರೋಪಿಯ ಮಾವ ಬಾಲಕನ ಬಗ್ಗೆ ವಿಚಾರಿಸಿದ್ದಾರೆ, ಆಗ ಅಳಿಯ ಕೊಟ್ಟ ಉತ್ತರ ಸರಿ ಅನಿಸಲಿಲ್ಲ, ಏನೋ ತಪ್ಪಾಗಿದೆ ಎಂದು ಶಂಕಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ

ಪೊಲೀಸರು ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಬಳಿಕ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯ ಪತ್ನಿ ಬಾಲಕನ್ನು ತನ್ನ ತಮ್ಮ ಎಂದುಕೊಂಡೇ ಸಲಹಿದ್ದಳು, ಆದರೆ ಇಬ್ಬರೂ ರಕ್ತಸಂಬಂಧವನ್ನು ಹೊಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ ಮತ್ತು ಸಾಕ್ಷ್ಯ ನಾಶಪಡಿಸಿದ ಪ್ರಕರಣದಲ್ಲಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us