AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್​​​

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸಿಸಿಕ್ಯಾಮರಾ ದೃಶ್ಯಾವಳಿ ಆಧರಿಸಿ ಚಂದ್ರಶೇಖರ್​ನನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್​​​
ಚಂದ್ರಶೇಖರ್​ ಬಂಧಿತ ಆರೋಪಿ
ಪ್ರಶಾಂತ್​ ಬಿ.
| Edited By: |

Updated on:Nov 30, 2023 | 9:57 AM

Share

ಮಂಡ್ಯ ನ.30: ಬೈಕ್​​ನಲ್ಲಿ (Bike) ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ (Mandya) ಪೂರ್ವ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ ಬೈಕ್​ನಲ್ಲಿ ಬಂದು ರಸ್ತೆಯಲ್ಲಿ ಹೋಗ್ತಿದ್ದ ಒಂಟಿ ಮಹಿಳೆಯರಿಗೆ ಕಿರುಕುಳ‌ ಕೊಡುತ್ತಿದ್ದನು. ಚಂದ್ರಶೇಖರ ಕಳೆದ ಒಂದು ತಿಂಗಳಿಂದ ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದನು.

ಬುಧವಾರ (ನ.29)ರ ಸಂಜೆ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಸಿಸಿಕ್ಯಾಮರಾ ದೃಶ್ಯಾವಳಿ ಆಧರಿಸಿ ಚಂದ್ರಶೇಖರ್​ನನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ: ಕಿಡಿಗೇಡಿ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ವಿಜಯನಗರ: ನಕಲಿ ವೈದ್ಯನ ಬಂಧನ

ವಿಜಯನಗರ: ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ವೈದ್ಯನೆಂದು ಸುಳ್ಳು ಹೇಳಿ ಕ್ಲಿನಿಕ್​ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಮ್ಮದ್ ರಫಿ (50) ಬಂಧಿತ ನಕಲಿ ವೈದ್ಯ. ಮಹಮ್ಮದ್ ರಫಿ ಶಿವಪುರ ಗ್ರಾಮದ ತನ್ನ ಮನೆಯಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದನು. ಇತನ ವಿರುದ್ಧ ಹಲವು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ ಬಂಧಿಸಿದ್ದಾರೆ.

ವಿಜಯನಗರ ಜಿಲ್ಲೆ ಆರೋಗ್ಯ ಅಧಿಕಾರಿ ಡಾ. ಶಂಕರ್ ನಾಯ್ಕ್, ಕೂಡ್ಲಿಗಿ ಸಿಪಿಐ ಸುರೇಶ್ ತಳವಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿಯ ವೇಳೆ ಅನೇಕ ಸಿರಿಂಜ್​ಗಳು, ಮಾತ್ರೆಗಳು, ಸ್ಟೆತಸ್ಕೋಪ್ ಸೇರಿದಂತೆ ಇತರೆ ವೈದ್ಯಕೀಯ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 9:56 am, Thu, 30 November 23

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?