AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ

ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ
ಬಂಧನImage Credit source: India Today
Follow us
ನಯನಾ ರಾಜೀವ್
|

Updated on: Aug 19, 2023 | 8:52 AM

ಗುರುಗ್ರಾಮ, ಆಗಸ್ಟ್​ 19: ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಉತ್ತರ ಪ್ರದೇಶ ಮೂಲದವರಾಗಿದ್ದು, ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಶಿವಂ ಒತ್ತಾಯಿಸಿದ್ದ ಎಂದು ಆರೋಪಿಸಿದ್ದಾರೆ. ಆಕೆ ನಿರಾಕರಿಸಿದಾಗ ಸ್ಕ್ರೂಡ್ರೈವರ್‌ನಿಂದ ಕುತ್ತಿಗೆಗೆ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಅವರು ಗುರುಗ್ರಾಮ ಬಾಡಿಗೆ ಮನೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು, ಅಲ್ಲಿ ಅವರು ಯುಪಿಯ ಕನೌಜ್ ನಿವಾಸಿ ಶಿವಂ ಕುಮಾರ್ ಅವರನ್ನು ಭೇಟಿಯಾದರು.

ನಾವು ನಮ್ಮ ಲಿವ್-ಇನ್ ಸಂಬಂಧವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ, ಮದುವೆಯ ನೆಪದಲ್ಲಿ ಶಿವಮ್ ನನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇತ್ತೀಚೆಗಷ್ಟೇ ಶಿವಂ ಮದುವೆಯಾಗಿರುವುದು ನನಗೆ ಗೊತ್ತಾಯಿತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಗುರುವಾರ ಸಂಜೆ ಬಂದು ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದರು. ನಾನು ನಿರಾಕರಿಸಿದಾಗ ಕೋಪಗೊಂಡು ಸ್ಕ್ರೂಡ್ರೈವರ್‌ನಿಂದ ನನ್ನ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ. ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ನಾವು ಅವನನ್ನು ವಿಚಾರಣೆ ನಡೆಸುತ್ತಿದ್ದೇವೆ. ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸಿಪಿ (ಅಪರಾಧ) ವರುಣ್ ದಹಿಯಾ ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು