ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ, ದೆಹಲಿಯಲ್ಲಿ ನಡೆಯಿತು ಆಘಾತಕಾರಿ ಘಟನೆ

ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಲಿವ್ ಇನ್ ಸಂಗಾತಿ ಶ್ರದ್ದಾ ನಡುವೆ ಮೇ 18 ರಂದು  ಜಗಳ ನಡೆದಿದ್ದು ಅಫ್ತಾಬ್, ಶ್ರದ್ದಾಳ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ್ದ

ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ, ದೆಹಲಿಯಲ್ಲಿ ನಡೆಯಿತು ಆಘಾತಕಾರಿ ಘಟನೆ
ಶ್ರದ್ಧಾImage Credit source: NDTV
Follow us
| Updated By: ರಶ್ಮಿ ಕಲ್ಲಕಟ್ಟ

Updated on:Nov 14, 2022 | 12:54 PM

ದೆಹಲಿ: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯ(live-in partner) ಕತ್ತು ಹಿಸುಕಿ ಕೊಲೆಗೈದು, ಆಕೆಯ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ದೆಹಲಿಯ(Delhi) ವಿವಿಧ ಪ್ರದೇಶಗಳಲ್ಲಿ ಎಸೆದಿರುವ ಘಟನೆ ನಡೆದಿದೆ  ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೇಹದ ಭಾಗಗಳನ್ನು ಬಿಸಾಡಲು ಆತ ಪ್ರತಿದಿನ ಮುಂಜಾನೆ 2 ಗಂಟೆಗೆ ಹೊರಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ,  ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಲಿವ್ ಇನ್ ಸಂಗಾತಿ ಶ್ರದ್ದಾ ನಡುವೆ ಮೇ 18 ರಂದು  ಜಗಳ ನಡೆದಿದ್ದು ಅಫ್ತಾಬ್, ಶ್ರದ್ದಾಳ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ್ದ. ನಂತರ 18 ದಿನ ಆತ ಆಕೆಯ ದೇಹದ ತುಂಡುಗಳನ್ನು ದೆಹಲಿಯ ವಿವಿಧ ಭಾಗಗಳಲ್ಲಿ ಬಿಸಾಡಿದ್ದಾನೆ. 26ರ ಹರೆಯದ ಶ್ರದ್ಧಾ ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ಆಕೆ ಪೂನಾವಲಾನನ್ನು ಭೇಟಿಯಾಗಿದ್ದಳು. ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿ ನಂತರ ಜತೆಗೆ ಇರಲು ನಿರ್ಧರಿಸಿದ್ದರು. ಆದರೆ ಶ್ರದ್ಧಾಳ ಕುಟುಂಬವು ಈ ಸಂಬಂಧವನ್ನು ಒಪ್ಪದೇ ಇದ್ದಾಗ ಈ ಯುವಜೋಡಿ ದೆಹಲಿಗೆ ಬಂದಿದ್ದರು. ದೆಹಲಿಯ ಮೆಹ್ರೌಲಿಯ ಫ್ಲಾಟ್‌ನಲ್ಲಿ ಅವರಿಬ್ಬರೂ ವಾಸವಾಗಿದ್ದರು,

ಸ್ವಲ್ಪ ಸಮಯದ ನಂತರ, ಶ್ರದ್ಧಾ ತನ್ನ ಕುಟುಂಬದ ಫೋನ್ ಕರೆಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದರು. ನವೆಂಬರ್ 8 ರಂದು ಆಕೆಯ ತಂದೆ ವಿಕಾಸ್ ಮದನ್ ಮಗಳನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದರು. ಅವರು ಫ್ಲಾಟ್ ತಲುಪಿದಾಗ, ಅದು ಲಾಕ್ ಆಗಿತ್ತು. ಅವರು ಮೆಹ್ರೌಲಿ ಪೊಲೀಸರನ್ನು ಸಂಪರ್ಕಿಸಿ ಅಪಹರಣ ದೂರು ದಾಖಲಿಸಿದ್ದರು.

ಅವರ ದೂರಿನ ಆಧಾರದ ಮೇಲೆ ಪೊಲೀಸರು ಪೂನಾವಾಲಾನನ್ನು ಶನಿವಾರ ಬಂಧಿಸಿದ್ದಾರೆ. ಶ್ರದ್ಧಾ ಆತನನ್ನುಮದುವೆಯಾಗಲು ಬಯಸಿದ್ದರಿಂದ ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ತನಿಖೆಯ ವೇಳೆ ಆತ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಶ್ರದ್ಧಾ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Published On - 12:48 pm, Mon, 14 November 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ