AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಕೊಂದು ಶವವನ್ನು ಯಮುನಾ ನದಿಯಲ್ಲಿ ಎಸೆದಿದ್ದ ಪತಿ ಅರೆಸ್ಟ್

ತನ್ನ ಗ್ರಾಮದ ವ್ಯಕ್ತಿಯೊಂದಿಗೆ ಹೆಂಡತಿ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಆರೋಪಿಸಿ, ಪತಿಯೊಬ್ಬ ತನ್ನ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ಯಮುನಾ ನದಿಗೆ ಎಸೆದಿದ್ದಾನೆ. ಇದೀಗ ಆತನನ್ನ ಪೊಲೀಸರು ಬಂಧಿಸಿದ್ದಾರೆ.

ಪತ್ನಿಯನ್ನು ಕೊಂದು ಶವವನ್ನು ಯಮುನಾ ನದಿಯಲ್ಲಿ ಎಸೆದಿದ್ದ ಪತಿ ಅರೆಸ್ಟ್
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Apr 05, 2023 | 7:18 AM

Share

ನೊಯಿಡಾ: ಅನೈತಿಕ ಸಂಬಂಧ ಆರೋಪಿಸಿ ಪತಿಯೊಬ್ಬ ತನ್ನ ಪತ್ನಿಯನ್ನ ಕೊಲೆ ಮಾಡಿ ಇಟ್ಟಿಗೆಗಳಿಂದ ಕಟ್ಟಿ ಯಮುನಾ ನದಿಗೆ ಎಸೆದ ಘಟನೆ ನಡೆದಿದೆ. ಹೌದು ಜೇವರ್ ಪೊಲೀಸ್ ಠಾಣೆ ವ್ಯಾಪ್ತಿಯ ಛತಂಗಾ ಖುರ್ದ್ ಗ್ರಾಮದಲ್ಲಿ ಶ್ರವಣ್ ಮತ್ತು ಉಷಾ ದಂಪತಿಗಳು ವಾಸಿಸುತ್ತಿದ್ದರು. ಸೋಮವಾರ(ಏ.3) ಶ್ರವಣ್ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ತನ್ನ ಹೆಂಡತಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ಮತ್ತು ಅದೇ ದಿನ ಅಲಿಘರ್‌ನಲ್ಲಿ ಇರುವ ಉಷಾ ಅವರ ಕುಟುಂಬಸ್ಥರು ಕೂಡ ಆಕೆಯ ಪತಿ ಶ್ರವಣ್​ ಉಷಾಳನ್ನ ಕೊಂದಿದ್ದಾರೆ ಎಂದು ಆರೋಪಿಸಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್​ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡ ಪತಿ

ಉಷಾಳ ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪತಿ ಶ್ರವಣ್​ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಹೌದು ಭಾನುವಾರದ ಮಧ್ಯರಾತ್ರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಶವವನ್ನು ಗೋಣಿಚೀಲದಲ್ಲಿ ಹಾಕಿ ಅದರೊಳಗೆ ಅನುಮಾನ ಬರದಂತೆ ಕೆಲವು ಇಟ್ಟಿಗೆಗಳನ್ನ ತುಂಬಿ ಯಮುನಾ ನದಿಯಲ್ಲಿ ಎಸೆದಿರುವುದಾಗಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:Devanahalli: ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ? ಮದುವೆಯಾಗಿ ಮಗುವಿದ್ದರೂ ಗಂಡನಿಗೆ ಬೇರೊಂದು ಲವ್ವಿಡವ್ವಿ!

ಕೊಲೆಗೆ ಕಾರಣ

ದಿನಗೂಲಿಗಾರನಾದ ಶ್ರವಣ್ ತನ್ನ ಹೆಂಡತಿಯು ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಆರೋಪಿಸಿದ್ದು, ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ್ಗೆ ಜಗಳವಾಗುತ್ತಿದ್ದು, ಜಗಳ ವಿಕೋಪಕ್ಕೆ ತಿರುಗಿ ಭಾನುವಾರ ರಾತ್ರಿ ಈ ಕೃತ್ಯ ಎಸೆಗಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ. ಈ ಕುರಿತು ಮಂಗಳವಾರ ಜೇವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡ ಯಮುನಾ ನದಿಯಿಂದ ಮೃತದೇಹವನ್ನು ಹೊರತೆಗೆಯಲು ತೊಡಗಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್