AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿದ ಅಳಿಯ

ಅಳಿಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಬಳಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿದ ಅಳಿಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Oct 07, 2022 | 3:56 PM

Share

ದೊಡ್ಡಬಳ್ಳಾಪುರ: ಹೆಣ್ಣು ಕೊಟ್ಟ ಮಾವ ಕಣ್ಣ ಕೊಟ್ಟ ದೇವರಿಗೆ ಸಮ ಅನ್ನುತ್ತಾರೆ. ಆದರೆ ಇಲ್ಲೊಬ್ಬ ಅಳಿಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಬಳಿ ನಡೆದಿದೆ. ಆರೋಡಿ ಗ್ರಾಮದ ಸುಬ್ಬರಾಯಪ್ಪ (65) ಕೊಲೆಯಾದ ವ್ಯಕ್ತಿ. ಅಳಿಯ ಪ್ರತಾಪ್ ಕೊಲೆ ಮಾಡಿದ ಆರೋಪಿ. ಪ್ರತಾಪ್​ ಕಳೆದ 6 ತಿಂಗಳಿನಿಂದ ಬೇರೊಬ್ಬರ ಮಹಿಳೆ ಜೊತೆ ಸಂಬಂಧವಿಟ್ಟುಕೊಂಡಿದ್ದಾನೆ ಎಂದು ಪತ್ನಿ ಒಂದೂವರೆ ವರ್ಷದ ಮಗು ಜೊತೆ ತವರು ಮನೆಗೆ ಬಂದು ನೆಲಸಿದ್ದಳು.

ಹೀಗಾಗಿ ಪ್ರತಾಪ್​ ಆಗಾಗ ಮಾವನ ಮನೆಗೆ ಬಂದು ಮಗುವನ್ನು ಕೊಡು, ಕರೆದುಕೊಂಡು ಹೋಗುವೆ ಎಂದು ಪೀಡಿಸುತ್ತಿದ್ದನು. ಆದರೆ ಇದಕ್ಕೆ ಪತ್ನಿ ಮತ್ತು ಮಾವ ಸುಬ್ಬರಾಯಪ್ಪ ಒಪ್ಪಿಲ್ಲ. ಹೀಗಾಗಿ ಒಂದು ಭಾರಿ ಪ್ರತಾಪ್​ ಮಾವವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇಂದು ಪ್ರತಾಪ್​ ಮಾವ ಸುಬ್ಬರಾಯಪ್ಪನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿ, ಪೋಟೋ ತೆಗೆದು ಪತ್ನಿಗೆ ಕಳಸಿದ್ದಾನೆ ಪಾಪಿ.

ದೊಡ್ಡಬೆಳವಂಗಲ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡಬೆಳವಂಗಲ ಪೊಲೀಸರು ಆರೋಪಿ ಪ್ರತಾಪನನ್ನು ಬಂಧಸಿದ್ದಾರೆ.

ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿ ಬಂಧನ

ಬೆಂಗಳೂರಿನ ಆಕ್ಸ್​ಫರ್ಡ್​ ಮೈದಾನದ ಬಳಿ ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮಾನುಲ್ಲಾ ಬಂಧಿತ ಆರೋಪಿ. ಆರೋಪಿ ಅಮಾನುಲ್ಲಾನಿಂದ 356 ESkuf ಸಿರಪ್ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಳೆತ ಸ್ಥಿಯಲ್ಲಿ ಯುವಕನ ಶವ ಪತ್ತೆ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕರೋಶಿ ಗ್ರಾಮದ ಸುನೀಲ್ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ. ಸುನೀಲ್ ಕಳೆದ ರವಿವಾರದಂದು ಮುಂಜಾನೆ ಕೆಲಸಕ್ಕೆಂದು ಹೋಗಿದ್ದನು. ಆದರೆ ಇಂದು ಗ್ರಾಮದ ಹೊರ ವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 7 October 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ