AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ಅವಳಿ ಹೆಣ್ಣು ಶಿಶುಗಳನ್ನು ಕದ್ದು, ಕೊಂದು, ಹೂತು ಹಾಕಿದ ಪಾಪಿ ತಂದೆ

ವ್ಯಕ್ತಿಯೊಬ್ಬ ಪತ್ನಿ ಗಂಡು ಮಗುವನ್ನು ಹೆರಲಿಲ್ಲ ಎನ್ನುವ ಕೋಪಕ್ಕೆ, ಅವಳಿ ಹೆಣ್ಣು ಶಿಶುಗಳನ್ನು ಕೊಂದು ಹೂತು ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ಅವಳಿ ಹೆಣ್ಣು ಶಿಶುಗಳನ್ನು ಕದ್ದು, ಕೊಂದು, ಹೂತು ಹಾಕಿದ ಪಾಪಿ ತಂದೆ
ನಯನಾ ರಾಜೀವ್
|

Updated on: Jun 24, 2024 | 2:58 PM

Share

ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ವ್ಯಕ್ತಿಯೊಬ್ಬ ಅವಳಿ ಹೆಣ್ಣು ಶಿಶುಗಳನ್ನು ಕದ್ದೊಯ್ದು, ಕೊಲೆ ಮಾಡಿ ಹೂತು ಹಾಕಿರುವ ಹೃದಯ ವಿದ್ರಾವಕ ಘಟನೆ ದೆಹಲಿಯಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುತ್ತಿದ್ದಂತೆ ಗಂಡು ಮಗು ಹುಟ್ಟಲಿಲ್ಲ ಎನ್ನುವ ಕಾರಣ ಎರಡು ಶಿಶುಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಚಾರದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಆರೋಪಿ ನೀರಜ್ ಸೋಲಂಕಿ ಪರಾರಿಯಾಗಿದ್ದಾನೆ, ಮತ್ತು ಮಕ್ಕಳ ಅಜ್ಜನನ್ನು ಕೂಡ ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ಪೂಜಾ ಎಂಬ ಮಹಿಳೆ ಹರ್ಯಾಣದ ರೋಹ್ಟಕ್​ನಲ್ಲಿ ಅವಳಿ ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ ಆಕೆಯ ಪತಿ ನೀರಜ್ ಶಿಶುಗಳನ್ನು ಕದ್ದೊಯ್ದಿದ್ದ ಎನ್ನಲಾಗಿದೆ.

ಜೂನ್​ 1 ರಂದು ಆಸ್ಪತ್ರೆಯಿಂದ ಮನೆಗೆ ಹೊರಟಿದ್ದರು, ತಾನು ಮಕ್ಕಳೊಂದಿಗೆ ಬೇರೆ ಕಾರಿನಲ್ಲಿ ಬರುವುದಾಗಿ ಹೇಳಿ ಪತ್ನಿಯನ್ನು ಮನೆಗೆ ಕಳುಹಿಸಿ ಈ ದುಷ್ಕೃತ್ಯವೆಸಗಿದ್ದಾರೆ. ಎರಡು ದಿನಗಳ ನಂತರ ದೆಹಲಿಯ ಹೊರಭಾಗದ ಪೂತ್ ಕಲಾನ್‌ನಲ್ಲಿ ಶಿಶುಗಳನ್ನು ಹೂಳಲಾಗಿದೆ ಎನ್ನುವ ವಿಚಾರ ತಿಳಿದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.

ಮತ್ತಷ್ಟು ಓದಿ: ಅತ್ತಿಗೆ ಮೇಲಿನ ಕೋಪಕ್ಕೆ 3 ವರ್ಷದ ಮಗುವಿನ ಕತ್ತು ಸೀಳಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ

2022ರಲ್ಲಿ ಪೂಜಾ ನೀರಜ್​ ಎಂಬುವವನನ್ನು ವಿವಾಹವಾಗಿದ್ದರು, ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು, ಗಂಡು ಮಗುವನ್ನೇ ಹೆರಬೇಕು ಎಂದು ಒತ್ತಡ ಹೇರುತ್ತಿದ್ದರು ಎಂದು ತಿಳಿಸಿದ್ದಾರೆ. ಪೊಲೀಸರು ಜೂನ್ 5 ರಂದು ಎರಡು ಶಿಶುಗಳನ್ನು ಮಣ್ಣಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ