AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ

ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ
ಬಂಧನImage Credit source: India Today
ನಯನಾ ರಾಜೀವ್
|

Updated on: Aug 19, 2023 | 8:52 AM

Share

ಗುರುಗ್ರಾಮ, ಆಗಸ್ಟ್​ 19: ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಉತ್ತರ ಪ್ರದೇಶ ಮೂಲದವರಾಗಿದ್ದು, ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಶಿವಂ ಒತ್ತಾಯಿಸಿದ್ದ ಎಂದು ಆರೋಪಿಸಿದ್ದಾರೆ. ಆಕೆ ನಿರಾಕರಿಸಿದಾಗ ಸ್ಕ್ರೂಡ್ರೈವರ್‌ನಿಂದ ಕುತ್ತಿಗೆಗೆ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಅವರು ಗುರುಗ್ರಾಮ ಬಾಡಿಗೆ ಮನೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು, ಅಲ್ಲಿ ಅವರು ಯುಪಿಯ ಕನೌಜ್ ನಿವಾಸಿ ಶಿವಂ ಕುಮಾರ್ ಅವರನ್ನು ಭೇಟಿಯಾದರು.

ನಾವು ನಮ್ಮ ಲಿವ್-ಇನ್ ಸಂಬಂಧವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ, ಮದುವೆಯ ನೆಪದಲ್ಲಿ ಶಿವಮ್ ನನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇತ್ತೀಚೆಗಷ್ಟೇ ಶಿವಂ ಮದುವೆಯಾಗಿರುವುದು ನನಗೆ ಗೊತ್ತಾಯಿತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಗುರುವಾರ ಸಂಜೆ ಬಂದು ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದರು. ನಾನು ನಿರಾಕರಿಸಿದಾಗ ಕೋಪಗೊಂಡು ಸ್ಕ್ರೂಡ್ರೈವರ್‌ನಿಂದ ನನ್ನ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ. ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ನಾವು ಅವನನ್ನು ವಿಚಾರಣೆ ನಡೆಸುತ್ತಿದ್ದೇವೆ. ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸಿಪಿ (ಅಪರಾಧ) ವರುಣ್ ದಹಿಯಾ ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ