AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಕೊಂದ ವ್ಯಕ್ತಿ

ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿ ಫ್ಲಿಪ್​ಕಾರ್ಟ್​ ಮೂಲಕ 1.5 ಲಕ್ಷ ರೂಪಾಯಿ ಬೆಲೆ ಬಾಳುವ ಐಫೋನ್​ನ್ನು ಕ್ಯಾಶ್​ ಆನ್ ಡೆಲಿವರಿಯಲ್ಲಿ ಆರ್ಡರ್ ಮಾಡಿದ್ದ, ಡೆಲಿವರಿ ಏಜೆಂಟ್​ ಅವರ ಮನೆಗೆ ಬಂದು ಐಫೋನ್ ಕೊಟ್ಟಿದ್ದಾರೆ ಆದರೆ ಆತನಿಗೆ ಹಣಕೊಡಬೇಕಲ್ಲಾ ಎಂದು ಚಿಂತಿಸಿ ಡೆಲಿವರಿ ಏಜೆಂಟ್​ನನ್ನೇ ಹತ್ಯೆ ಮಾಡಿ ಕಾಲುವೆಗೆ ಎಸೆದಿದ್ದಾನೆ.

ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಕೊಂದ ವ್ಯಕ್ತಿ
ಪೊಲೀಸ್
ನಯನಾ ರಾಜೀವ್
|

Updated on: Oct 01, 2024 | 10:42 AM

Share

ಐಫೋನ್ ಡೆಲಿವರಿ ಮಾಡಲು ಬಂದಿದ್ದ ಏಜೆಂಟ್ ಭರತ್​ ಎಂಬುವವರನ್ನು ​ಗಜಾನನ ಎಂಬಾತ ಸಹಚರರ ಜತೆ ಸೇರಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ನಡೆದಿದೆ. ವ್ಯಕ್ತಿ ಫ್ಲಿಪ್​ಕಾರ್ಟ್​ ಮೂಲಕ 1.5 ಲಕ್ಷ ರೂಪಾಯಿ ಬೆಲೆ ಬಾಳುವ ಐಫೋನ್​ನ್ನು ಕ್ಯಾಶ್​ ಆನ್ ಡೆಲಿವರಿಯಲ್ಲಿ ಆರ್ಡರ್ ಮಾಡಿದ್ದ, ಡೆಲಿವರಿ ಏಜೆಂಟ್​ ಅವರ ಮನೆಗೆ ಬಂದು ಐಫೋನ್ ಕೊಟ್ಟಿದ್ದಾರೆ ಆದರೆ ಆತನಿಗೆ ಹಣಕೊಡಬೇಕಲ್ಲಾ ಎಂದು ಚಿಂತಿಸಿ ಡೆಲಿವರಿ ಏಜೆಂಟ್​ನನ್ನೇ ಹತ್ಯೆ ಮಾಡಿ ಕಾಲುವೆಗೆ ಎಸೆದಿದ್ದಾನೆ.

ಸೆಪ್ಟೆಂಬರ್ 23 ರಂದು ನಿಶಾತ್‌ಗಂಜ್ ನಿವಾಸಿಯಾದ ಡೆಲಿವರಿ ಬಾಯ್ ಭರತ್ ಸಾಹು ಫೋನ್ ಡೆಲಿವರಿ ಮಾಡಲು ಅವರ ಮನೆಗೆ ಹೋಗಿದ್ದರು. ಅಲ್ಲಿ ಗಜಾನನ ಮತ್ತು ಅವನ ಸಹಚರರು ಅವರನ್ನು ಕೊಲೆ ಮಾಡಿದ್ದಾರೆ. ಸಾಹುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿ ಇಂದಿರಾ ಕಾಲುವೆಗೆ ಎಸೆದಿದ್ದಾರೆ.

ಎರಡು ದಿನಗಳ ಕಾಲ ಸಾಹು ಮನೆಗೆ ಬಾರದಿದ್ದಾಗ, ಆತನ ಕುಟುಂಬದವರು ಸೆಪ್ಟೆಂಬರ್ 25 ರಂದು ಚಿನ್ಹಾಟ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಸಾಹುವಿನ ಕಾಲ್ ಡಿಟೇಲ್ಸ್ ಸ್ಕ್ಯಾನ್ ಮಾಡಿ ಆತನ ಲೊಕೇಶನ್ ಹುಡುಕಿ ಪೊಲೀಸರು ಗಜಾನನ ನಂಬರ್ ಪತ್ತೆ ಮಾಡಿ ಆತನ ಸ್ನೇಹಿತ ಆಕಾಶ್​ನನ್ನು ತಲುಪಿದ್ದಾರೆ.

ಮತ್ತಷ್ಟು ಓದಿ: ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್: ಚಾಕು, ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿ

ವಿಚಾರಣೆ ವೇಳೆ ಆಕಾಶ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ಅಧಿಕಾರಿ ತಿಳಿಸಿದ್ದಾರೆ. ಹತ್ಯೆಯ ನಂತರ ಆಕಾಶ್ ಕೂಡ ಮುಂಬೈಗೆ ಪರಾರಿಯಾಗಿದ್ದ. ಆದರೆ, ಪೊಲೀಸರಿಗೆ ಇನ್ನೂ ಶವ ಪತ್ತೆಯಾಗಿಲ್ಲ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಕಾಲುವೆಯಲ್ಲಿ ದೇಹವನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ.

ಇಬ್ಬರು ಆರೋಪಿಗಳಾದ ಹಿಮಾಂಶು ಕನೋಜಿಯಾ ಮತ್ತು ಆಕಾಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೂರನೇ ಆರೋಪಿ ಗಜಾನನ ಪತ್ತೆಗೆ ಮೂರು ತಂಡಗಳನ್ನು ನಿಯೋಜಿಸಲಾಗಿದೆ. ಭರತ್ ಕುಮಾರ್ ಪ್ರಜಾಪತಿ (32), ಮೂಲತಃ ಅಮೇಥಿಯ ಜಮೋ ನಿವಾಸಿಯಾಗಿದ್ದು, ಚಿನ್ಹತ್ ಪ್ರದೇಶದ ಸತ್ರಿಖ್ ರಸ್ತೆಯ ಸವಿತಾ ವಿಹಾರ್‌ನಲ್ಲಿ ಪತ್ನಿ ಅಖಿಲೇಶ್ ಕುಮಾರಿಯೊಂದಿಗೆ ವಾಸಿಸುತ್ತಿದ್ದರು. ಅವರು ಇನ್‌ಸ್ಟಾ ಕಾರ್ಡ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿದ್ದರು.

ಕೊಲೆ ಮಾಡಿ ಮೊಬೈಲ್ ಹಾಗೂ ಹಣ ದೋಚಿದ್ದಾರೆ. ಆರೋಪಿಗಳು ಭರತ್ ಅವರ ದೇಹವನ್ನು ತುಂಡು ಮಾಡಿ ನಂತರ ಕಾಲುವೆಗೆ ಎಸೆದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಭರತ್ ಗಜಾನನ ಮನೆಯೊಳಗೆ ಹೋಗಿದ್ದು, ಹೊರಗೆ ಬಂದಿಲ್ಲ ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸ್ಪಷ್ಟವಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!