AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲಶಂಕಿಸಿ.. FBನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟ ಪತಿರಾಯ

ಬೆಂಗಳೂರು: ಪತ್ನಿಯ ಶೀಲಶಂಕಿಸಿದ ಪಾಪಿ ಪತಿರಾಯನೊಬ್ಬ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. KR ಪುರ ಬಳಿಯಿರುವ ಹೊಂಗಸಂದ್ರದ ನಿವಾಸಿ ಹರಿಕೃಷ್ಣ ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ. ಪತ್ನಿಯ ಜೊತೆಗಿನ ಖಾಸಗಿ ವಿಡಿಯೋವನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ ನಂತರ ಅದನ್ನು ಫೇಸ್​ಬುಕ್​ನಲ್ಲಿ ಅಪ್ಲೊಡ್ ಮಾಡಿದ್ದಾನೆ. ಜೊತೆಗೆ, ತನ್ನ ಪತ್ನಿಯ ಸ್ನೇಹಿತರಿಗೆ ಮತ್ತಷ್ಟು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡಿದ್ದಾನಂತೆ. ಈ ಸಂಬಂಧ ನೊಂದ ಪತ್ನಿಯಿಂದ ವೈಟ್​ಫೀಲ್ಡ್ CEN ಪೊಲೀಸ್ ಠಾಣೆಯಲ್ಲಿ ದೂರು […]

ಪತ್ನಿಯ ಶೀಲಶಂಕಿಸಿ.. FBನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟ ಪತಿರಾಯ
KUSHAL V
|

Updated on: Oct 27, 2020 | 10:47 AM

Share

ಬೆಂಗಳೂರು: ಪತ್ನಿಯ ಶೀಲಶಂಕಿಸಿದ ಪಾಪಿ ಪತಿರಾಯನೊಬ್ಬ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. KR ಪುರ ಬಳಿಯಿರುವ ಹೊಂಗಸಂದ್ರದ ನಿವಾಸಿ ಹರಿಕೃಷ್ಣ ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ. ಪತ್ನಿಯ ಜೊತೆಗಿನ ಖಾಸಗಿ ವಿಡಿಯೋವನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ ನಂತರ ಅದನ್ನು ಫೇಸ್​ಬುಕ್​ನಲ್ಲಿ ಅಪ್ಲೊಡ್ ಮಾಡಿದ್ದಾನೆ. ಜೊತೆಗೆ, ತನ್ನ ಪತ್ನಿಯ ಸ್ನೇಹಿತರಿಗೆ ಮತ್ತಷ್ಟು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡಿದ್ದಾನಂತೆ. ಈ ಸಂಬಂಧ ನೊಂದ ಪತ್ನಿಯಿಂದ ವೈಟ್​ಫೀಲ್ಡ್ CEN ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಂತ್ರಸ್ತೆ ದೂರಿನನ್ವಯ ಆಕೆಯ ಪತಿ ಹರಿಕೃಷ್ಣಾನ ವಿರುದ್ಧ FIR ದಾಖಲಾಗಿದೆ.

ಏನಿದು ಪ್ರಕರಣ? ಅಸಲಿಗೆ, ಸಂತ್ರಸ್ತೆ ಆರೋಪಿ ಹರಿಕೃಷ್ಣನಿಗೆ ಎರಡನೇ ಪತ್ನಿ.  2015 ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆಗೆ ಖಾಸಗಿ ಕಂಪನಿಯೊಂದರಲ್ಲಿ ಆರೋಪಿಯ ಪರಿಚಯವಾಗಿತ್ತು. ಆದರೆ, ಸಂತ್ರಸ್ತೆ ತನ್ನನ್ನ ಮದುವೆಯಾದರೂ ತನ್ನ ಮಾಜಿ ಪತಿ ಜೊತೆ ಸಂಬಂಧ ಮುಂದುವರಿಸಿದ್ದಾಳೆ ಅನ್ನೋ ಗುಮಾನಿಯಲ್ಲಿ ಹರಿಕೃಷ್ಣ ಆಕಗೆ ಕಿರುಕುಳ ನೀಡ್ತಿದ್ದನಂತೆ.

ಈ ಹಿಂದೆ, ಸಂತ್ರಸ್ತೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದಳಂತೆ. ಆಗ ಇಬ್ಬರಿಗೂ, ಪೊಲೀಸರು ಬುದ್ಧಿವಾದ ಹೇಳಿ ಕಳುಹಿಸಿದ್ದರು. ನಂತರ ಹರಿಕೃಷ್ಣಾ, ಪತ್ನಿ ಜೊತೆಗಿದ್ದ ಖಾಸಗಿ ಕ್ಷಣಗಳ ವಿಡಿಯೋವನ್ನು ಚಿತ್ರೀಕರಿಸಿಕೊಂಡು ಅದನ್ನು WhatsApp ಮೂಲಕ ಸ್ನೇಹಿತರಿಗೆಲ್ಲಾ ಶೇರ್​ ಮಾಡಿದ್ದನಂತೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್