AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಹೊಡೆಯಬೇಡಿ ಎಂದಿದ್ದಕ್ಕೆ ಚಾಕುವಿನಿಂದ ವ್ಯಕ್ತಿಯನ್ನು ತಿವಿದು ಕೊಂದ ಅಪ್ರಾಪ್ತ ಬಾಲಕ

ಪಟಾಕಿ ಹೊಡೆಯಬೇಡಿ ಎಂದಿದ್ದಕ್ಕೆ ವ್ಯಕ್ತಿಯೊಬ್ಬನನ್ನು 15 ವರ್ಷದ ಬಾಲಕ ತಿವಿದು ಕೊಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಪಟಾಕಿ ಹೊಡೆಯಬೇಡಿ ಎಂದಿದ್ದಕ್ಕೆ ಚಾಕುವಿನಿಂದ ವ್ಯಕ್ತಿಯನ್ನು ತಿವಿದು ಕೊಂದ ಅಪ್ರಾಪ್ತ ಬಾಲಕ
Fire Crackers
TV9 Web
| Edited By: |

Updated on: Oct 25, 2022 | 12:13 PM

Share

ಪಟಾಕಿ ಹೊಡೆಯಬೇಡಿ ಎಂದಿದ್ದಕ್ಕೆ ವ್ಯಕ್ತಿಯೊಬ್ಬನನ್ನು 15 ವರ್ಷದ ಬಾಲಕ ತಿವಿದು ಕೊಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಗಾಜಿನ ಬಾಟಲಿಯಲ್ಲಿ ಪಟಾಕಿ ಇರಿಸಿ ಹಚ್ಚುತ್ತಿದುದನ್ನು ವ್ಯಕ್ತಿಯೊಬ್ಬರು ವಿರೋಧಿಸಿದ್ದರು, ಮೂರು ಬಾಲಕರು ಹಾಗೂ ಈ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿತ್ತು.

ಬಳಿಕ ಕೋಪಗೊಂಡ ಬಾಲಕರು ಆ ವ್ಯಕ್ತಿಯನ್ನು ಥಳಿಸಲು ಪ್ರಾರಂಭಿಸಿದ್ದರು, ಜಗಳ ಅತಿರೇಕಕ್ಕೇರಿ ಕೊನೆಗೆ ಸಾವಿನಲ್ಲಿ ಅಂತ್ಯಗೊಂಡಿತ್ತು. ಅದರಲ್ಲಿ ಓರ್ವ ಬಾಲಕ ವ್ಯಕ್ತಿಗೆ ಚಾಕುವಿನಿಂದ ತಿವಿದು ಹಲ್ಲೆ ನಡೆಸಿದ್ದ, ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ, ಚಿಕ್ಕ ವಿಷಯ ವ್ಯಕ್ತಿಯನ್ನೇ ಬಲಿ ಪಡೆದಿದೆ.

ಪೊಲೀಸರು 14, 15 ವರ್ಷದ ಬಾಲಕರನ್ನು ವಶಕ್ಕೆ ಪಡೆದಿದ್ದು, 12 ವರ್ಷದ ಬಾಲಕಿನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತಪಟ್ಟವರು 21 ವರ್ಷದ ಸುನಿಲ್ ನಾಯ್ಡು ಎಂಬುದು ತಿಳಿದುಬಂದಿದೆ.

ಸಾಕಷ್ಟು ನಗರಗಳಲ್ಲಿ ಪಟಾಕಿಯನ್ನು ನಿಷೇಧಿಸಲಾಗಿದೆ. ಆದರೂ ಕೆಲವೆಡೆ ಮಾರಾಟ ಮಾಡಲಾಗುತ್ತಿದೆ. ಪಟಾಕಿ ಶಬ್ದ, ಹೊಗೆಯಿಂದ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳು ಕಾಡಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದರೂ ಜನರು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು