AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ಅವಳಿ ಹೆಣ್ಣು ಶಿಶುಗಳನ್ನು ಕದ್ದು, ಕೊಂದು, ಹೂತು ಹಾಕಿದ ಪಾಪಿ ತಂದೆ

ವ್ಯಕ್ತಿಯೊಬ್ಬ ಪತ್ನಿ ಗಂಡು ಮಗುವನ್ನು ಹೆರಲಿಲ್ಲ ಎನ್ನುವ ಕೋಪಕ್ಕೆ, ಅವಳಿ ಹೆಣ್ಣು ಶಿಶುಗಳನ್ನು ಕೊಂದು ಹೂತು ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ಅವಳಿ ಹೆಣ್ಣು ಶಿಶುಗಳನ್ನು ಕದ್ದು, ಕೊಂದು, ಹೂತು ಹಾಕಿದ ಪಾಪಿ ತಂದೆ
ನಯನಾ ರಾಜೀವ್
|

Updated on: Jun 24, 2024 | 2:58 PM

Share

ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ವ್ಯಕ್ತಿಯೊಬ್ಬ ಅವಳಿ ಹೆಣ್ಣು ಶಿಶುಗಳನ್ನು ಕದ್ದೊಯ್ದು, ಕೊಲೆ ಮಾಡಿ ಹೂತು ಹಾಕಿರುವ ಹೃದಯ ವಿದ್ರಾವಕ ಘಟನೆ ದೆಹಲಿಯಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುತ್ತಿದ್ದಂತೆ ಗಂಡು ಮಗು ಹುಟ್ಟಲಿಲ್ಲ ಎನ್ನುವ ಕಾರಣ ಎರಡು ಶಿಶುಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಚಾರದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಆರೋಪಿ ನೀರಜ್ ಸೋಲಂಕಿ ಪರಾರಿಯಾಗಿದ್ದಾನೆ, ಮತ್ತು ಮಕ್ಕಳ ಅಜ್ಜನನ್ನು ಕೂಡ ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ಪೂಜಾ ಎಂಬ ಮಹಿಳೆ ಹರ್ಯಾಣದ ರೋಹ್ಟಕ್​ನಲ್ಲಿ ಅವಳಿ ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ ಆಕೆಯ ಪತಿ ನೀರಜ್ ಶಿಶುಗಳನ್ನು ಕದ್ದೊಯ್ದಿದ್ದ ಎನ್ನಲಾಗಿದೆ.

ಜೂನ್​ 1 ರಂದು ಆಸ್ಪತ್ರೆಯಿಂದ ಮನೆಗೆ ಹೊರಟಿದ್ದರು, ತಾನು ಮಕ್ಕಳೊಂದಿಗೆ ಬೇರೆ ಕಾರಿನಲ್ಲಿ ಬರುವುದಾಗಿ ಹೇಳಿ ಪತ್ನಿಯನ್ನು ಮನೆಗೆ ಕಳುಹಿಸಿ ಈ ದುಷ್ಕೃತ್ಯವೆಸಗಿದ್ದಾರೆ. ಎರಡು ದಿನಗಳ ನಂತರ ದೆಹಲಿಯ ಹೊರಭಾಗದ ಪೂತ್ ಕಲಾನ್‌ನಲ್ಲಿ ಶಿಶುಗಳನ್ನು ಹೂಳಲಾಗಿದೆ ಎನ್ನುವ ವಿಚಾರ ತಿಳಿದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.

ಮತ್ತಷ್ಟು ಓದಿ: ಅತ್ತಿಗೆ ಮೇಲಿನ ಕೋಪಕ್ಕೆ 3 ವರ್ಷದ ಮಗುವಿನ ಕತ್ತು ಸೀಳಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ

2022ರಲ್ಲಿ ಪೂಜಾ ನೀರಜ್​ ಎಂಬುವವನನ್ನು ವಿವಾಹವಾಗಿದ್ದರು, ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು, ಗಂಡು ಮಗುವನ್ನೇ ಹೆರಬೇಕು ಎಂದು ಒತ್ತಡ ಹೇರುತ್ತಿದ್ದರು ಎಂದು ತಿಳಿಸಿದ್ದಾರೆ. ಪೊಲೀಸರು ಜೂನ್ 5 ರಂದು ಎರಡು ಶಿಶುಗಳನ್ನು ಮಣ್ಣಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್