AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ

ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ
ಬಂಧನImage Credit source: India Today
ನಯನಾ ರಾಜೀವ್
|

Updated on: Aug 19, 2023 | 8:52 AM

Share

ಗುರುಗ್ರಾಮ, ಆಗಸ್ಟ್​ 19: ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಉತ್ತರ ಪ್ರದೇಶ ಮೂಲದವರಾಗಿದ್ದು, ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಶಿವಂ ಒತ್ತಾಯಿಸಿದ್ದ ಎಂದು ಆರೋಪಿಸಿದ್ದಾರೆ. ಆಕೆ ನಿರಾಕರಿಸಿದಾಗ ಸ್ಕ್ರೂಡ್ರೈವರ್‌ನಿಂದ ಕುತ್ತಿಗೆಗೆ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಅವರು ಗುರುಗ್ರಾಮ ಬಾಡಿಗೆ ಮನೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು, ಅಲ್ಲಿ ಅವರು ಯುಪಿಯ ಕನೌಜ್ ನಿವಾಸಿ ಶಿವಂ ಕುಮಾರ್ ಅವರನ್ನು ಭೇಟಿಯಾದರು.

ನಾವು ನಮ್ಮ ಲಿವ್-ಇನ್ ಸಂಬಂಧವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ, ಮದುವೆಯ ನೆಪದಲ್ಲಿ ಶಿವಮ್ ನನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇತ್ತೀಚೆಗಷ್ಟೇ ಶಿವಂ ಮದುವೆಯಾಗಿರುವುದು ನನಗೆ ಗೊತ್ತಾಯಿತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಗುರುವಾರ ಸಂಜೆ ಬಂದು ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದರು. ನಾನು ನಿರಾಕರಿಸಿದಾಗ ಕೋಪಗೊಂಡು ಸ್ಕ್ರೂಡ್ರೈವರ್‌ನಿಂದ ನನ್ನ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ. ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ನಾವು ಅವನನ್ನು ವಿಚಾರಣೆ ನಡೆಸುತ್ತಿದ್ದೇವೆ. ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸಿಪಿ (ಅಪರಾಧ) ವರುಣ್ ದಹಿಯಾ ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ