AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಮಾರಿದ ದುಡ್ಡಿಗಾಗಿ ಹೆತ್ತವರ ಬಳಿ ಕಿರಿಕ್; ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಂದೆಯ ಬರ್ಬರ ಹತ್ಯೆ

ವಯಸ್ಸಾದ ತಂದೆ-ತಾಯಿಗಳಿಗೆ ಆಧಾರವಾಗಬೇಕಾದ ಅದೊಬ್ಬ ಮಗ, ಹೆತ್ತವರಿಗೆ ಮುಳುವಾಗಿದ್ದ. ಜಮೀನು ಮಾರಿದ ದುಡ್ಡಿಗಾಗಿ ಪ್ರತಿನಿತ್ಯ ತಂದೆ-ತಾಯಿಗೆ ಪೀಡಿಸುತ್ತಿದ್ದ. ನಿನ್ನೆ(ಫೆ.26) ರಾತ್ರಿ ಸಹ ಹಣಕ್ಕಾಗಿ ಪೀಡಿಸಿದ್ದ ಆತ, ವಯಸ್ಸಾದ ತಂದೆ-ತಾಯಿಯನ್ನ ಅಟ್ಟಾಡಿಸಿಕೊಂಡು ಹೊಡೆದು, ನಂತರ ತಂದೆಯ ಕಥೆಯನ್ನೇ ಮುಗಿಸಿದ್ದಾನೆ. ಆತನ ಕ್ರೂರತನದಿಂದ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಹೆತ್ತಮ್ಮ ಆಸ್ಪತ್ರೆಯ ಪಾಲಾದ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಮೀನು ಮಾರಿದ ದುಡ್ಡಿಗಾಗಿ ಹೆತ್ತವರ ಬಳಿ ಕಿರಿಕ್; ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಂದೆಯ ಬರ್ಬರ ಹತ್ಯೆ
ಆರೋಪಿ ಮಗ, ಮೃತ ತಂದೆ
ಪ್ರಶಾಂತ್​ ಬಿ.
| Edited By: |

Updated on: Feb 27, 2024 | 8:43 PM

Share

ಮಂಡ್ಯ, ಫೆ.27: ಜಮೀನು ಮಾರಿದ ದುಡ್ಡು ಹಾಗೂ ಆಸ್ತಿಯ ವಿಚಾರಕ್ಕೆ ಸ್ವಂತ ತಂದೆಯನ್ನೇ ಪಾಪಿ ಮಗನೊಬ್ಬ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ(Mandya) ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ(65) ಮಗನಿಂದಲೇ ಹತ್ಯೆಯಾದ ದುರ್ದೈವಿ ತಂದೆ. ಇನ್ನು ಮಗನ ಕ್ರೌರ್ಯಕ್ಕೆ ತಾಯಿ ಮಹದೇವಮ್ಮ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಹದೇವಮ್ಮ ಸ್ಥಿತಿ ಚಿಂತಾಜನಕವಾಗಿದೆ.

ಮೂಲತಃ ರಾಮನಗರ ಜಿಲ್ಲೆಯವರಾದ ನಂಜಪ್ಪ ಹಾಗೂ ಮಹದೇಮಮ್ಮ, ಹತ್ತು ವರ್ಷದ ಹಿಂದೆ ಸುಂಡಹಳ್ಳಿ ಗ್ರಾಮಕ್ಕೆ ಬಂದು ನೆಲೆಸಿದ್ದರು. ತಮಗೆ ಇದ್ದ ಜಮೀನನ್ನ 20 ಲಕ್ಷ ರೂ.ಗೆ ಮೂರು ತಿಂಗಳ ಹಿಂದೆ ಮಾರಾಟ ಮಾಡಿ, ಅದರಲ್ಲಿ ಮಗ ಮಹದೇವ್​ಗೆ ಮೂರು ಲಕ್ಷ ಹಾಗೂ ಇನ್ನೊಬ್ಬಳು ಮಗಳಿಗೆ ಮೂರು ಲಕ್ಷ ಕೊಟ್ಟು, ಉಳಿದ ಹಣವನ್ನ ತಮ್ಮ ಅಕೌಂಟ್​ಗೆ ಹಾಕಿಕೊಂಡಿದ್ದರು. ಇದರ ಜೊತೆಗೆ ಸುಂಡಹಳ್ಳಿ ಗ್ರಾಮದಲ್ಲಿ ಇದ್ದ ಮೂರು ಗುಂಟೆ ಜಮೀನನ್ನ ಮಗಳ ಹೆಸರಿಗೆ ಬರೆಯಲು ಸಹ ಮುಂದಾಗಿದ್ದರು. ಇದರಿಂದ ಕುಪಿತನಾಗಿದ್ದ ಆರೋಪಿ ಮಹದೇವ್, ಬ್ಯಾಂಕ್​ನಲ್ಲಿ ಇರುವ ಹಣವನ್ನ ಕೊಡುವಂತೆ ಪದೇ ಪದೇ ಪೀಡಿಸುತ್ತಿದ್ದ.

ಇದನ್ನೂ ಓದಿ:ಸಹೋದರನ ಹತ್ಯೆಯ ಸೇಡು, ಹಾಡುಹಗಲೇ ರೌಡಿಶೀಟರ್​ ಬರ್ಬರ ಹತ್ಯೆ; ಆರು ಜನ ಆರೋಪಿಗಳ ಬಂಧನ

ಅದರಂತೆ ಬಿಡದಿಯಲ್ಲಿ ವಾಸವಾಗಿದ್ದ ಈತ ನಿನ್ನೆ(ಫೆ.26) ರಾತ್ರಿ ಸಹಾ ಬಂದು ಮನೆಗೆ ಬಾಗಿಲು ತಟ್ಟಿದ್ದಾನೆ. ಬಾಗಿಲು ತೆಗೆಯದೇ ಇದ್ದಿದ್ದಕ್ಕೆ ಕಿಟಿಕಿ ಗ್ಲಾಸ್​ಗಳನ್ನ ಒಡೆದು ಹಾಕಿ ನಂತರ ಏಣಿ ಹಾಕಿ ಮನೆಯ ಶೀಟ್​ಗಳ ಮೇಲೆ ಹತ್ತಿ, ಶೀಟ್ ಮುರಿದು ಒಳಗೆ ಹೋಗಿದ್ದಾನೆ. ಆ ನಂತರ ಮನೆಯಿಂದ ಹೊರಗೆ ಬಂದ ತಂದೆ ಹಾಗೂ ತಾಯಿಯನ್ನ ಅಟ್ಟಾಡಿಸಿಕೊಂಡು ದೊಣ್ಣೆಯಿಂದ ಮನಸ್ಸೋ ಇಚ್ಛೆ ಹೊಡೆದಿದ್ದಾನೆ. ಬಳಿಕ ಕಲ್ಲು ತೆಗೆದುಕೊಂಡು ತಂದೆ ನಂಜಪ್ಪ ತಲೆಯ ಮೇಲೆ ಹಾಕಿದ್ದಾನೆ. ಹೀಗಾಗಿ ನಂಜಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ತಾಯಿ ಮಹದೇವಮ್ಮ ಮೇಲೂ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬೆಳಗಿನ ಜಾವ ಮೃತದೇಹವನ್ನ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಆರೋಪಿ ಮಹಾದೇವ್​ ಮೊದಲ ಹೆಂಡತಿ ಸತ್ತ ನಂತರ ಎರಡನೇ ಮದುವೆಯಾಗಿ ಆಕೆಯ ಜೊತೆ ರಾಮನಗರದ ಬಿಡದಿಯಲ್ಲಿ ವಾಸವಾಗಿದ್ದ. ಮಂಡ್ಯ ಗ್ರಾಮಾಂತರ ಠಾಣೆಯ ಎಮ್​ಒಬಿ ಆಗಿರುವ ಇತ, ಹಲವು ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದಾನೆ. ಜಮೀನು ಮಾರಿದ ದುಡ್ಡಿಗಾಗಿ ಪದೇ ಪದೇ ಹೆತ್ತ ತಂದೆ-ತಾಯಿ ಕಿರುಕುಳ ನೀಡುತ್ತಾ, ತನ್ನ ಅಕ್ಕನಿಗೆ ಜಮೀನು ಬರೆಯದಂತೆ ಸಾಕಷ್ಟು ಒತ್ತಡ ಕೂಡ ಹಾಕುತ್ತಿದ್ದ. ಆದರೆ, ನಿನ್ನೆ ರಾತ್ರಿ ತನ್ನ ಹೆಂಡತಿ ಜೊತೆ ಕುಡಿದುಕೊಂಡು ಬಂದಿದ್ದ ಆರೋಪಿ ಮಹದೇವ. ತನ್ನ ತಂದೆಯ ಜೀವವನ್ನ ತೆಗೆದು, ತಾಯಿಯ ಮೇಲೆ ಕ್ರೌರ್ಯ ಮೆರೆದು ಎಸ್ಕೇಪ್ ಆಗಿದ್ದಾನೆ.

ಇನ್ನು ಘಟನೆ ನಂತರ ಮಂಡ್ಯ ಎಸ್ ಪಿ ಯತೀಶ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಒಟ್ಟಾರೆ ವಯಸ್ಸಾದ ಸಮಯದಲ್ಲಿ ತಂದೆ-ತಾಯಿಗೆ ಆರೈಕೆ ಮಾಡುತ್ತಾ ಜೊತೆಯಲ್ಲಿ ಇರಬೇಕಾದ ಮಗ ಹಣದಾಸೆಗೆ ತಂದೆಯ ಕಥೆಯನ್ನೇ ಮುಗಿಸಿದ್ದಾನೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್