ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಕೊಂದ ವ್ಯಕ್ತಿ

ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿ ಫ್ಲಿಪ್​ಕಾರ್ಟ್​ ಮೂಲಕ 1.5 ಲಕ್ಷ ರೂಪಾಯಿ ಬೆಲೆ ಬಾಳುವ ಐಫೋನ್​ನ್ನು ಕ್ಯಾಶ್​ ಆನ್ ಡೆಲಿವರಿಯಲ್ಲಿ ಆರ್ಡರ್ ಮಾಡಿದ್ದ, ಡೆಲಿವರಿ ಏಜೆಂಟ್​ ಅವರ ಮನೆಗೆ ಬಂದು ಐಫೋನ್ ಕೊಟ್ಟಿದ್ದಾರೆ ಆದರೆ ಆತನಿಗೆ ಹಣಕೊಡಬೇಕಲ್ಲಾ ಎಂದು ಚಿಂತಿಸಿ ಡೆಲಿವರಿ ಏಜೆಂಟ್​ನನ್ನೇ ಹತ್ಯೆ ಮಾಡಿ ಕಾಲುವೆಗೆ ಎಸೆದಿದ್ದಾನೆ.

ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಕೊಂದ ವ್ಯಕ್ತಿ
ಪೊಲೀಸ್
Follow us
|

Updated on: Oct 01, 2024 | 10:42 AM

ಐಫೋನ್ ಡೆಲಿವರಿ ಮಾಡಲು ಬಂದಿದ್ದ ಏಜೆಂಟ್ ಭರತ್​ ಎಂಬುವವರನ್ನು ​ಗಜಾನನ ಎಂಬಾತ ಸಹಚರರ ಜತೆ ಸೇರಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ನಡೆದಿದೆ. ವ್ಯಕ್ತಿ ಫ್ಲಿಪ್​ಕಾರ್ಟ್​ ಮೂಲಕ 1.5 ಲಕ್ಷ ರೂಪಾಯಿ ಬೆಲೆ ಬಾಳುವ ಐಫೋನ್​ನ್ನು ಕ್ಯಾಶ್​ ಆನ್ ಡೆಲಿವರಿಯಲ್ಲಿ ಆರ್ಡರ್ ಮಾಡಿದ್ದ, ಡೆಲಿವರಿ ಏಜೆಂಟ್​ ಅವರ ಮನೆಗೆ ಬಂದು ಐಫೋನ್ ಕೊಟ್ಟಿದ್ದಾರೆ ಆದರೆ ಆತನಿಗೆ ಹಣಕೊಡಬೇಕಲ್ಲಾ ಎಂದು ಚಿಂತಿಸಿ ಡೆಲಿವರಿ ಏಜೆಂಟ್​ನನ್ನೇ ಹತ್ಯೆ ಮಾಡಿ ಕಾಲುವೆಗೆ ಎಸೆದಿದ್ದಾನೆ.

ಸೆಪ್ಟೆಂಬರ್ 23 ರಂದು ನಿಶಾತ್‌ಗಂಜ್ ನಿವಾಸಿಯಾದ ಡೆಲಿವರಿ ಬಾಯ್ ಭರತ್ ಸಾಹು ಫೋನ್ ಡೆಲಿವರಿ ಮಾಡಲು ಅವರ ಮನೆಗೆ ಹೋಗಿದ್ದರು. ಅಲ್ಲಿ ಗಜಾನನ ಮತ್ತು ಅವನ ಸಹಚರರು ಅವರನ್ನು ಕೊಲೆ ಮಾಡಿದ್ದಾರೆ. ಸಾಹುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿ ಇಂದಿರಾ ಕಾಲುವೆಗೆ ಎಸೆದಿದ್ದಾರೆ.

ಎರಡು ದಿನಗಳ ಕಾಲ ಸಾಹು ಮನೆಗೆ ಬಾರದಿದ್ದಾಗ, ಆತನ ಕುಟುಂಬದವರು ಸೆಪ್ಟೆಂಬರ್ 25 ರಂದು ಚಿನ್ಹಾಟ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಸಾಹುವಿನ ಕಾಲ್ ಡಿಟೇಲ್ಸ್ ಸ್ಕ್ಯಾನ್ ಮಾಡಿ ಆತನ ಲೊಕೇಶನ್ ಹುಡುಕಿ ಪೊಲೀಸರು ಗಜಾನನ ನಂಬರ್ ಪತ್ತೆ ಮಾಡಿ ಆತನ ಸ್ನೇಹಿತ ಆಕಾಶ್​ನನ್ನು ತಲುಪಿದ್ದಾರೆ.

ಮತ್ತಷ್ಟು ಓದಿ: ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್: ಚಾಕು, ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿ

ವಿಚಾರಣೆ ವೇಳೆ ಆಕಾಶ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ಅಧಿಕಾರಿ ತಿಳಿಸಿದ್ದಾರೆ. ಹತ್ಯೆಯ ನಂತರ ಆಕಾಶ್ ಕೂಡ ಮುಂಬೈಗೆ ಪರಾರಿಯಾಗಿದ್ದ. ಆದರೆ, ಪೊಲೀಸರಿಗೆ ಇನ್ನೂ ಶವ ಪತ್ತೆಯಾಗಿಲ್ಲ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಕಾಲುವೆಯಲ್ಲಿ ದೇಹವನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ.

ಇಬ್ಬರು ಆರೋಪಿಗಳಾದ ಹಿಮಾಂಶು ಕನೋಜಿಯಾ ಮತ್ತು ಆಕಾಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೂರನೇ ಆರೋಪಿ ಗಜಾನನ ಪತ್ತೆಗೆ ಮೂರು ತಂಡಗಳನ್ನು ನಿಯೋಜಿಸಲಾಗಿದೆ. ಭರತ್ ಕುಮಾರ್ ಪ್ರಜಾಪತಿ (32), ಮೂಲತಃ ಅಮೇಥಿಯ ಜಮೋ ನಿವಾಸಿಯಾಗಿದ್ದು, ಚಿನ್ಹತ್ ಪ್ರದೇಶದ ಸತ್ರಿಖ್ ರಸ್ತೆಯ ಸವಿತಾ ವಿಹಾರ್‌ನಲ್ಲಿ ಪತ್ನಿ ಅಖಿಲೇಶ್ ಕುಮಾರಿಯೊಂದಿಗೆ ವಾಸಿಸುತ್ತಿದ್ದರು. ಅವರು ಇನ್‌ಸ್ಟಾ ಕಾರ್ಡ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿದ್ದರು.

ಕೊಲೆ ಮಾಡಿ ಮೊಬೈಲ್ ಹಾಗೂ ಹಣ ದೋಚಿದ್ದಾರೆ. ಆರೋಪಿಗಳು ಭರತ್ ಅವರ ದೇಹವನ್ನು ತುಂಡು ಮಾಡಿ ನಂತರ ಕಾಲುವೆಗೆ ಎಸೆದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಭರತ್ ಗಜಾನನ ಮನೆಯೊಳಗೆ ಹೋಗಿದ್ದು, ಹೊರಗೆ ಬಂದಿಲ್ಲ ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸ್ಪಷ್ಟವಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ