AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ್ದ ಗೆಳತಿಯ ಕಣ್ಣಿನ ರೆಪ್ಪೆ ಅರಳಿಸಿ ಮೊಬೈಲ್​ ಲಾಕ್​ ಓಪನ್​ ಮಾಡಿ 18 ಲಕ್ಷ ರೂ ದೋಚಿದ ಯುವಕ

ಫೇಸ್​ ಲಾಕ್​ ಇದ್ದರೂ ಮಲಗಿದ್ದ ಗೆಳತಿಯ ಕಣ್ಣು ಓಪನ್​ ಮಾಡಿ ಮೊಬೈಲ್​ ಲಾಕ್​ ಓಪನ್ ತೆಗೆದು ವ್ಯಕ್ತಿಯೊಬ್ಬ ತನ್ನ ಗೆಳತಿಯ ಫೋನಿನಿಂದ ಲಕ್ಷಾಂತರ ರೂ.ಗಳನ್ನು ದೋಚಿದ ಘಟನೆ ನಡೆದಿದೆ.

ಮಲಗಿದ್ದ ಗೆಳತಿಯ ಕಣ್ಣಿನ ರೆಪ್ಪೆ ಅರಳಿಸಿ ಮೊಬೈಲ್​ ಲಾಕ್​ ಓಪನ್​ ಮಾಡಿ 18 ಲಕ್ಷ ರೂ ದೋಚಿದ ಯುವಕ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 14, 2021 | 12:45 PM

Share

ಫೋನಿನ ಸುರಕ್ಷತೆಗಾಗಿ ಫೇಸ್ ಲಾಕ್​ ಇಟ್ಟುಕೊಳ್ಳುವುದು ಸಾಮಾನ್ಯ. ಆದರೆ ಅದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಮೂಡುತ್ತದೆ. ಮೊಬೈಲ್​ಗೆ ಇಟ್ಟುಕೊಳ್ಳುವ ಲಾಕ್​ಗಳು ಸುರಕ್ಷಿತವಲ್ಲ ಎನ್ನುವುದಕ್ಕೆ ಉದಾಹರಣೆ ಎನ್ನುವಂತಹ ಘಟನೆ ಚೀನಾದಲ್ಲಿ ನಡೆದಿದೆ. ಫೇಸ್​ ಲಾಕ್​ ಇದ್ದರೂ ಮಲಗಿದ್ದ ಗೆಳತಿಯ ಕಣ್ಣು ಓಪನ್​ ಮಾಡಿ ಮೊಬೈಲ್​ ಲಾಕ್​  ತೆಗೆದು ವ್ಯಕ್ತಿಯೊಬ್ಬ ತನ್ನ ಗೆಳತಿಯ ಫೋನಿನಿಂದ ಲಕ್ಷಾಂತರ ರೂ.ಗಳನ್ನು ದೋಚಿದ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಗೆಳತಿ ಮಲಗಿದ್ದ ವೇಳೆ ಆಕೆಯ ಕಣ್ಣುಗಳನ್ನು ಓಪನ್​ ಮಾಡಿಕೊಂಡು ಮೊಬೈಲ್​ ಅನ್ನು ಅನ್​ಲಾಕ್​ ಮಾಡಿ ಬರೋಬ್ಬರಿ 18 ಲಕ್ಷ ರೂಗಳನ್ನು ದೋಚಿದ್ದಾನೆ. ಚೀನಾದಲ್ಲಿ ಈ ಘಟನೆ ನಡೆದಿದ್ದು,  ಆರೋಪಿಯನ್ನು ಪೊಲೀಸರು ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಲಯ​ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಹುವಾಂಗ್​ ನಗರದ ವ್ಯಕ್ತಿಯೊಬ್ಬ ಜೂಜಾಟದಲ್ಲಿ ದೊಡ್ಡ ಪ್ರಮಾಣದ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಅದನ್ನು ತೀರಿಸಲು ತನ್ನ ಗೆಳತಿಯ ಫೋನ್​ನಿಂದ ಹಣ ಲಪಟಾಯಿಸಿದ್ದಾನೆ. ಗೆಳತಿಯ ಫೊನ್​ನಲ್ಲಿ ಮೊದಲು ಫಿಂಗರ್​ಪ್ರಿಂಟ್​ ಮೂಲಕ ಓಪನ್​ ಮಾಡಲು ಪ್ರಯತ್ನಿಸಿದ್ದಾನೆ. ಬಳಿಕ ಆಕೆಯ ಕಣ್ಣಿನ ರೆಪ್ಪೆಗಳನ್ನು ಬಿಡಿಸಿ ಫೇಸ್​ ಲಾಕ್​ ಓಪನ್​ ಮಾಡಿ ಆನ್ಲೈನ್​ ಹಣ ಪಾವತಿ ಆ್ಯಪ್​ ಅಲಿಪೇಗೆ ಲಾಗ್​ ಇನ್​ ಆಗಿದ್ದಾನೆ. ತಕ್ಷಣ ಪಾಸ್​ವರ್ಡ್​ ಬದಲಿಸಿ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆಯಲ್ಲಿ ಹಣ ಕಾಣೆಯಾಗಿರುವುದನ್ನು ಕಂಡು ಯುವತಿ ಪೊಲೀಸರಿಗೆ ದೂರು ನೀಡಿದ್ದರು ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾಗಿದ್ದು, ಯುವಕನನ್ನು ತಪ್ಪಿತಸ್ತ ಎಂದು ಪರಿಗಣಿಸಿ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಫೋನ್​ನ ಸುರಕ್ಷತೆಗಾಗಿ ಫೇಸ್​ ಲಾಕ್​ ಅಥವಾ ಫಿಂಗರ್​ಪ್ರಿಂಟ್​ ಲಾಕ್​ ಇಡುವುದರ ಬದಲು ಪಿನ್​ ನಂಬರ್​ ಇಡುವುದು ಒಳಿತು. ಈ ರೀತಿಯಲ್ಲಿ ಆನ್ಲೈನ್​ನಲ್ಲಿ ವ್ಯವಹಾರ ನಡೆಸುವಾಗ ಫೋನ್ ಹಾಗೂ ಅದರ ಪಾಸ್ವರ್ಡ್​ಗಳನ್ನು ಸರಿಯಾದ ಕ್ರಮಗಳಲ್ಲಿ ಜೋಡಿಸಿಕೊಂಡಿರುವುದು ಮುಖ್ಯವಾಗಿರುತ್ತದೆ.

ಇದನ್ನೂ ಓದಿ:

ಕಾರಿನಲ್ಲಿ ಹಿಂಬಾಲಿಸಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ಎಂಎಸ್ ವಿದ್ಯಾರ್ಥಿ ಅರೆಸ್ಟ್

Supari For Robbery | ದಿಢೀರ್ ದುಡ್ಡು ಮಾಡಲು ಕಳ್ಳದಾರಿ ಹಿಡಿದು ಸುಪಾರಿ ಕೊಟ್ಟು ಚಿನ್ನದ ಗಟ್ಟಿ ದೋಚಿಸಿದ್ದ ಕಿಲಾಡಿ ಅರೆಸ್ಟ್

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ