AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಪತ್ನಿಗೆ ಒಳ್ಳೆ ಬಟ್ಟೆ ತೊಡಲು ಹೇಳು ಇಲ್ಲ ಆ್ಯಸಿಡ್​ ಹಾಕುವೆ: ಪತ್ರಕರ್ತನ ಹೆಂಡತಿಗೆ ಬೆದರಿಕೆ

ಬೆಂಗಳೂರಿನ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಮ್​ ಮೂಲಕ ಮಹಿಳೆಗೆ ಆ್ಯಸಿಡ್​ ಹಾಕುತ್ತೇನೆ ಅಂತ ಜೀವ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕಿದ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಬಳಕೆದಾರರು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ನಿನ್ನ ಪತ್ನಿಗೆ ಒಳ್ಳೆ ಬಟ್ಟೆ ತೊಡಲು ಹೇಳು ಇಲ್ಲ ಆ್ಯಸಿಡ್​ ಹಾಕುವೆ: ಪತ್ರಕರ್ತನ ಹೆಂಡತಿಗೆ ಬೆದರಿಕೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Oct 11, 2024 | 2:34 PM

ಬೆಂಗಳೂರು, ಅಕ್ಟೋಬರ್​ 11: ಆ್ಯಸಿಡ್ (Acid) ಹಾಕುತ್ತೇನೆ ಅಂತ ಸಾಮಾಜಿಕ ಜಾಲತಾಣದ (Social Media) ಮೂಲಕ ಮಹಿಳೆಗೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಮಹಿಳೆಯ ಪತಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಹಾಕಿದ್ದು, ಆರೋಪಿಯ ವಿರುದ್ಧ ಕ್ರಮಕೈಗೊಳ್ಳಿ ಎಂದು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್​ ಮಾಡಿದ್ದಾರೆ. ನಿಕಿತ್​ ಶೆಟ್ಟಿ ಜೀವ ಬೆದರಿಕೆ ಹಾಕಿದ ಆರೋಪಿ.​

ಆರೋಪಿ ನಿಕಿತ್​ ಶೆಟ್ಟಿ ಪತ್ರಕರ್ತ ಶಹಭಾಜ್​ ಅನ್ಸರ್​ ಅವರ ಪತ್ನಿಗೆ ಜೀವ ಬೆದರಿಕೆ ಹಾಕಿದ್ದಾನೆ. ಹೌದು, ಪತ್ರಕರ್ತ ಶಹಭಾಜ್​ ಅನ್ಸರ್​ ಅವರ ಪತ್ನಿಗೆ ಆ್ಯಸಿಡ್​ ಹಾಕುತ್ತೇನೆ ಎಂದು ಆರೋಪಿ ನಿಕಿತ್​ ಶೆಟ್ಟಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಮ್​​ನಲ್ಲಿ ಪೋಸ್ಟ್​​ ಹಾಕಿದ್ದಾನೆ.

ಇನ್ನು, ಆರೋಪಿ ನಿಕಿತ್​ ಶೆಟ್ಟಿ ಬಟ್ಟೆ ತೊಡುವ ವಿಚಾರವಾಗಿ ಬೆದರಿಕೆ ಹಾಕಿದ್ದಾನೆ. ” ಕರ್ನಾಟಕದಲ್ಲಿ ಒಳ್ಳೆ ರೀತಿ ಉಡುಗೆ ತೊಟ್ಟುಕೊಳ್ಳುವಂತೆ ನಿನ್ನ ಪತ್ನಿಗೆ ಹೇಳು. ಇಲ್ಲದಿದ್ದರೆ ನಾನು ಆಕೆಯ ಮುಖಕ್ಕೆ ಆ್ಯಸಿಡ್​ ಹಾಕುತ್ತೇನೆ” ಎಂದು ಸಾಮಾಜಿಕ ಜಾಲತಾಣ ಇನ್​​ಸ್ಟಾಗ್ರಾಮ್​ ಮೂಲಕ ಪತ್ರಕರ್ತ ಶಹಭಾಜ್​ ಅನ್ಸರ್​ ಅವರ ಪತ್ನಿಗೆ ಬೆದರಿಕೆ ​ ಹಾಕಿದ್ದಾನೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಆ್ಯಸಿಡ್​ ಎರಚಿದ ದುಷ್ಕರ್ಮಿಗಳು

ಸಾಮಾಜಿಕ ಜಾಲತಾಣ ಬಳಕೆದಾರರು ನಿಕಿತ್​ ಶೆಟ್ಟಿ ಕೆಲಸ ಮಾಡುವ ಕಂಪನಿಯನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣದ ಮುಖಾಂತರ ಕಂಪನಿ ಮೇಲೆ ಒತ್ತಡ ಹೇರಿದ್ದಾರೆ.

ಟ್ವಿಟರ್​​ ಪೋಸ್ಟ್​​

ಈ ​ವಿಚಾರವಾಗಿ ನಿಕಿತ್​ ಶೆಟ್ಟಿ ಕೆಲಸ ಮಾಡುತ್ತಿದ್ದ ಕಂಪನಿ ಪ್ರತಿಕ್ರಿಯಿಸಿದ್ದು, “ನಮ್ಮ ಉದ್ಯೋಗಿ ನಿಕಿತ್​ ಶೆಟ್ಟಿ ಹಾಕಿರುವ ಪೋಸ್ಟ್​​ಅನ್ನು ನಾವೂ ವಿರೋಧಿಸುತ್ತೇವೆ. ಮತ್ತೊಬ್ಬರ ಉಡುಗೆ ಬಗ್ಗೆ ಮಾತನಾಡುವುದು ತಪ್ಪು. ಕಂಪನಿ ಯಾವಾಗಲೂ ಭದ್ರತೆ ಮತ್ತು ಶಾಂತಿಯುತ ವಾತಾವರಣ ಸೃಷ್ಟಿಸಲು ಇಷ್ಟಪಡುತ್ತದೆ. ಹೀಗಾಗಿ, ನಿಕಿತ್​ ಶೇಟ್ಟಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಅವರನ್ನು ಐದು ವರ್ಷ ಕೆಲಸದಿಂದ ವಜಾ ಮಾಡಿದ್ದೇವೆ. ಅಲ್ಲದೇ ನಿಕಿತ್ ಶೇಟ್ಟಿ ವಿರುದ್ಧ ದೂರು ದಾಖಲಿಸಿದ್ದೇವೆ​ ಎಂದು ಹೇಳಿದೆ.

ಇದಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​ ಬಳಕೆದಾರರು ಕಂಪನಿಗೆ ಧನ್ಯವಾದ ಹೇಳಿದ್ದಾರೆ. ಮತ್ತು ಅನ್ಸಾರ್​ ಅವರು ಕೂಡ ಕಂಪನಿಗೆ ಧನ್ಯವಾದ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:30 pm, Fri, 11 October 24

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ