AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತು

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಸಾಬೀತಾಗಿದೆ.

ಮಂಡ್ಯ: ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತು
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ (ಫೋಟೋ: ಕೃತ್ಯ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ)
TV9 Web
| Edited By: |

Updated on:Oct 14, 2022 | 11:03 AM

Share

ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಟ್ಯೂಷನ್​ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಈ ವಿಚಾರ ಬಾಲಕಿಯ ಮನೆಗೆ ತಿಳಿದರೆ ಪರಿಸ್ಥಿತಿ ಬೇರೆಯದ್ದೇ ಆಗುತ್ತದೆ ಎಂಬ ಭಯದಿಂದ ಬಾಲಕಿಯ ತಲೆಗೆ ರಾಡ್​ನಿಂದ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿಕೊಟ್ಟ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇದೀಗ ವರದಿ ಪೊಲೀಸರ ಕೈ ಸೇರಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿ ಆದಾರದ ಮೇಲೆ ನ್ಯಾಯಾಲಯ ಅನುಮತಿ ಪಡೆದು ಪೋಕ್ಸೊ ಕಾಯ್ದೆ ದಾಖಲಿಸಿದ ಮಳವಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಏನಿದು ಪ್ರಕರಣ?

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Fri, 14 October 22

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್