AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನ ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ, ಗುಂಡು ಹಾರಿಸಿದ ಪ್ರಯಾಣಿಕ

ಜಾರ್ಖಂಡ್​ನ ಸೀಲ್ದಾ ರಾಜಧಾನಿ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರು ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ ಬಳಿಕ ಗುಂಡು ಹಾರಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಪ್ರಯಾಣಿಕನನ್ನು 41 ವರ್ಷದ ಹರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಧನ್‌ಬಾದ್ ನಿಲ್ದಾಣದಿಂದ ದೆಹಲಿಗೆ ಹೋಗುವ ರೈಲನ್ನು ಹತ್ತಿದ್ದರು. ಈಸ್ಟರ್ನ್ ರೈಲ್ವೇಸ್ ಅಧಿಕಾರಿಗಳ ಪ್ರಕಾರ, ಆರೋಪಿ ಪ್ರಯಾಣಿಕ ಮತ್ತು ಕೋಚ್ ಅಟೆಂಡೆಂಟ್ ನಡುವೆ ವಾಗ್ವಾದ ನಡೆಯಿತು, ನಂತರ ಅವನು ತನ್ನ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಹಿಂದೂಸ್ತಾನ್ ಟೈಮ್ಸ್​ ವರದಿ ಮಾಡಿದೆ.

ರೈಲಿನ ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ, ಗುಂಡು ಹಾರಿಸಿದ ಪ್ರಯಾಣಿಕ
ರೈಲು
ನಯನಾ ರಾಜೀವ್
|

Updated on: Oct 13, 2023 | 9:15 AM

Share

ಸೀಲ್ದಾ ರಾಜಧಾನಿ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರು ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ ಬಳಿಕ ಗುಂಡು ಹಾರಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಪ್ರಯಾಣಿಕನನ್ನು 41 ವರ್ಷದ ಹರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಧನ್‌ಬಾದ್ ನಿಲ್ದಾಣದಿಂದ ದೆಹಲಿಗೆ ಹೋಗುವ ರೈಲನ್ನು ಹತ್ತಿದ್ದರು. ಈಸ್ಟರ್ನ್ ರೈಲ್ವೇಸ್ ಅಧಿಕಾರಿಗಳ ಪ್ರಕಾರ, ಆರೋಪಿ ಪ್ರಯಾಣಿಕ ಮತ್ತು ಕೋಚ್ ಅಟೆಂಡೆಂಟ್ ನಡುವೆ ವಾಗ್ವಾದ ನಡೆಯಿತು, ನಂತರ ಅವನು ತನ್ನ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಹಿಂದೂಸ್ತಾನ್ ಟೈಮ್ಸ್​ ವರದಿ ಮಾಡಿದೆ.

ಯಾರಿಗೂ ಗಾಯವಾಗಿಲ್ಲ. ಅವರನ್ನು ಕೊಡರ್ಮಾದಲ್ಲಿ ಇಳಿಸಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಯಿತು. ರೈಲಿನೊಳಗೆ ಗುಂಡು ಹಾರಿಸಿದ ವ್ಯಕ್ತಿ ಕುಡಿದ ಅಮಲಿನಲ್ಲಿದ್ದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ರೀತಿಯ ಘಟನೆ ಜುಲೈನಲ್ಲಿ ನಡೆದಿದ್ದು, ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚಲಿಸುತ್ತಿರುವ ರೈಲಿನೊಳಗೆ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಾಲ್ವರನ್ನು ಕೊಂದಿದ್ದರು. ದಹಿಸರ್ ಮತ್ತು ಮೀರಾ ರೋಡ್ ನಿಲ್ದಾಣಗಳ ನಡುವೆ ಜೈಪುರ-ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ B5 ಕೋಚ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಪೋಲೀಸ್ ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಹನುಮಕೊಂಡದಲ್ಲಿ ಅತ್ತೆ-ಅಳಿಯನ ಜಗಳ, ಅತ್ತೆಯನ್ನು ಗುಂಡಿಕ್ಕಿ ಕೊಂದ ಕಾನ್‌ಸ್ಟೆಬಲ್ ಅಳಿಮಯ್ಯ

ಜೈಪುರ – ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಕಾನ್‌ಸ್ಟೆಬಲ್ ಚೇತನ್ ಕುಮಾರ್ ಅವರು ತಮ್ಮ ಸಹೋದ್ಯೋಗಿ ಎಸ್ಕಾರ್ಟ್ ಇನ್ ಚಾರ್ಜ್ ಎಎಸ್‌ಐ ಟಿಕಾ ರಾಮ್ ಮೇಲೆ ಗುಂಡು ಹಾರಿಸಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !