AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ್ದ ಗೆಳತಿಯ ಕಣ್ಣಿನ ರೆಪ್ಪೆ ಅರಳಿಸಿ ಮೊಬೈಲ್​ ಲಾಕ್​ ಓಪನ್​ ಮಾಡಿ 18 ಲಕ್ಷ ರೂ ದೋಚಿದ ಯುವಕ

ಫೇಸ್​ ಲಾಕ್​ ಇದ್ದರೂ ಮಲಗಿದ್ದ ಗೆಳತಿಯ ಕಣ್ಣು ಓಪನ್​ ಮಾಡಿ ಮೊಬೈಲ್​ ಲಾಕ್​ ಓಪನ್ ತೆಗೆದು ವ್ಯಕ್ತಿಯೊಬ್ಬ ತನ್ನ ಗೆಳತಿಯ ಫೋನಿನಿಂದ ಲಕ್ಷಾಂತರ ರೂ.ಗಳನ್ನು ದೋಚಿದ ಘಟನೆ ನಡೆದಿದೆ.

ಮಲಗಿದ್ದ ಗೆಳತಿಯ ಕಣ್ಣಿನ ರೆಪ್ಪೆ ಅರಳಿಸಿ ಮೊಬೈಲ್​ ಲಾಕ್​ ಓಪನ್​ ಮಾಡಿ 18 ಲಕ್ಷ ರೂ ದೋಚಿದ ಯುವಕ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 14, 2021 | 12:45 PM

Share

ಫೋನಿನ ಸುರಕ್ಷತೆಗಾಗಿ ಫೇಸ್ ಲಾಕ್​ ಇಟ್ಟುಕೊಳ್ಳುವುದು ಸಾಮಾನ್ಯ. ಆದರೆ ಅದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಮೂಡುತ್ತದೆ. ಮೊಬೈಲ್​ಗೆ ಇಟ್ಟುಕೊಳ್ಳುವ ಲಾಕ್​ಗಳು ಸುರಕ್ಷಿತವಲ್ಲ ಎನ್ನುವುದಕ್ಕೆ ಉದಾಹರಣೆ ಎನ್ನುವಂತಹ ಘಟನೆ ಚೀನಾದಲ್ಲಿ ನಡೆದಿದೆ. ಫೇಸ್​ ಲಾಕ್​ ಇದ್ದರೂ ಮಲಗಿದ್ದ ಗೆಳತಿಯ ಕಣ್ಣು ಓಪನ್​ ಮಾಡಿ ಮೊಬೈಲ್​ ಲಾಕ್​  ತೆಗೆದು ವ್ಯಕ್ತಿಯೊಬ್ಬ ತನ್ನ ಗೆಳತಿಯ ಫೋನಿನಿಂದ ಲಕ್ಷಾಂತರ ರೂ.ಗಳನ್ನು ದೋಚಿದ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಗೆಳತಿ ಮಲಗಿದ್ದ ವೇಳೆ ಆಕೆಯ ಕಣ್ಣುಗಳನ್ನು ಓಪನ್​ ಮಾಡಿಕೊಂಡು ಮೊಬೈಲ್​ ಅನ್ನು ಅನ್​ಲಾಕ್​ ಮಾಡಿ ಬರೋಬ್ಬರಿ 18 ಲಕ್ಷ ರೂಗಳನ್ನು ದೋಚಿದ್ದಾನೆ. ಚೀನಾದಲ್ಲಿ ಈ ಘಟನೆ ನಡೆದಿದ್ದು,  ಆರೋಪಿಯನ್ನು ಪೊಲೀಸರು ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಲಯ​ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಹುವಾಂಗ್​ ನಗರದ ವ್ಯಕ್ತಿಯೊಬ್ಬ ಜೂಜಾಟದಲ್ಲಿ ದೊಡ್ಡ ಪ್ರಮಾಣದ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಅದನ್ನು ತೀರಿಸಲು ತನ್ನ ಗೆಳತಿಯ ಫೋನ್​ನಿಂದ ಹಣ ಲಪಟಾಯಿಸಿದ್ದಾನೆ. ಗೆಳತಿಯ ಫೊನ್​ನಲ್ಲಿ ಮೊದಲು ಫಿಂಗರ್​ಪ್ರಿಂಟ್​ ಮೂಲಕ ಓಪನ್​ ಮಾಡಲು ಪ್ರಯತ್ನಿಸಿದ್ದಾನೆ. ಬಳಿಕ ಆಕೆಯ ಕಣ್ಣಿನ ರೆಪ್ಪೆಗಳನ್ನು ಬಿಡಿಸಿ ಫೇಸ್​ ಲಾಕ್​ ಓಪನ್​ ಮಾಡಿ ಆನ್ಲೈನ್​ ಹಣ ಪಾವತಿ ಆ್ಯಪ್​ ಅಲಿಪೇಗೆ ಲಾಗ್​ ಇನ್​ ಆಗಿದ್ದಾನೆ. ತಕ್ಷಣ ಪಾಸ್​ವರ್ಡ್​ ಬದಲಿಸಿ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆಯಲ್ಲಿ ಹಣ ಕಾಣೆಯಾಗಿರುವುದನ್ನು ಕಂಡು ಯುವತಿ ಪೊಲೀಸರಿಗೆ ದೂರು ನೀಡಿದ್ದರು ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾಗಿದ್ದು, ಯುವಕನನ್ನು ತಪ್ಪಿತಸ್ತ ಎಂದು ಪರಿಗಣಿಸಿ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಫೋನ್​ನ ಸುರಕ್ಷತೆಗಾಗಿ ಫೇಸ್​ ಲಾಕ್​ ಅಥವಾ ಫಿಂಗರ್​ಪ್ರಿಂಟ್​ ಲಾಕ್​ ಇಡುವುದರ ಬದಲು ಪಿನ್​ ನಂಬರ್​ ಇಡುವುದು ಒಳಿತು. ಈ ರೀತಿಯಲ್ಲಿ ಆನ್ಲೈನ್​ನಲ್ಲಿ ವ್ಯವಹಾರ ನಡೆಸುವಾಗ ಫೋನ್ ಹಾಗೂ ಅದರ ಪಾಸ್ವರ್ಡ್​ಗಳನ್ನು ಸರಿಯಾದ ಕ್ರಮಗಳಲ್ಲಿ ಜೋಡಿಸಿಕೊಂಡಿರುವುದು ಮುಖ್ಯವಾಗಿರುತ್ತದೆ.

ಇದನ್ನೂ ಓದಿ:

ಕಾರಿನಲ್ಲಿ ಹಿಂಬಾಲಿಸಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ಎಂಎಸ್ ವಿದ್ಯಾರ್ಥಿ ಅರೆಸ್ಟ್

Supari For Robbery | ದಿಢೀರ್ ದುಡ್ಡು ಮಾಡಲು ಕಳ್ಳದಾರಿ ಹಿಡಿದು ಸುಪಾರಿ ಕೊಟ್ಟು ಚಿನ್ನದ ಗಟ್ಟಿ ದೋಚಿಸಿದ್ದ ಕಿಲಾಡಿ ಅರೆಸ್ಟ್

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!