AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾಳನ್ನು ಕೊಂದು ಬಿಟ್ನಾ ಯುವಕ? ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಶಿಕ್ಷಕಿ ಸಾವು

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ‌ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿ ದೀಪಿಕಾರ ಶವ ಪತ್ತೆಯಾಗಿತ್ತ್ತು. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನು ಇದು ಕೊಲೆಯೋ ಅಥವಾ ಸಹಜ ಸಾವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಹಲವು ಅಂಶಗಳು ಬಹಿರಂಗಗೊಂಡಿವೆ. ಏನವು ಇಲ್ಲಿದೆ ಓದಿ..

ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾಳನ್ನು ಕೊಂದು ಬಿಟ್ನಾ ಯುವಕ? ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಶಿಕ್ಷಕಿ ಸಾವು
ಮೃತ ದೀಪಿಕಾ
ಪ್ರಶಾಂತ್​ ಬಿ.
| Edited By: |

Updated on: Jan 23, 2024 | 1:10 PM

Share

ಮಂಡ್ಯ, ಜನವರಿ 23: ಪಾಂಡವಪುರ (Pandavapur) ತಾಲೂಕಿನ ಮೇಲುಕೋಟೆ (Melkote)‌ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿ ದೀಪಿಕಾ (28) ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಾಣಿಕ್ಯನಹಳ್ಳಿ ಗ್ರಾಮದ ನಿವಾಸಿಯಾಗಿರುವ ಶಿಕ್ಷಕಿ ದೀಪಿಕಾಳನ್ನು ಇದೇ ಗ್ರಾಮದ ಓರ್ವ ಯುವಕ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ. ಮೃತ ದೀಪಿಕಾಳಿಗೆ ಯುವಕ ಅಕ್ಕ ಅಕ್ಕ ಎನ್ನುತ್ತಲೆ ಹತ್ತಿರವಾಗಿದ್ದನು. ಒಂದೇ ಊರಿನವನಾದ್ದರಿಂದ ದೀಪಿಕಾ ಆತನನ್ನು ಸಲುಗೆಯಿಂದ ಮಾತನಾಡಿಸುತ್ತಿದ್ದರು.

ಯಾವಾಗ ಶಿಕ್ಷಕಿ ದೀಪಿಕಾ ಮೃತದೇಹ ಪತ್ತೆಯಾಯಿತು ಅಂದಿನಿಂದ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಶಿಕ್ಷಕಿ ದೀಪಿಕಾ ಅವರ ಮೊಬೈಲ್​ ಪರಿಶೀಲಿಸಿದಾಗ ಕೊನೆಯದಾಗಿ ಕರೆ ಬಂದಿದ್ದು ಇದೇ ಯುವಕನದ್ದಾಗಿದೆ. ಅಲ್ಲದೆ ಶ್ರೀರಂಗಪಟ್ಟಣದ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಹಾಗೂ ಯುವಕ ಜಗಳವಾಡುತ್ತಿದ್ದನ್ನು ಪ್ರವಾಸಿಗರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. 13 ಸೆಕೆಂಡ್‌ಗಳ ಈ ವಿಡಿಯೋವನ್ನು ಪ್ರವಾಸಿಗರು ಪೊಲೀಸರಿಗೆ ನೀಡಿದ್ದಾರೆ. ಇದರಿಂದ ಅನುಮಾನಗೊಂಡ ದೀಪಿಕಾ ಪೋಷಕರು ಅಕ್ಕ ಅಕ್ಕ ಎನ್ನುತ್ತ ಹತ್ತರಿವಾಗಿದ್ದ ಯುವಕನೇ ದೀಪಿಕಾರನ್ನು ಕೊಲೆ ಮಾಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದೀಪಿಕಾ ಶವ ಸಿಕ್ಕಿದ್ದು ಹೇಗೆ?

ದೀಪಿಕಾ ಮೇಲುಕೋಟೆಯ ಎಸ್​ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ಶಾಲೆಗೆ ಹೋದವರು ಸಂಜೆ ಮನೆಗೆ ವಾಪಸ್​ ಆಗಿಲ್ಲ. ಹುಡುಕಾಟ ನಡೆಸಿದ್ದಾರೆ. ಹೀಗೆ ನಿನ್ನೆ (ಜ.22) ಸಂಜೆ ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ ಆಕೆಯ ಡಿಯೋ ಸ್ಕೂಟರ್ ಪತ್ತೆಯಾಗಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆ ಆರೋಪ

ಸ್ಕೂಟರ್ ಪತ್ತೆಯಾದ ಸ್ಥಳದ ಸುತ್ತಮುತ್ತ ಹುಡುಕಾಟ ನಡೆಸಿದಾಗ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಕಾಣಿಸಿದೆ. ಕುಟುಂಬಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ತಹಶಿಲ್ದಾರ್​ ಮೃತದೇಹದ ಹೊರತೆಗೆದಾಗ, ಶವ ದೀಪಿಕಾಳದ್ದಾಗಿದೆ. ಬಳಿಕ ಪೊಲೀಸರು ಮರಣೋತ್ತರ ಪರೀಕ್ಷೆಗೆ ಶವ ರವಾನೆ ಮಾಡಿದ್ದಾರೆ. ಆರೋಪಿ ಪತ್ತೆಗೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು