AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಬಾಲಾಪರಾಧಿಗಳು ಸೇರಿ ಮೂವರು ಅರೆಸ್ಟ್

ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಒಟ್ಟು ಮೂವರನ್ನು ಬಂಧಿಸುವಲ್ಲಿ ಮಂಡ್ಯ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಬಾಲಾಪರಾಧಿಗಳು ಸೇರಿ ಮೂವರು ಅರೆಸ್ಟ್
ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಬಾಲಾಪರಾಧಿಗಳು ಸೇರಿ ಮೂವರು ಅರೆಸ್ಟ್
TV9 Web
| Edited By: Rakesh Nayak Manchi|

Updated on:Oct 08, 2022 | 9:12 PM

Share

ಮಂಡ್ಯ: ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಒಟ್ಟು ಮೂವರನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.  ಮುಟ್ಟನಹಳ್ಳಿ ಗ್ರಾಮದ ಅಭಿ ಮತ್ತು ಇಬ್ಬರು ಬಾಲ ಅಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜೆಲ್ಲೆ ಮತ್ತು  ರಾಮನಗರ ಜಿಲ್ಲೆಯಲ್ಲಿ ಬೈಕ್​ಗಳನ್ನು ಕಳವು ಮಾಡುತ್ತಿದ್ದ ಈ ಗ್ಯಾಂಗ್ ಅನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸಿದ್ದಾರೆ.  ಆರೋಪಿಗಳಿಂದ ಸುಮಾರು 15 ಲಕ್ಷ ಮೌಲ್ಯದ 30 ಬೈಕ್​​ಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಕಾರ್ಯಾಚರಣೆಗೆ ಎಸ್​ಪಿ ಯತೀಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾಲ್ವರು ಸುಲಿಗೆಕೋರರ ಬಂಧನ

ಬೆಳಗಾವಿ: ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ನಿಪ್ಪಾಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಕಾಂಬಳೆ(25), ಅವಧೂತ ಕೋಳಿ(25), ಅಕ್ಷಯ್ ಕೊಂಡಗೇರಿ(29), ಪಂಕಜ್ ಕೋಳಿ(25) ಎಂಬ ಆರೊಪಿಗಳನ್ನು ಬಂಧಿಸಿದ ಪೊಲಿಸರು, ಸುಲಿಗೆ ಮಾಡಿದ 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಸಹಿತ ಕೃತ್ಯಕ್ಕೆ ಬಳಸಿದ 2 ಬೈಕ್​ಗಳು, 4 ಮೊಬೈಲ್​​ಗಳನ್ನು  ವಶಕ್ಕೆ ಪಡೆದಿದ್ದಾರೆ. ಏಪ್ರಿಲ್​ನಲ್ಲಿ ದೋಂಡಿರಾಮ್ ವಿಷ್ಣು ಕಾಂಬಳೆ ಎಂಬುವರಿಂದ ಚಿನ್ನ-ಬೆಳ್ಳಿ ಕದ್ದು ಆರೋಪಿಗಳು ಪರಾರಿಯಾಗಿದ್ದರು.

ಬಸ್ ಹಾಗೂ ಬೈಕ್ ಮುಖಾಮುಖಿ; ಓರ್ವ ಸಾವು

ಬೆಳಗಾವಿ: ಸರ್ಕಾರಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಸಮೀಪ ನಡೆದಿದೆ. ಸತ್ತಿ ಮಾರ್ಗವಾಗಿ ಜಮಖಂಡಿಯಿಂದ ಅಥಣಿ ಕಡೆ ಬರುತ್ತಿರುವ ಬಸ್​ಗೆ ಕೆಎಂಎಫ್ ಡೈರಿ ಮುಂದೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್​ನಲ್ಲಿದ್ದ ಆನಂದ ಯಲ್ಲಪ್ಪ ವಟ್ಟನ್ನವರ (42) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಂಜುನಾಥ್ ಗಂಗಪ್ಪ ನಿಡೋಣಿ (25) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆರೆಗೆ ಇಳಿದಿದ್ದ ಇಬ್ಬರು ಬಾಲಕರ ಸಾವು

ಹಾಸನ: ಈಜು ಬಾರದಿದ್ದರೂ ಕೆರೆಗೆ ಇಳಿದಿದ್ದ ಇಬ್ಬರು ಬಾಲಕರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರದಲ್ಲಿ ನಡೆದಿದೆ. ದಸರಾ ರಜೆ ಹಿನ್ನೆಲೆ ಆಕಾಶ್​(13), ಲೋಕೇಶ್​(13) ಮತ್ತು ಇನ್ನೊಬ್ಬ ಬಾಲಕ ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥಪುರ ಗ್ರಾಮದ ಸಮೀಪವಿದ್ದ ಕೆರೆಯೊಂದರಲ್ಲಿ  ಈಜಲು ಹೋಗಿದ್ದಾರೆ. ಆದರೆ ಈಜಲು ಗೊತ್ತಿಲ್ಲ ಬಾಲಕರ ಪೈಕಿ ಆಕಾಶ್​ ಮತ್ತು ಲೋಕೇಶ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Sat, 8 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು