AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಆರೋಪ, ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನು ಕಂಬಕ್ಕೆ ಕಟ್ಟಿಹಾಕಿ ಉಸಿರು ನಿಲ್ಲುವವರೆಗೆ ಥಳಿಸಿ, ಆಸ್ಪತ್ರೆಯ ಹೊರಗೆ ಎಸೆದ ಪಾಪಿಗಳು

ಕಳ್ಳತನದ ಆರೋಪ ಹೊರಿಸಿ ಸಾರಿಗೆ ಸಂಸ್ಥೆಯ ಮ್ಯಾನೇಜರ್​ ಒಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಉಸಿರು ನಿಲ್ಲುವವರೆಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ.

ಕಳ್ಳತನ ಆರೋಪ, ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನು ಕಂಬಕ್ಕೆ ಕಟ್ಟಿಹಾಕಿ ಉಸಿರು ನಿಲ್ಲುವವರೆಗೆ ಥಳಿಸಿ, ಆಸ್ಪತ್ರೆಯ ಹೊರಗೆ ಎಸೆದ ಪಾಪಿಗಳು
ಮ್ಯಾನೇಜರ್ ಶಿವಂ
Follow us
ನಯನಾ ರಾಜೀವ್
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 13, 2023 | 1:49 PM

ಕಳ್ಳತನದ ಆರೋಪ ಹೊರಿಸಿ ಸಾರಿಗೆ ಸಂಸ್ಥೆಯ ಮ್ಯಾನೇಜರ್​ ಒಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಉಸಿರು ನಿಲ್ಲುವವರೆಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. 32 ವರ್ಷದ ಶಿವಂ ಜೋಹ್ರಿ ಸಾರಿಗೆ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಅವರ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ ಹತ್ಯೆ ಮಾಡಿ ಬಳಿಕ ಶವವನ್ನು ಆಸ್ಪತ್ರೆಯ ಮುಂಭಾಗ ಎಸೆದು ಬಂದಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಏಳು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬ ರಾಡ್​ನಿಂದ ಪದೇ ಪದೇ ಅವರಿಗೆ ಹೊಡೆಯುತ್ತಿರುವ ದೃಶ್ಯವನ್ನು ಆ ವಿಡಿಯೋದಲ್ಲಿ ನೋಡಬಹುದು.

ಪೊಲೀಸರ ಪ್ರಕಾರ, ಮಂಗಳವಾರ ರಾತ್ರಿ ಶಿವಂ ಅವರ ದೇಹವನ್ನು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಎಸೆದು ಹೋಗಲಾಗಿತ್ತು. ಅವರ ಕುಟುಂಬ ಸದಸ್ಯರಿಗೆ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು. ಪೊಲೀಸ್ ಅಧಿಕಾರಿಯೊಬ್ಬರು ಆಸ್ಪತ್ರೆಯಲ್ಲಿ ದೇಹವನ್ನು ಪರೀಕ್ಷಿಸಿದಾಗ, ಅವರು ವಿದ್ಯುದಾಘಾತದಿಂದ ಮೃತಪಟ್ಟಿಲ್ಲ ಅವರ ದೇಹದ ಮೇಲಿನ ಗಾಯಕ್ಕೂ ಇದಕ್ಕೂ ಯಾವುದೇ ಸಾಮ್ಯತೆ ಇಲ್ಲ ಎಂದು ಹೇಳಿ ತನಿಖೆ ಆರಂಭಿಸಿದ್ದರು.

ಮತ್ತಷ್ಟು ಓದಿ: ಮೈಸೂರು: ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಗ್ರಾಮಸ್ಥರಿಂದ ಥಳಿತ

ಇದುವರೆಗಿನ ತನಿಖೆಯಿಂದ ಶಿವಂ ಕಳೆದ ಏಳು ವರ್ಷಗಳಿಂದ ಸಾರಿಗೆ ಉದ್ಯಮಿ ಬಂಕಿಮ್ ಸೂರಿ ಅವರೊಂದಿಗೆ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಳ್ಳತನದ ಶಂಕೆಯ ಹಲ್ಲೆ ನಡೆಸಲಾಗಿದೆ.

ಕನ್ಹಿಯಾ ಹೊಸೈರಿಯ ಆವರಣದಿಂದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Thu, 13 April 23

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ