AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತು

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಸಾಬೀತಾಗಿದೆ.

ಮಂಡ್ಯ: ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತು
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ (ಫೋಟೋ: ಕೃತ್ಯ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ)
TV9 Web
| Edited By: Rakesh Nayak Manchi|

Updated on:Oct 14, 2022 | 11:03 AM

Share

ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಟ್ಯೂಷನ್​ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಈ ವಿಚಾರ ಬಾಲಕಿಯ ಮನೆಗೆ ತಿಳಿದರೆ ಪರಿಸ್ಥಿತಿ ಬೇರೆಯದ್ದೇ ಆಗುತ್ತದೆ ಎಂಬ ಭಯದಿಂದ ಬಾಲಕಿಯ ತಲೆಗೆ ರಾಡ್​ನಿಂದ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿಕೊಟ್ಟ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇದೀಗ ವರದಿ ಪೊಲೀಸರ ಕೈ ಸೇರಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿ ಆದಾರದ ಮೇಲೆ ನ್ಯಾಯಾಲಯ ಅನುಮತಿ ಪಡೆದು ಪೋಕ್ಸೊ ಕಾಯ್ದೆ ದಾಖಲಿಸಿದ ಮಳವಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಏನಿದು ಪ್ರಕರಣ?

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Fri, 14 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ