AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿದ ಅಳಿಯ

ಅಳಿಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಬಳಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿದ ಅಳಿಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 07, 2022 | 3:56 PM

Share

ದೊಡ್ಡಬಳ್ಳಾಪುರ: ಹೆಣ್ಣು ಕೊಟ್ಟ ಮಾವ ಕಣ್ಣ ಕೊಟ್ಟ ದೇವರಿಗೆ ಸಮ ಅನ್ನುತ್ತಾರೆ. ಆದರೆ ಇಲ್ಲೊಬ್ಬ ಅಳಿಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಬಳಿ ನಡೆದಿದೆ. ಆರೋಡಿ ಗ್ರಾಮದ ಸುಬ್ಬರಾಯಪ್ಪ (65) ಕೊಲೆಯಾದ ವ್ಯಕ್ತಿ. ಅಳಿಯ ಪ್ರತಾಪ್ ಕೊಲೆ ಮಾಡಿದ ಆರೋಪಿ. ಪ್ರತಾಪ್​ ಕಳೆದ 6 ತಿಂಗಳಿನಿಂದ ಬೇರೊಬ್ಬರ ಮಹಿಳೆ ಜೊತೆ ಸಂಬಂಧವಿಟ್ಟುಕೊಂಡಿದ್ದಾನೆ ಎಂದು ಪತ್ನಿ ಒಂದೂವರೆ ವರ್ಷದ ಮಗು ಜೊತೆ ತವರು ಮನೆಗೆ ಬಂದು ನೆಲಸಿದ್ದಳು.

ಹೀಗಾಗಿ ಪ್ರತಾಪ್​ ಆಗಾಗ ಮಾವನ ಮನೆಗೆ ಬಂದು ಮಗುವನ್ನು ಕೊಡು, ಕರೆದುಕೊಂಡು ಹೋಗುವೆ ಎಂದು ಪೀಡಿಸುತ್ತಿದ್ದನು. ಆದರೆ ಇದಕ್ಕೆ ಪತ್ನಿ ಮತ್ತು ಮಾವ ಸುಬ್ಬರಾಯಪ್ಪ ಒಪ್ಪಿಲ್ಲ. ಹೀಗಾಗಿ ಒಂದು ಭಾರಿ ಪ್ರತಾಪ್​ ಮಾವವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇಂದು ಪ್ರತಾಪ್​ ಮಾವ ಸುಬ್ಬರಾಯಪ್ಪನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿ, ಪೋಟೋ ತೆಗೆದು ಪತ್ನಿಗೆ ಕಳಸಿದ್ದಾನೆ ಪಾಪಿ.

ದೊಡ್ಡಬೆಳವಂಗಲ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡಬೆಳವಂಗಲ ಪೊಲೀಸರು ಆರೋಪಿ ಪ್ರತಾಪನನ್ನು ಬಂಧಸಿದ್ದಾರೆ.

ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿ ಬಂಧನ

ಬೆಂಗಳೂರಿನ ಆಕ್ಸ್​ಫರ್ಡ್​ ಮೈದಾನದ ಬಳಿ ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮಾನುಲ್ಲಾ ಬಂಧಿತ ಆರೋಪಿ. ಆರೋಪಿ ಅಮಾನುಲ್ಲಾನಿಂದ 356 ESkuf ಸಿರಪ್ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಳೆತ ಸ್ಥಿಯಲ್ಲಿ ಯುವಕನ ಶವ ಪತ್ತೆ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕರೋಶಿ ಗ್ರಾಮದ ಸುನೀಲ್ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ. ಸುನೀಲ್ ಕಳೆದ ರವಿವಾರದಂದು ಮುಂಜಾನೆ ಕೆಲಸಕ್ಕೆಂದು ಹೋಗಿದ್ದನು. ಆದರೆ ಇಂದು ಗ್ರಾಮದ ಹೊರ ವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 7 October 22

Follow Us
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ