AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ, ದೆಹಲಿಯಲ್ಲಿ ನಡೆಯಿತು ಆಘಾತಕಾರಿ ಘಟನೆ

ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಲಿವ್ ಇನ್ ಸಂಗಾತಿ ಶ್ರದ್ದಾ ನಡುವೆ ಮೇ 18 ರಂದು  ಜಗಳ ನಡೆದಿದ್ದು ಅಫ್ತಾಬ್, ಶ್ರದ್ದಾಳ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ್ದ

ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ, ದೆಹಲಿಯಲ್ಲಿ ನಡೆಯಿತು ಆಘಾತಕಾರಿ ಘಟನೆ
ಶ್ರದ್ಧಾImage Credit source: NDTV
TV9 Web
| Edited By: |

Updated on:Nov 14, 2022 | 12:54 PM

Share

ದೆಹಲಿ: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯ(live-in partner) ಕತ್ತು ಹಿಸುಕಿ ಕೊಲೆಗೈದು, ಆಕೆಯ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ದೆಹಲಿಯ(Delhi) ವಿವಿಧ ಪ್ರದೇಶಗಳಲ್ಲಿ ಎಸೆದಿರುವ ಘಟನೆ ನಡೆದಿದೆ  ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೇಹದ ಭಾಗಗಳನ್ನು ಬಿಸಾಡಲು ಆತ ಪ್ರತಿದಿನ ಮುಂಜಾನೆ 2 ಗಂಟೆಗೆ ಹೊರಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ,  ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಲಿವ್ ಇನ್ ಸಂಗಾತಿ ಶ್ರದ್ದಾ ನಡುವೆ ಮೇ 18 ರಂದು  ಜಗಳ ನಡೆದಿದ್ದು ಅಫ್ತಾಬ್, ಶ್ರದ್ದಾಳ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ್ದ. ನಂತರ 18 ದಿನ ಆತ ಆಕೆಯ ದೇಹದ ತುಂಡುಗಳನ್ನು ದೆಹಲಿಯ ವಿವಿಧ ಭಾಗಗಳಲ್ಲಿ ಬಿಸಾಡಿದ್ದಾನೆ. 26ರ ಹರೆಯದ ಶ್ರದ್ಧಾ ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ಆಕೆ ಪೂನಾವಲಾನನ್ನು ಭೇಟಿಯಾಗಿದ್ದಳು. ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿ ನಂತರ ಜತೆಗೆ ಇರಲು ನಿರ್ಧರಿಸಿದ್ದರು. ಆದರೆ ಶ್ರದ್ಧಾಳ ಕುಟುಂಬವು ಈ ಸಂಬಂಧವನ್ನು ಒಪ್ಪದೇ ಇದ್ದಾಗ ಈ ಯುವಜೋಡಿ ದೆಹಲಿಗೆ ಬಂದಿದ್ದರು. ದೆಹಲಿಯ ಮೆಹ್ರೌಲಿಯ ಫ್ಲಾಟ್‌ನಲ್ಲಿ ಅವರಿಬ್ಬರೂ ವಾಸವಾಗಿದ್ದರು,

ಸ್ವಲ್ಪ ಸಮಯದ ನಂತರ, ಶ್ರದ್ಧಾ ತನ್ನ ಕುಟುಂಬದ ಫೋನ್ ಕರೆಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದರು. ನವೆಂಬರ್ 8 ರಂದು ಆಕೆಯ ತಂದೆ ವಿಕಾಸ್ ಮದನ್ ಮಗಳನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದರು. ಅವರು ಫ್ಲಾಟ್ ತಲುಪಿದಾಗ, ಅದು ಲಾಕ್ ಆಗಿತ್ತು. ಅವರು ಮೆಹ್ರೌಲಿ ಪೊಲೀಸರನ್ನು ಸಂಪರ್ಕಿಸಿ ಅಪಹರಣ ದೂರು ದಾಖಲಿಸಿದ್ದರು.

ಅವರ ದೂರಿನ ಆಧಾರದ ಮೇಲೆ ಪೊಲೀಸರು ಪೂನಾವಾಲಾನನ್ನು ಶನಿವಾರ ಬಂಧಿಸಿದ್ದಾರೆ. ಶ್ರದ್ಧಾ ಆತನನ್ನುಮದುವೆಯಾಗಲು ಬಯಸಿದ್ದರಿಂದ ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ತನಿಖೆಯ ವೇಳೆ ಆತ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಶ್ರದ್ಧಾ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Published On - 12:48 pm, Mon, 14 November 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ